ಅತಿವೃಷ್ಟಿಯಿಂದಾದ ತೊಗರಿ ಸೇರಿದಂತೆ ಮುಂಗಾರು ಬೆಳೆ ಹಾನಿಗೆ ಎಕರೆಗೆ 25 ಸಾವಿರ ನೀಡಲು ಅಂಬಾರಾಯ ಅಷ್ಠಗಿ‌| ಆಗ್ರಹ

ಕಲಬುರಗಿ : ಅತಿವೃಷ್ಟಿಯಿಂದಾದ ತೊಗರಿ ಸೇರಿದಂತೆ ಮುಂಗಾರು ಬೆಳೆ ಹಾನಿಗೆ ಎಕರೆಗೆ 25,000 ಸಾವಿರ ರೂ.ಗಳ ಪರಿಹಾರ ನೀಡಲು ಮುಖಂಡ ಅಂಬಾರಾಯ ಅಷ್ಠಗಿ‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು ಅವರು ನಗರದ ಪತ್ರಿಕಾ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಗಸ್ಟ್ ತಿಂಗಳನಲ್ಲಿ, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮುಂಗಾರು ಬೆಳೆಗಳಾದ, ತೋಗರಿ, ಹೆಸರು, ಉದ್ದು, ಸೋಯಾಬೀನ್, ಎಳ್ಳು, ಹತ್ತಿ, ಸೇರಿದಂತೆ ಇನ್ನೂ ಅನೇಕ ಬೆಳೆಗಳು ಇತ್ತಿಚಿನ ಭೀಕರ ಮಳೆಗೆ ಸಂಪೂರ್ಣ ನಾಶವಾಗಿವೆ. ಸುಮಾರು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ…

Read More

ಕೇಂದ್ರ ನೀತಿ ಆಯೋಗದ ಮಹತ್ವಾಕಾಂಕ್ಷಿ ತಾಲೂಕ ಕಾರ್ಯಕ್ರಮ : ಕಾಳಗಿ ತಾಲೂಕಿಗೆ ಎರಡನೆಯ ಸ್ಥಾನ ಸಚಿವ ಪ್ರಿಯಾಂಕ್ ಖರ್ಗೆ ಹರ್ಷ

ಕಲಬುರಗಿ : ವಿವಿಧ ಐದು ವಲಯಗಳಲ್ಲಿ ಸೂಚ್ಯಂಕಗಳಲ್ಲಿ ಗಣನೀಯ ಅಭಿವೃದ್ದಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಕೈಗೊಂಡ ಕ್ರಮಗಳ ಕಾರ್ಯಸಾಧನೆಗಾಗಿ ಕಾಳಗಿ ತಾಲೂಕು ಡೆಲ್ಟಾ ಪಟ್ಟಿಯಲ್ಲಿ ದಕ್ಷಿಣ ಭಾರತದಲ್ಲಿಯೇ ಎರಡನೆಯ ಸ್ಥಾನ ಪಡೆದಿದ್ದು ಇದು ಹೆಮ್ಮೆಯ ವಿಷಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಅಚಿವ ಪ್ರಿಯಾಂಕ್ ಖರ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಕೇಂದ್ರದ ನೀತಿ ಆಯೋಗವು ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೌಶಲ್ಯ, ಅಪೌಷ್ಠಿಕತೆ, ಆರೋಗ್ಯ,…

Read More

ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯಲ್ಲಿ ವಿದ್ಯಾರ್ಥಿಗಳು ಹಾಗೂ ನಾಗರಿಕರಿಗೆ ಪರಿಸರ ಜಾಗೃತಿ ಅರಿವು ಮೂಡಿಸುವುದಕ್ಕಾಗಿ ಮಣ್ಣಿನ ಗಣಪತಿಗಳನ್ನು ತಯಾರಿಸಿ ಅವುಗಳನ್ನು ಕೊಂಡುಕೊಳ್ಳುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು .ಹಾಗೂ ವಿದ್ಯರ್ಥಿನಿಯರಿಗೆ ಕಲಿಕೆಯೊಂದಿಗೆ ಗಳಿಕೆಯ ಪರಿಕಲ್ಪನೆಯನ್ನು ಮೂಡಿಸಿ ಅವರು ತಮ್ಮ ಭಾವು ಜೀವನದಲ್ಲಿ ಅವಲಂಬಿತ ಬದುಕು ಬಾಳದೇ ಸ್ವಾವಲಂಬನೆಯ ಜೀವನ ರೂಪಸಿಕೊಳ್ಳಲು ಅವರಿಗೆ ಮಾರ್ಗದರ್ಶನ ಮಾಡುವುದು ಇದರ ಉದ್ದೇಶವಾಗಿತ್ತು . ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ರಾಜೇಂದ್ರ ಕೊಂಡಾ ಹಾಗೂ,ಬೋಧಕ- ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿನಿಯರಿಗೆ…

Read More

ಪರಿಸರ ಸ್ನೇಹಿ ಗಣಪತಿ ವಿಗ್ರಹಗಳ ತಯಾರಿಕೆ

ಕಲಬುರಗಿ: ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು  ಮಹಾವಿದ್ಯಾಲಯದ ಆವರಣದಲ್ಲಿ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳು ತಯಾರಿಕೆ ಮಾಡಿದರು. ಈ ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ರಾಜೇಂದ್ರ ಕೊಂಡಾ ಅವರು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಇಂದು ಪರಿಸರ ರಕ್ಷಣೆ ಮಾಡುವದು ನಮ್ಮೆಲ್ಲರ ಹೊಣೆ, ನಾವು ಆದಷ್ಟು ಪರಿಸರ ರಕ್ಷಣೆ ಮಾಡಬೇಕು. ಈ ಕಾರಣಕ್ಕಾಗಿಯೇ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಕಲಿಕೆಯ ಜೊತೆಗೆ ಅವರಲ್ಲಿರುವ ಕೌಶಲ್ಯ ಅಭಿವೃದ್ಧಿಗಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು…

Read More

ಶ್ರಾವಣ ಮಾಸದ ನಿಮಿತ್ಯ ಅನ್ನ ದಾಸೋಹ ಕಾರ್ಯಕ್ರಮ

ಕಲಬುರಗಿ : ಸಂಮಿತ್ರ ಸೇವಾ ಸಹಕಾರ ಸಂಘದ ವತಿಯಿಂದ ಶ್ರಾವಣ ಮಾಸದ ನಿಮಿತ್ಯ ಅನ್ನ ದಾಸೋಹ ಕಾರ್ಯಕ್ರಮಕ್ಕೆ ಪಟ್ಟಣ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಂತೋಷ ಪಾಟೀಲ್ ಧಣ್ಣೂರ್ ಅವರು ಚಾಲನೆ ನೀಡಿದರು. ದಾಸೋಹ ಸೇವೆಯ ಪವಿತ್ರ ಕಾರ್ಯದಲ್ಲಿ ಸಂಘದ ಅಧ್ಯಕ್ಷ ಪ್ರಕಾಶ್ ರೋಳೆ, ಉಪಾಧ್ಯಕ್ಷರಾದ ವ್ಹಿ ಎ ಪಾಟೀಲ್ ಸಿಂದಗಿ, ಕಾರ್ಯದರ್ಶಿ ಚನ್ನಪ್ಪ ಪಾಟೀಲ್, ಸಹಕಾರ್ಯದರ್ಶಿ  ಮಡಿವಾಳ ಭೈರಾಮಡಗಿ, ನಿರ್ದೇಶಕ ನಾಗರಾಜ್ ಬಂಗೂರ್, ಸಂತೋಷ ಬೆಣ್ಣೂರ್, ರಾಚಪ್ಪ ರೋಳೆ, ಕೆ ಸಿ ರೋಳೆ, ಅಸ್ಲಾಂ ಸಿಂದಗಿ,…

Read More

ರಾಘವೇಂದ್ರ ನಗರ ಪೊಲೀಸರ ಕಾರ್ಯಾಚರಣೆ | 2.75 ಲಕ್ಷ ರೂ ಮೌಲ್ಯದ ವಿವಿಧ ಕಂಪನಿಯ 06 ದ್ವಿ-ಚಕ್ರ ವಾಹನಗಳ ವಶಕ್ಕೆ

ಕಲಬುರಗಿ : ರಾಘವೇಂದ್ರ ನಗರ ಪೊಲೀಸರ ಕಾರ್ಯಾಚರಣೆ ನಡೆಸಿ, 2,75,000/-ರೂ ಮೌಲ್ಯದ ವಿವಿಧ ಕಂಪನಿಯ 06 ದ್ವಿ-ಚಕ್ರ ವಾಹನಗಳ ವಶಕ್ಕೆ ಪಡೆದು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿತನಾದ ಗುಲಾಮ ಅಲಿ ಹುಸೇನಿ ಕಾಲೋನಿ ಚಿದ್ರಿ ರೋಡ ಬೀದರ ಇತನನ್ನು ವಶಕ್ಕೆ ಪಡೆದುಕೊಂಡು ಸದರಿ ಆರೋಪಿತನಿಗೆ ಕೂಲಂಕುಶವಾಗಿ ವಿಚಾರಣೆಗೊಳಪಡಿಸಿದಾಗ ಆರೋಪಿತನು ಕಲಬುರಗಿ ನಗರದ ವಿವಿಧ ಸ್ಥಳದಲ್ಲಿ ಕಳ್ಳತನ ಮಾಡಿದ ಬಗ್ಗೆ ತನ್ನೊಪ್ಪಿಕೊಂಡಿದ್ದು, ಆರೋಪಿತನಿಂದ ಒಟ್ಟು 06 ವಿವಿಧ ಕಂಪನಿಯ ಮೋಟರ್ ಸೈಕಲ್‌ಗಳು 2,75,000/- ರೂಪಾಯಿ ಮೌಲ್ಯದ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ….

Read More

ನೈಸರ್ಗಿಕ ವಿಧಾನಗಳ ಅಳವಡಿಸಿ ಹತ್ತಿ ಕೃಷಿಯಲ್ಲಿ ರಾಸಾಯನಿಕಗಳ ಬಳಕೆ ಕಡಿಮೆ ಮಾಡಲು ಕರೆ

ಯಾದಗಿರಿ, ಸಹಜ ಸಮೃದ್ಧ, ಮತ್ತು ಎಲ್‌ಡಿಸಿ (LDC) ಇವರ ಸಂಯುಕ್ತ ಆಶ್ರಯದಲ್ಲಿ, ಯಾದಗಿರಿ ತಾಲ್ಲೂಕಿನ ಸೈದಾಪುರ ಹೋಬಳಿಯ ಸಂಗವಾರ ಗ್ರಾಮದಲ್ಲಿ ಹತ್ತಿಯಲ್ಲಿ ಗುಲಾಬಿ ಕಾಯಿ ಕೊರಕ ನಿರ್ವಹಣೆ ಕುರಿತು “ಜಾಗೃತಿ” ಕಾರ್ಯಕ್ರಮ ಏರ್ಪಾಡು ಮಾಡಲಾಗಿತ್ತು. ಸುಸ್ಥಿರ ಮತ್ತು ನೈಸರ್ಗಿಕ ವಿಧಾನಗಳ ಮೂಲಕ ರಾಸಾಯನಿಕಗಳ ಬಳಕೆ ಕಡಿಮೆ ಮಾಡುವ ಅರಿವಿನ ಕಾರ್ಯಕ್ರಮದ ಭಾಗವಾಗಿ ತರಬೇತಿ ನೀಡಲಾಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಎಲ್‌ಡಿಸಿ ಸಂಸ್ಥೆಯ ಸಂಶೋಧನಾ ಎನಾಲಿಸ್ಟ್ ಗಿರೀಶ್ ಮಾತನಾಡಿ ” ಎಲ್. ಡಿ. ಸಿ ಸಂಸ್ಥೆ ಹತ್ತಿ ಕೃಷಿಯಲ್ಲಿ…

Read More

ವಿಭಾಗೀಯ ಉಪಾಧ್ಯಕ್ಷರಾಗಿ ನೀಜಲಿಂಗಪ್ಪ ಕೊರಳ್ಳಿ ಆಯ್ಕೆ.

ಕಲಬುರಗಿ; ವಿಭಾಗೀಯ ರಾಜ್ಯ ಸರಕಾರಿ ನೌಕರರ ಸಂಘದ ವಿಭಾಗೀಯ ಉಪಾಧ್ಯಕ್ಷರಾಗಿ ಪಶು ಸಂಗೋಪನೆ ಇಲಾಖೆಯ ನಿಜಲಿಂಗಪ್ಪ ಕೊರಳ್ಳಿ ಅವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಢಕ್ಷರಿ ಅವರು ಇಂದು ನೇಮಕಗೊಳಿಸಿ ಆದೇಶಿಸಿದ್ದಾರೆ.ರಾಜ್ಯ ಪ್ರಧಾನ ಕಾರ್ಯದರ್ಶಿ ಗಿರಿಗೌಡರ, ರಾಜ್ಯ ಗೌರವಾಧ್ಯಕ್ಷ ಬಸವರಾಜು, ಸಚಿವಾಲಯ ನೌಕರರ ಸಂಘದ ರಾಜ್ಯಾಧ್ಯಕ್ಷ ರಮೇಶ ಸಂಗಾ,ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಜಿಲ್ಲಾ ಕಾರ್ಯದರ್ಶಿ ಮಹೇಶ ಹೂಗಾರ ರಾಜ್ಯ ಪರಿಷತ್ ಸದಸ್ಯರಾದ ಧರ್ಮರಾಯ ಜವಳಿ, ಕಾರ್ಯಾಧ್ಯಕ್ಷ ಚಂದ್ರಕಾಂತ ಏರಿ, ಹಿರಿಯ ಉಪಾಧ್ಯಕ್ಷ…

Read More

ಸುರಪುರ : ಪ್ರಥಮ ಬಾರಿಗೆ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ

ಸುರಪುರ: ನಗರದಲ್ಲಿ ಇದೇ ಮೊದಲ ಬಾರಿಗೆ 11 ದಿನಗಳ ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಲಾಗುವುದು ಎಂದು ಹಿಂದೂ ಮಹಾ ಗಣಪತಿ ಉತ್ಸವ ಸಮಿತಿ ಮುಖಂಡರು ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ತಹಸೀಲ್ದಾರ್ ಕಛೇರಿಗೆ ಹೋಗುವ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಪಕ್ಕದಲ್ಲಿನ ಸ್ಥಳದಲ್ಲಿ ಆಗಸ್ಟ್ 27 ರಂದು ಹಿಂದೂ ಮಹಾ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದೆ ಎಂದು ತಿಳಿಸಿದರು. ಅಲ್ಲದೆ, ಎಲ್ಲಾ ಜಾತಿ,ಮತ, ಧರ್ಮಿಯರು ಹಾಗೂ ಸಾಮೂಹಿಕ ಸಂಘಟನೆಗಳು ಸೇರಿದಂತೆ ಎಲ್ಲರೂ ಆಚರಣೆಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಇತ್ತೀಚಿನ ದಿನಗಳಲ್ಲಿ…

Read More

ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ನೇಮಕಾತಿ ಹಾಗೂ ಬಡ್ತಿ ಯಲ್ಲಿ ಆಗುತ್ತಿರುವ ಅನ್ಯಾಯ ತಡೆಯಲು ಆಗ್ರಹ : ಶಶೀಲ್ ನಮೋಶಿ

ಕಲಬುರ್ಗಿ : ರಾಜ್ಯದಲ್ಲಿ ನೇಮಕಾತಿ ಪ್ರಾಧಿಕಾರಗಳು ವಿಭಿನ್ನ ನಿಯಮಗಳ ಮುಖಾಂತರ ನೇಮಕಾತಿ ಮಾಡುತ್ತಿರುವುದರಿಂದ ಕಲ್ಯಾಣ ಕರ್ನಾಟಕದ ಭಾಗದ 371 ಜೇ ಅಭ್ಯರ್ಥಿಗಳಿಗೆ ನೇಮಕಾತಿ ಹಾಗೂ ಬಡ್ತಿ ಯಲ್ಲಿ ಭಾರಿ ಪ್ರಮಾಣದಲ್ಲಿ ಅನ್ಯಾಯವಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಇಂದು ಸದನದಲ್ಲಿ ಪ್ರಸ್ತಾಪಿಸಿದರು. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಸಂವಿಧಾನ ವಿಶೇಷ ವಿಧಿ 371 ಜೇ ಬಂದನಂತರ ಈ ಭಾಗದ ನೇಮಕಾತಿ ಹಾಗೂ ಬಡ್ತಿ ವಿಷಯಕ್ಕೆ ಸಂಬಂಧಿಸಿದಂತೆ 2016 ರಿಂದ 2025 ರ ವರೆಗೆ ಅನೇಕ…

Read More
error: Content is protected !!