ಶಿಕ್ಷಕ ವೃತ್ತಿ ಎಲ್ಲಾ ವೃತ್ತಿಗಿಂತ ಪವಿತ್ರ- ಪ್ರಕಾಶ್
ಸುರಪುರ: ಜಗತ್ತಿನ ಎಲ್ಲಾ ಹುದ್ದೆಗಳಲ್ಲಿ ಶಿಕ್ಷಕನ ಹುದ್ದೆ ಅತ್ಯಂತ ಮಹತ್ವದ್ದು ಎಲ್ಲಾ ಸ್ಥಾನಗಳಿಗಂತೂ ಹೆಚ್ಚಿನದು ಎಂದು ಬಸವಪ್ರಭು ವಿದ್ಯಾವರ್ಧಕ ಸಂಸ್ಥೆಯ ಮುಖ್ಯಸ್ಥ ಪ್ರಕಾಶ ಅಂಗಡಿ ಕನ್ನೆಳ್ಳಿ ಹೇಳಿದರು, ರಂಗಂಪೇಟೆಯ ಬಸವೇಶ್ವರ ಕಾಲೇಜಿನಲ್ಲಿ ಇಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಹಾಗೂ ಪಿಯುಸಿ ಹಾಗೂ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಿದ್ದು ಈ ದಿನವನ್ನು ವಿದ್ಯಾರ್ಥಿಗಳು ಭಕ್ತಿಯಿಂದ ಅಭಿಮಾನದಿಂದ ಗೌರವದಿಂದ ಆಚರಿಸಬೇಕು…


