ಚಿತ್ತಾಪುರ | ಸೆ.27 ರಂದು ಬಿಗ್ ಬಾಸ್ ವಿನ್ನರ್ ಹನುಮಂತ ಲಂಬಾಣಿ ತಂಡದ ಸಂಗೀತ ರಸಮಂಜರಿ ಕಾರ್ಯಕ್ರಮ

ಕಲಬುರಗಿ : ಚಿತ್ತಾಪುರ ಪಟ್ಟಣದ ಸ್ಟೇಷನ್ ತಾಂಡಾದಲ್ಲಿ 25ನೇ ವರ್ಷದ ನವರಾತ್ರಿ ಬೆಳ್ಳಿ ಮಹೋತ್ಸವ ಅಂಗವಾಗಿ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಜಗದೀಶ ಚವ್ಹಾಣ್ ಅವರು ಪ್ರಕಟಣೆಯಲ್ಲಿ ತಿಳಿಸಿದರು. ಚಿತ್ತಾಪುರ ಸ್ಟೇಷನ್ ತಾಂಡಾದ ದೊಡ್ಡ ಸೇವಾಲಾಲ್ ದೇವಸ್ಥಾನ ಹತ್ತಿರ 25ನೇ ವರ್ಷದ ನವರಾತ್ರಿ , ಬೆಳ್ಳಿ ಮಹೋತ್ಸವ ಅಂಗವಾಗಿ ಚಿತ್ತಾಪುರ ಸ್ಟೇಷನ್ ತಂಡಕ್ಕೆ ಸೆ 27 ರಂದು ಸಾಯಂಕಾಲ 7. 30 ಗಂಟೆಗೆ ಕರ್ನಾಟಕದ ಮನೆ ಮಗ ಬಿಗ್ ಬಾಸ್ ವಿನ್ನರ್ ಎಲ್ಲರ ಪ್ರೀತಿಗೆ…

Read More

ಕಲಬುರಗಿ ಜಿಲ್ಲೆಯ 100 ಅರಿವು ಕೇಂದ್ರಗಳಿಗೆ ಹೊಸ ರೂಪ ಜನರ ಬದುಕಿನ ಭಾಗವಾಗುತ್ತಿರುವ ಗ್ರಾಮೀಣ ಗ್ರಂಥಾಲಯಗಳು

ಗ್ರಾಮೀಣ ಪರಿಸರದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕ್ರಮೇಣ ಒಂದು ಅದ್ಭುತ ಘಟಿಸತೊಡಗಿದೆ. ಗ್ರಾಮೀಣ ಮಕ್ಕಳು, ಯುವಕರು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ಉತ್ಸಾಹದಲ್ಲಿರುವ ಉದ್ಯೋಗಾಕಾಂಕ್ಷಿ ಯುವಕ, ಯುವತಿಯರು, ವಯಸ್ಕರು, ಹಿರಿಯ ನಾಗರಿಕರು ಹೀಗೆ ಯಾವುದೇ ಭೇದ ಭಾವವಿಲ್ಲದೆ ವೈವಿಧ್ಯತೆಯನ್ನು ಹಂಚಿಕೊಳ್ಳುವ ಅರಿವು ಕೇಂದ್ರಗಳೆಂಬ ಜ್ಞಾನದೇಗುಲಗಳು ಜನಪ್ರಿಯಗೊಳ್ಳುತ್ತಿವೆ. ಒಳ ಪ್ರವೇಶಿಸುತ್ತಿದ್ದಂತೆ ಮಾನಸಿಕವಾಗಿ ನೆಮ್ಮದಿ ತರುವ ಪರಿಸರ, ಅವಶ್ಯಕತೆಗೆ ಅನುಗುಣವಾಗಿ ಉಪಯುಕ್ತ ಪುಸ್ತಕಗಳು, ವೃತ್ತಪತ್ರಿಕೆಗಳು, ಮಾಹಿತಿಗಳನ್ನು ಜಾಲಾಡಲು ಡಿಜಿಟಲೀಕರಣದ ವ್ಯವಸ್ಥೆ ಈ ಎಲ್ಲಾ ಸಾಕಾರಗೊಂಡಿರುವ ಗ್ರಾಮೀಣ ಗ್ರಂಥಾಲಯಗಳಾದ ʼಅರಿವು ಕೇಂದ್ರʼಗಳು ಈಗ…

Read More

ರಾಷ್ಟ್ರೀಯ ಸೇವಾ ಯೋಜನೆ ಯ ” ಸಂಸ್ಥಾಪನ ದಿನಾಚರಣೆ”

ಕಲಬುರಗಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ ಕಲಬುರ್ಗಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಯ ” ಸಂಸ್ಥಾಪನ ದಿನಾಚರಣೆ” ಕಾರ್ಯ ಕ್ರಮ ಕೈಗೊಳ್ಳಲಾಯಿತು. ಈ ಕಾರ್ಯಕ್ರಮ ಕ್ಕೆ ಮುಖ್ಯ ಅಥಿತಿಗಳಾಗಿ ಗುಲ್ಬರ್ಗಾ ವಿಶ್ವ ವಿಧ್ಯಾಲಯದ ಕುಲಸಚಿವರಾದ Dr. ರಮೇಶ. ಲಂಡನ್ಕರ್ ರವರು ಕಾರ್ಯ ಕ್ರಮ ವನ್ನು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ದ ಚಾಲನೆ ನೀಡಿದರು.N S S .ಶಿಬಿರಾರ್ಥಿಗಳು ದೇಶದ ಆಸ್ತಿ ಮತ್ತು ನವ ಭಾರತ ನಿರ್ಮಾಣ ಮಾಡುವ…

Read More

ಜಿನೋ-ಸೆಲ್ ಗ್ಯಾಲಕ್ಸಿ -2025 ಪ್ರದರ್ಶನ

ಕಲಬುರಗಿ: ಶ್ರೀಮತಿ ವೀರಮ್ಮ ಗಂಗಾಸಿರಿ ಮಹಿಳಾ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗವು “ಜಿನೋ-ಸೆಲ್ ಗ್ಯಾಲಕ್ಸಿ 2025″ ಎಂಬ ಭವ್ಯ ವಿಜ್ಞಾನ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮವನ್ನು ಡಾ. ಚಂದ್ರಕಲಾ ಪಾಟೀಲ್ ನಿವೃತ್ತ ಪ್ರಾಧ್ಯಾಪಕರು ಇವರು ಉದ್ಘಾಟಿಸಿ ಮಾತನಾಡುತ್ತಾ ಇಂತಹ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಮಕ್ಕಳಿಗೆ ಕಲಿಕೆಯ ಜೊತೆಗೆ ಅವರಲ್ಲಿನ ಸೂಪ್ತ ಪ್ರತಿಭೆ ಹೊರಬರಲು ವೇದಿಕೆ ಕಲ್ಪಿಸಿದಂತಾಗುತ್ತದೆ ಎಂದು ನುಡಿದರು ಈ ಕಾರ್ಯಕ್ರಮವು ಎರಡು ಪ್ರಮುಖ ಮುಖ್ಯಾಂಶಗಳನ್ನು ಒಳಗೊಂಡಿತ್ತು – ವಿದ್ಯಾರ್ಥಿಗಳು ನವೀನ ಮಾದರಿಗಳು ಮತ್ತು ಪ್ರದರ್ಶನಗಳನ್ನು…

Read More

ಪ್ರವಾಹ ಪೀಡಿತ ಗ್ರಾಮಗಳ ಜನರಿಗೆ ಸುಮಾರು 2,500 ಆಹಾರ ಸಾಮಗ್ರಿಗಳ‌  ವಿತರಣೆ- ಸಂಸದ ರಾಧಾಕೃಷ್ಣ ದೊಡ್ಡಮನಿ.

ಕಲಬುರಗಿ ಜಿಲ್ಲೆಯ ಅತೀವೃಷ್ಠಿ ಹಾಗೂ ಪ್ರವಾಹ ಪರಿಸ್ಥಿತಿ‌ ಎದುರಿಸುತ್ತಿರುವ ಗ್ರಾಮಗಳ ಜನರಿಗೆ ಆಹಾರ ಸಾಮಗ್ರಿಗಳ ಪೊಟ್ಟಣಗಳನ್ನು ನಾಳೆ ( ಶುಕ್ರವಾರ) ಜಿಲ್ಲಾಡಳಿತ ಮೂಲಕ ನೀಡಲಾಗುವುದು ಎಂದು ಕಲಬುರಗಿ ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ‌‌ ನೀಡಿರುವ ಅವರು, ಅತೀವೃಷ್ಠಿ ಹಾಗೂ ಪ್ರವಾಹ ಎದುರಿಸುತ್ತಿರುವ ಗ್ರಾಮಗಳ‌ ಜನರಿಗೆ ವೈಯಕ್ತಿಕವಾಗಿ ಸುಮಾರು 2,500 ಆಹಾರ ಸಾಮಗ್ರಿಗಳ ಪೊಟ್ಟಣಗಳನ್ನು ಜಿಲ್ಲಾಡಳಿತದ ಮೂಲಕ ನೀಡಲಾಗುವುದು ಎಂದು ಸಂಸದರು ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರ…

Read More

ಕಲಬುರಗಿ ಮಣ್ಣಿಗೆ ಅತಿ ನೀರು ಅಪಾಯಕಾರಿ | ಸಮದ್ ಪಟೇಲ್

ಕಲಬುರಗಿ, ಪ್ರಾಕೃತಿಕವಾಗಿ ಕಲಬುರಗಿ ಜಿಲ್ಲೆಯ ಬಹುತೇಕ ನೆಲದ ಒಳ ಪದರದಲ್ಲಿ ಸುಣ್ಣದ ಕಲ್ಲು ಒಳಗೊಂಡಿರುವ ಹಿನ್ನಲೆಯಲ್ಲಿ ಇಲ್ಲಿನ ಮಣ್ಣಿಗೆ ಅತಿ ನೀರು ಅಪಾಯಕಾರಿ ಎಂದು ಕೃಷಿ ಜಂಟಿ ನಿರ್ದೇಶಕ ಸಮದ್ ಪಟೇಲ್ ಅವರು ತಿಳಿಸಿದರು. ಜಿಲ್ಲೆಯಲ್ಲಿ ಪ್ರಸ್ತುತ ಅತಿವೃಷ್ಠಿಯಿಂದ ತೊಗರಿ, ಹತ್ತಿ ಹಾಗೂ ಇತರೆ ಬೆಳೆಗೆ ಬರಬಹುದಾದ ಕೀಟ ರೋಗ ಬಾಧೆ ಹಾಗೂ ಅದರ ನಿರ್ವಹಣೆಯ ಕುರಿತು ವಿವರಿಸಲು ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಈ ನೆಲದ ಮಣ್ಣು…

Read More

ದಸರಾ ಹಬ್ಬದ ಪ್ರಯುಕ್ತ ಕೆ.ಕೆ.ಆರ್.ಟಿ.ಸಿ ಸಂಸ್ಥೆಯಿಂದ 500 ಹೆಚ್ಚುವರಿ ಬಸ್ ಕಾರ್ಯಾಚರಣೆ : ಡಾ.ಬಿ.ಸುಶೀಲ

ಕಲಬುರಗಿ,ದಸರಾ ಹಬ್ಬ, ವಾರಾಂತ್ಯ ಹಾಗೂ ಸಾಲು ರಜೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರದೇಶದ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು ಮತ್ತು ಸೋಲಾಪೂರದ ತುಳಜಾಪುರಕ್ಕೆ ಹೋಗಿ ಬರಲು ಪ್ರಯಾಣಿಕರ ಅನುಕೂಲಕ್ಕಾಗಿ 500 ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಮತ್ತು ಪ್ರಯಾಣಿಕರು ಇದರ ಸೌಲಭ್ಯ ಪಡೆಯಬೇಕು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ.ಸುಶೀಲಾ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸೆಪ್ಟೆಂಬರ್ 25, 26 ಹಾಗೂ 29 ರಂದು…

Read More

ಸೆ. 28 ರ‌ಂದು ಕಲ್ಯಾಣ ಕರ್ನಾಟಕ ಕೋಗಿಲೆ ಸೀಸನ್ 3 ರ ಆಡಿಷನ್

ಕಲಬುರಗಿ : ಕರ್ನಾಟಕ ಸಂಘಟನಾ ವೇದಿಕೆ ವತಿಯಿಂದ ಕಲ್ಯಾಣ ಕರ್ನಾಟಕ ಕೋಗಿಲೆ ಸೀಸನ್ 3 ರ ಆಡಿಷನ್ ಸೆ 28 ರಂದು ಮುಂಜಾನೆ 10.00 ಗಂಟೆಯಿಂದ ಸಾಯಂಕಾಲ 4 ರವರೆಗೆ ನಗರದ ಸರ್ದಾರ್ ವಲ್ಲಾಭಾಯಿ ಪಟೇಲ್ ಸರ್ಕಲ್ ಹತ್ತಿರ ಇರುವ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘಟನಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಗುರು ಬಂಡಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಸಂಗೀತ ಕಾರ್ಯಕ್ರಮವು 2 ತಿಂಗಳಗಳ…

Read More

ಸಾಮಾಜಿಕ ಶೈಕ್ಷಣಿಕ ಕುರಿತು ಸಮೀಕ್ಷೆ ಕುರಿತು ಜಾಗೃತಿ

ಯಾದಗಿರಿ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ/ಶೈಕ್ಷಣಿಕ ಸಮೀಕ್ಷೆ ಸೆ 22 ರಿಂದ ಅ 7 ರ ರವರೆಗೆ ನಡೆಯಲಿದೆ. ಈ ಸಮೀಕ್ಷೆಯ ವಿವರವಾದ ಮಾಹಿತಿ ಹಾಗೂ ಮುಸ್ಲಿಂ ಸಮೂದಾಯದವರಿಗೆ ಜಾಗೃತಿ ಮೂಡಿಸಲು ಸಚಿವ ಜಮೀರ ಅಹ್ಮದ ಖಾನ ಅವರ ಅಧ್ಯಕ್ಷತೆಯಲ್ಲಿ ಧರ್ಮ ಗುರುಗಳು, ಅನೇಕ ಮುಸ್ಲಿಂ ಸಮೂದಾಯದ ಮುಖಂಡರು ಹಾಗೂ ಅಲ್ಪಸಂಖ್ಯಾತರ ಆಯೋಗ ಅಧ್ಯಕ್ಷರಾದ ಯು. ನಿಸ್ಸಾರ ಅಹ್ಮದ ರವರು ಕೂಡ ಭಾಗಿಯಾಗಿದ್ದರು. ಈ ಸಭೆಯಲ್ಲಿ ಕೈಕೊಂಡ ನಿರ್ಣಯ ಹಾಗೂ ಸಲಹೆಯಂತೆ…

Read More

ವಾಡಿ (ಜಂ)ಗೆ ಪ್ರವೇಶದ್ವಾರ, ಹಾಗೂ ರೈಲು ನಿಲ್ದಾಣಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ನಾಮಕರಣ ಮಾಡಿ | ಚಕ್ರವರ್ತಿ

ಕಲಬುರಗಿ : ಕಲಬುರಗಿ ಜಿಲ್ಲೆಯ ವಾಡಿ (ಜಂ) ರೈಲ್ವೆ ನಿಲ್ದಾಣಕ್ಕೆ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ರೈಲು ನಿಲ್ದಾಣ ಎಂದು ನಾಮಕರಣ ಮಾಡಬೇಕು ಮತ್ತು ಮುಖ್ಯ ಪ್ರವೇಶದ್ವಾರಕ್ಕೆ (ಕಮಾನ್) ನಿರ್ಮಿಸಿ, ಭೀಮ ಪಾದ ಸ್ಪರ್ಷ ಭೂಮಿ ಎಂದು ನಾಮಕರಣ ಮಾಡಬೇಕೆಂದು ರಿಪಬ್ಲಿಕನ್ ಪಾರ್ಟೀ ಆಫ ಇಂಡಿಯಾ ಜಿಲ್ಲಾ ಯುವ ಘಟಕ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಭಿಷೇಕ ಚಕ್ರವರ್ತಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ.  ಕಲಬುರಗಿಗೆ 27…

Read More
error: Content is protected !!