ಮುಖ್ಯಮಂತ್ರಿಗಳಿಂದ 649.47 ಕೋಟಿ ರೂ. ಮೊತ್ತದ ಅಭವೃದ್ಧಿ ಕಾರ್ಯಗಳಿಗೆ ಚಾಲನೆ
ಕಲಬುರಗಿ, ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಸಮಾರಂಭದಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಭಾಗದ ಕೆ.ಕೆ.ಆರ್.ಡಿ.ಬಿ ಮತ್ತು ಇತರೆ ಇಲಾಖೆಯ 570.05 ಕೋಟಿ ರೂ. ಮೊತ್ತದ 133 ಕಾಮಗಾರಿಗಳಿಗೆ ಅಡಿಗಲ್ಲು ಮತ್ತು 79.41 ಕೋಟಿ ರೂ. ಮೊತ್ತದ 26 ಕಾಮಗಾರಿಗಳ ಲೋಕಾರ್ಪಣೆ ಸೇರಿದಂತೆ ಒಟ್ಟಾರೆ 649.47 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇದರಲ್ಲಿ ಕೆ.ಕೆ.ಆರ್.ಡಿ.ಬಿ. ಅನುದಾನದಡಿಯಲ್ಲಿ 350.05 ಕೋಟಿ ರೂ. ಮೊತ್ತದ 112 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರೆ 3.35 ಕೋಟಿ ರೂ. ಮೊತ್ತದ…


