ಮುಖ್ಯಮಂತ್ರಿಗಳಿಂದ 649.47 ಕೋಟಿ ರೂ. ಮೊತ್ತದ ಅಭವೃದ್ಧಿ ಕಾರ್ಯಗಳಿಗೆ ಚಾಲನೆ

ಕಲಬುರಗಿ, ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಸಮಾರಂಭದಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಭಾಗದ ಕೆ.ಕೆ.ಆರ್.ಡಿ.ಬಿ ಮತ್ತು ಇತರೆ ಇಲಾಖೆಯ 570.05 ಕೋಟಿ ರೂ. ಮೊತ್ತದ 133 ಕಾಮಗಾರಿಗಳಿಗೆ ಅಡಿಗಲ್ಲು ಮತ್ತು 79.41 ಕೋಟಿ ರೂ. ಮೊತ್ತದ 26 ಕಾಮಗಾರಿಗಳ ಲೋಕಾರ್ಪಣೆ ಸೇರಿದಂತೆ ಒಟ್ಟಾರೆ 649.47 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇದರಲ್ಲಿ ಕೆ.ಕೆ.ಆರ್.ಡಿ.ಬಿ. ಅನುದಾನದಡಿಯಲ್ಲಿ 350.05 ಕೋಟಿ ರೂ. ಮೊತ್ತದ 112 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರೆ 3.35 ಕೋಟಿ ರೂ. ಮೊತ್ತದ…

Read More

ವಡಗೇರಾ ಡಿಡಿಯು ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ

ವಡಗೇರಾ:ಹೈದರಾಬಾದ್ ಕರ್ನಾಟಕ ವಿಮೋಚನೆಯಾಗಲು ಸರ್ದಾರ್ ವಲ್ಲಭಾಯಿ ಪಟೇಲ್ ಸೇರಿದಂತೆ ಈ ಭಾಗದ ಅನೇಕ ಹಿರಿಯ ಹೋರಾಟಗಾರರ ಫಲವಾಗಿ ನಮಗೆ ಇಂದು ಸ್ವಾತಂತ್ರ್ಯ ಸಿಕ್ಕಿದೆ ಎಂದು ಡಿಡಿಯು ಸಿಬಿಎಸ್ಇ ಶಾಲೆಯ ಪ್ರಾಂಶುಪಾಲ ಸಜೀಶ್ ರಾಜ್ ಹೇಳಿದರು. ಪಟ್ಟಣದ ಡಿಡಿಯು ಸಿಬಿಎಸ್ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ನಮ್ಮ ಭಾಗದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಸಮಾಜಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾದದ್ದು ,ದೇಶದ ಅಭಿವೃದ್ಧಿಯಲ್ಲಿ…

Read More

ಸುರಪುರ : ಕಲ್ಯಾಣ ಕನಾಟಕ ಉತ್ಸವ ಕಾರ್ಯಕ್ರಮ

ಸುರಪುರ: ನಗರದ ಸರ್ದಾರ್ ವಲ್ಲಭಬಾಯ್ ಪಟೇಲ್ ವೃತ್ತದಲ್ಲಿ ತಾಲೂಕ ಆಡಳಿತ ದಿಂದ ಕಲ್ಯಾಣ ಕನಾಟಕ ಉತ್ಸವ ಕಾರ್ಯಕ್ರಮ ಆಚರಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ರಾಜಾ ವೇಣುಗೋಪಾಲ ನಾಯಕ ಮಾತನಾಡಿದರು. ದೇಶಕ್ಕೆ ೧೯೪೭ ಆಗಸ್ಟ್ ೧೫ರಂದು ಸ್ವಾತಂತ್ರ‍್ಯ ದೊರಕಿತಾದರೂ ಹೈದರಾಬಾದ್ ಪ್ರಾಂತ್ಯ ವಿಲೀನಕ್ಕೆ ಒಪ್ಪದಿದ್ದಾಗ ನಿಜಾಮರ ವಿರುದ್ಧ ಆಪರೇಷನ್ ಪೊಲೋ ಮಾಡಿ ನಿಜಾಮರ ಸೈನ್ಯವನ್ನು ಹತ್ತಿಕ್ಕುವಲ್ಲಿ ಅನೇಕ ಮಹನಿಯರು ಹೋರಾಟ ತ್ಯಾಗ, ಬಲಿದಾನಗೈದು ನಮ್ಮ ಭಾಗವನ್ನು ಸ್ವಾತಂತ್ರö್ಯಗೊಳಿಸಿದರು ಎಂದರು. ಕಲ್ಯಾಣ ಕರ್ನಾಟಕ ವಿಮೋಚನೆಗಾಗಿ ಹೋರಾಟ ಮಾಡಿದ ಎಲ್ಲ ಮಹನಿಯರು ಸ್ಮರಿಸುವುದು…

Read More

ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಸರ್ಕಾರದ ಘೋಷಣೆಗೆ ಶಶೀಲ್ ಜಿ ನಮೋಶಿ ಹರ್ಷ

ಕಲಬುರ್ಗಿ: ಸರ್ಕಾರ ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡಿ ಆದೇಶ ಮಾಡಿರುವದಕ್ಕೆ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಹರ್ಷ ವ್ಯಕ್ತಪಡಿಸಿದರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮುಖ್ಯ ಕಚೇರಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಬಹುದಿನದ ಬೇಡಿಕೆ ಆಗಿದ್ದ ಪ್ರತ್ಯೇಕ ಸಚಿವಾಲಯ ಸಲುವಾಗಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಬೇಡಿಕೆಯಾಗಿತ್ತು ನಾನು ಸಂಘಟನೆಯ ಜೋತೆ ಒಡಗೂಡಿ ಹಾಗೂ ಸದನದಲ್ಲಿ ನಿರಂತರ ಹೋರಾಟ ಮಾಡಿದ್ದೆ ಈಗ ಸರಕಾರ…

Read More

ಬಸವೇಶ್ವರ ಆಸ್ಪತ್ರೆಯಲ್ಲಿ ಸ್ವಸ್ತ ನಾರಿ,ಸಶಕ್ತ ಪರಿವಾರ ಅಭಿಯಾನ ಉದ್ಘಾಟನೆ

ಕಲಬುರ್ಗಿ : ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆಯಡಿಯಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ಉದ್ಘಾಟನೆ ನೇರವೇರಿಸಿಸಲಾಯಿತು. ಈ ಅಭಿಯಾನವು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 2025 ರವರೆಗೆ ನಡೆಯಲಿದ್ದು ಈ ಅಭಿಯಾನದ ಉದ್ದೇಶ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತೇಜಿಸುವುದು,ಹಾಗೂ ಕುಟುಂಬದ ಯೋಗಕ್ಷೇಮವನ್ನು ಹೆಚ್ಚಿಸುವದಾಗಿದೆ.ಮತ್ತು ಕೇಂದ್ರ ಸರ್ಕಾರದ ಯೋಜನೆಯಡಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಗುರಿಯನ್ನು ಹೊಂದಿದೆ. ಈ…

Read More

ಕಲಬುರಗಿ ಕುರುಬ ಸಮಾಜ ಶೌರ್ಯಕ್ಕೆ ಹೆಸರಾದ ಸಮಾಜ – ಸಚಿವ ಪ್ರಿಯಾಂಕ್ ಖರ್ಗೆ.

ಕಲಬುರಗಿ : ಕುರುಬ ಸಮಾಜ ಇತಿಹಾಸ ಸೃಷ್ಟಿಸಿದರು. ಸಾಹಿತ್ಯ, ಆಧ್ಯಾತ್ಮಿಕ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಕುರುಬರು ಹೆಸರಾಗಿದ್ದರೆ, ಸಮಾಜಿಕ‌ ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯ ನವರು ಹೆಸರಾಗಿದ್ದಾರೆ ಎಂದುಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಸಿಟಿ ಬಸ್ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿದ್ದರು. ಸಿದ್ದರಾಮಯ್ಯ ನವರ ನೇತೃತ್ವದ ಸರ್ಕಾರ‌…

Read More

ಸಂಗೊಳ್ಳಿ ರಾಯಣ್ಣರ ಹೆಸರು ಶಾಶ್ವತಗೊಳಿಸಲು ರಾಯಣ್ಣ ಪ್ರಾಧಿಕಾರ ರಚಿಸಲಾಯಿತು: ಸಿ.ಎಂ.ಸಿದ್ದರಾಮಯ್ಯ

ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಬರೆಸಿ: ಹೀಗಾದ್ರೆ ಮಾತ್ರ ಸಮಾಜದ ಸ್ಥಿತಿ ಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ ಅನುಕೂಲ ಸಿಗುತ್ತದೆ: ಸಿ.ಎಂ ರಾಜ್ಯದ ಎಲ್ಲಾ ಜಾತಿ ಸಮುದಾಯಗಳ ಸ್ಪಷ್ಟ ಸ್ಥಿತಿ ಅರಿಯಲು ಸಮೀಕ್ಷೆ ನಡೆಸಲಾಗುತ್ತಿದೆ: ಸಿ.ಎಂ.ಸಿದ್ದರಾಮಯ್ಯ ಕುರುಬ ಸಮುದಾಯವನ್ನು ST ಗೆ ಸೇರಿಸಲು ಮತ್ತೆ ಕೇಂದ್ರಕ್ಕೆ ಶಿಫಾರಸ್ಸು: ಸಿ.ಎಂ ಭರವಸೆ ಕಲ್ಬುರ್ಗಿ : ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಹೆಸರನ್ನು ಬರೆಸಿದರೆ ಮಾತ್ರ ಸಮಾಜದ…

Read More

ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಸಮರ್ಪಕವಾಗಿ ಪರಿಹಾರ ತಲುಪಿಸಿ: ಸಿ.ಎಂ.ಸಿದ್ದರಾಮಯ್ಯ

ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬೆಳೆ ಹಾನಿ‌ ಸಭೆ ನಡೆಸಿದ ಸಿಎಂ ಸಭೆ ಬಳಿಕ ಬೆಳೆ ಹಾನಿ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಕಲ್ಬುರ್ಗಿ : ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಿ. ಮಾನವ- ಜಾನವಾರು ಜೀವ ಹಾನಿಗಳಿಗೆ ಶೇ100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲ್ಬುರ್ಗಿ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಅತಿವೃಷ್ಠಿಯಿಂದ…

Read More

ಮುಖ್ಯಮಂತ್ರಿಗಳಿಂದ ಬೆಳೆ ಹಾನಿ ಪರಿಶೀಲನೆ

ಕಲಬುರಗಿ, ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾಗಲು ಕಲಬುರಗಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕಲಬುರಗಿ ತಾಲೂಕಿನ ಫರಹತಾಬಾದ ಗ್ರಾಮದಲ್ಲಿ ಇತ್ತೀಚಿನ ಮಳೆಯಿಂದಾದ ಬೆಳೆ ಹಾನಿ ಪ್ರದೇಶ ವೀಕ್ಷಣೆ ಮಾಡಿದರು. ರೈತ ಚೆನ್ನಬಸಪ್ಪ ಮತ್ತು ಸೂರ್ಯಕಾಂತ ಅವರ ಜಂಟಿ ಹೆಸರಿನಲ್ಲಿರುವ ಸರ್ವೆ ನಂ.50ರ 27 ಎಕರೆ 23 ಗುಂಟೆಯಲ್ಲಿ ಬೆಳೆಯಲಾದ ತೊಗರಿ ಮಳೆಯಿಂದ ಸಂಪೂರ್ಣ ಬೆಳೆ ಕೊಚ್ಚಿ ಹೋಗಿದ್ದನ್ನು ವೀಕ್ಷಿಸಿದರು. ಮಳೆಯಿಂದ ಮೂರನೇ ಬಾರಿಗೆ ಬಿತ್ತಿದ ತೊಗರಿ ಸಂಪೂರ್ಣ ಹಾಳಾಗಿದೆ. ಬೆಳೆ ಚೆನ್ನಾಗಿದ್ದರೆ ಎಕರೆಗೆ 5-6 ಚೀಲ…

Read More

ಹೈ.ಕ.ವಿಮೋಚನೆಯ ಹರಿಕಾರನಿಗೆ ಸಿ.ಎಂ. ಸಿದ್ದರಾಮಯ್ಯ ರಿಂದ ಗೌರವ ನಮನ

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆ ಕಲಬುರಗಿ, ಕಲ್ಯಾಣ‌ ಕರ್ನಾಟಕ ಉತ್ಸವ‌ ಹಿನ್ನೆಲೆಯಲ್ಲಿ ಬುಧವಾರ ಕಲಬುರಗಿ ನಗರದ ಎಸ್.ವಿ.ಒಇ ವೃತ್ತದಲ್ಲಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ಸವರ ಪ್ರತಿಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಹೈದ್ರಾಬಾದ ಕರ್ನಾಟಕ‌ವಿಮೋಚನೆಯ ಹರಿಕಾರನಿಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಡಿ.ಎಸ್.ಸುಧಾಕರ್, ಪ್ರಿಯಾಂಕ್ ಖರ್ಗೆ,ಭೈರತಿ ಸುರೇಶ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಶಾಸಕರಾದ ಶಶೀಲ್ ನಮೋಶಿ, ತಿಪ್ಪಣಪ್ಪ ಕಮಕನೂರು, ಜಗದೇವ ಗುತ್ತೇದಾರ, ಕರ್ನಾಟಕ ಕುರಿ ಮತ್ತು…

Read More
error: Content is protected !!