ಸರ್ಕಾರಿ ಅದೇಶ ಹೊರಡಿಸಿ ಉತ್ಸವ ದಿನದಂದು ಕೊಡುಗೆ ನೀಡಿದ ಸಿದ್ದರಾಮಯ್ಯ ಸರ್ಕಾರ
ಕಲ್ಯಾಣ ಕರ್ನಾಟಕ ಪ್ರತ್ಯೇಕ ಇಲಾಖೆಗೆ ಸರ್ಕಾರ ಅಸ್ತು ಕಲಬುರಗಿ, ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮದಲ್ಲಿರುವ ಪ್ರದೇಶದ ಜನರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕವಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ ಸೃಜಿಸಿ ಸರ್ಕಾರಿ ಆದೇಶ ಹೊರಡಿಸುವ ಮೂಲಕ ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮ ಇಮ್ಮಡಿಗೊಳಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸೃಜಿಸಿ ಆದೇಶಿಸಿದಲ್ಲದೆ ಇಲಾಖೆಯು ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸಬೇಕು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯವರು ಈ ನೂತನ…


