ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ನೇಮಕಾತಿ ಹಾಗೂ ಬಡ್ತಿ ಯಲ್ಲಿ ಆಗುತ್ತಿರುವ ಅನ್ಯಾಯ ತಡೆಯಲು ಆಗ್ರಹ : ಶಶೀಲ್ ನಮೋಶಿ
ಕಲಬುರ್ಗಿ : ರಾಜ್ಯದಲ್ಲಿ ನೇಮಕಾತಿ ಪ್ರಾಧಿಕಾರಗಳು ವಿಭಿನ್ನ ನಿಯಮಗಳ ಮುಖಾಂತರ ನೇಮಕಾತಿ ಮಾಡುತ್ತಿರುವುದರಿಂದ ಕಲ್ಯಾಣ ಕರ್ನಾಟಕದ ಭಾಗದ 371 ಜೇ ಅಭ್ಯರ್ಥಿಗಳಿಗೆ ನೇಮಕಾತಿ ಹಾಗೂ ಬಡ್ತಿ ಯಲ್ಲಿ ಭಾರಿ ಪ್ರಮಾಣದಲ್ಲಿ ಅನ್ಯಾಯವಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಇಂದು ಸದನದಲ್ಲಿ ಪ್ರಸ್ತಾಪಿಸಿದರು. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಸಂವಿಧಾನ ವಿಶೇಷ ವಿಧಿ 371 ಜೇ ಬಂದನಂತರ ಈ ಭಾಗದ ನೇಮಕಾತಿ ಹಾಗೂ ಬಡ್ತಿ ವಿಷಯಕ್ಕೆ ಸಂಬಂಧಿಸಿದಂತೆ 2016 ರಿಂದ 2025 ರ ವರೆಗೆ ಅನೇಕ…


