ಕಲಬುರ್ಗಿ: ಕೈಗಾರಿಕಾ ತರಬೇತಿ ಕೇಂದ್ರಗಳು ನಿರುದ್ಯೋಗ ಸಮಸ್ಯೆಗಳನ್ನು ಪರಿಹರಿಸುವ ಸಂಜೀವಿನಿಗಳಾಗಿವೆ ಎಂದು ಕರ್ನಾಟಕ ಸರ್ಕಾರದ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ್ ಅವರು ಹೇಳಿದರು.
ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕೈಗಾರಿಕಾ ತರಬೇತಿ ಕೇಂದ್ರ ನಿಂಬರ್ಗಾ ಕಲಬುರಗಿಯ, ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೈಗಾರಿಕಾ ತರಬೇತಿ ಕೇಂದ್ರಗಳು ವ್ಯಕ್ತಿಗಳಿಗೆ ಉದ್ಯೋಗ ಪಡೆಯಲು ಅಗತ್ಯವಾದ ನೈಜ-ಜಗತ್ತಿನ ಕೌಶಲ್ಯಗಳನ್ನು ನೀಡುತ್ತವೆ
ತರಬೇತಿ ಕೇಂದ್ರಗಳನ್ನು ಸ್ಥಾಪಿಸಿ ಜನರಿಗೆ ಉದ್ಯೋಗ ನೀಡುವಂತಾಗಲಿ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ನಮೋಶಿಯವರು ಮಾತನಾಡಿ ಈಗಾಗಲೇ ನಾನು ಐಟಿಐ ಗೇ ಸಂಭಂದಿಸಿದ ಸಮಸ್ಯೆಗಳನ್ನು ಪರಿಹರಿಸಲು ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್ ಅವರಿಗೆ ಮನವಿ ಮಾಡಿರುವೆ ಇದಕ್ಕೆ ಸಚಿವರು ಸ್ಪಂದಿಸಿದ್ದಾರೆ ಎಂದು ಹೇಳಿದರು.
ಪ್ರಾಚಾರ್ಯರಾದ ಅಣ್ಣಾರಾವ ದುಗೊಂಡ್ ಪ್ರಾಸ್ತಾವಿಕವಾಗಿ ಮಾತನಾಡಿದರು ವೀರಯಸ್ವಾಮಿ ಹಿತ್ತಲಶಿರೂರು ಪ್ರಾರ್ಥನೆ ಮಾಡಿದರು, ಶರಣಬಸಪ್ಪ ಕಾರ್ಯಕ್ರಮ ನಿರೂಪಿಸಿದರು ನಾಗೇಶ್ ಅಲ್ಮದ ಸ್ವಾಗತಿಸಿ ವಂದಿಸಿದರು