gulbargametro

ರೈತರನ್ನು ಧೈರ್ಯ ತುಂಬಿ ಪರಿಹಾರ ನೀಡುವ ಮೂಲಕ ರಾಜ್ಯದ ರೈತರ ಹಿತಕಾಪಾಡಿ | ಬಿವೈ ವಿಜಯೇಂದ್ರ

ಬೀದರ್ : ಕೇವಲ ಮೀಟಿಂಗ್ ಮಾಡುವುದರಲ್ಲಿ ಕಾಲ ಕಳೆಯುವ ಬದಲು ರಾಜ್ಯದ ರೈತರ ಬಳಿ ಬಂದು ರಾಜ್ಯದಲ್ಲಿ ಆದ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ ರೈತರನ್ನು ಧೈರ್ಯ ತಂಬಿ ಪರಿಹಾರ ನೀಡುವ ಮೂಲಕ ರಾಜ್ಯದ ರೈತರ ಹಿತಕಾಪಾಡುವಂತೆ  ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ‌ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಆಗ್ರಹಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಮತ್ತು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ…

Read More

ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಸಿಎಂಗೆ ಸಚಿವರ ಮನವಿ ಪತ್ರ

ಬೆಂಗಳೂರ : ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭೇಟಿಯಾಗಿ, ಬೀದರ್ ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಹಾಗೂ ಕೈಗೊಂಡಿರುವ ಪರಿಹಾರ ಕಾರ್ಯಗಳನ್ನು ವಿವರಿಸಿ, ಬೆಳೆನಷ್ಟ, ಮನೆ – ಆಸ್ತಿಪಾಸ್ತಿ ಹಾನಿಗೆ ಸಂಬಂಧಿಸಿದಂತೆ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವುದು ಹಾಗೂ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಮನವಿಪತ್ರ ಸಲ್ಲಿಸಿದರು. ಈ ವೇಳೆ ಭೀಮಾ ನದಿ‌ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಂಗಳವಾರ ಪ್ರವಾಸ ಕೈಗೊಂಡು, ಕಲಬುರ್ಗಿ,…

Read More

ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದೇನೆ | ನಿತೀನ್ ಗುತ್ತೇದಾರ

ಕಲಬುರಗಿ  : ಎಲ್ಲರಿಗೂ ವಿನಮ್ರವಾಗಿ ವಿನಂತಿಸಿಕೊಳ್ಳುತ್ತಿದ್ದೇನೆ. ಈ ವರ್ಷ ನಾನು ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದೇನೆ. ಎಂದು ತಮ್ಮ ಫೇಸ್ ಖಾತೆಯಲ್ಲಿ ಮಾಜಿ ಜಿಪಂ ಅಧ್ಯಕ್ಷ ನಿತೀನ್ ಗುತ್ತೇದಾರ ಅವರು ಮಾಹಿತಿ ನೀಡಿದರು. ಮತಕ್ಷೇತ್ರದ ಹಾಗೂ ವಿವಿಧ ಕಡೆಗಳಲ್ಲಿ ಇರುವ ನನ್ನ ಪ್ರೀತಿಯ ಬಂಧುಗಳೆ, ಅಭಿಮಾನಿಗಳೇ, ಪಕ್ಷದ ಕಾರ್ಯಕರ್ತರೇ ನಿಮ್ಮೆಲ್ಲರ ಪ್ರೀತಿಯೇ ನನಗೆ ದೊಡ್ಡ ಆಶಿರ್ವಾದ ಮತ್ತು ಉಡುಗೊರೆ ಆಗಿದೆ. ನಿಮ್ಮ ಅಭಿಮಾನಕ್ಕೆ ನನ್ನ ಜೀವಮಾನವಿಡಿ ಋಣಿಯಾಗಿರುತ್ತೇನೆ. ಪ್ರತಿ ವರ್ಷವೂ ಸೆಪ್ಟೆಂಬರ್ 29 ರಂದು ನನ್ನ ಜನ್ಮದಿನದ ಪ್ರಯುಕ್ತ…

Read More

ಮಹಾರಾಷ್ಟ್ರ ರಾಜ್ಯದ ಉಜ್ಜನಿ, ಮತ್ತು ಸಿನಾ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡಗಡೆ

ಕಲಬುರಗಿ : ಮಹಾರಾಷ್ಟ್ರ ರಾಜ್ಯದ ಉಜ್ಜನಿ, ಮತ್ತು ಸಿನಾ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡಲಾಗುತ್ತಿದೆ. ಎಂದು ಜಿಲ್ಲಾಡಳಿತ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ ಉಜ್ಜನಿ ಜಲಾಶಯ, 40000 ಕ್ಯೂ,ಎ ಮೂಲಕ ಕೆ.ಟಿ.ವೀರ್ ಹಿಲ್ಲಿ, 1,39,000, ಭೋರಿ ಹಳ್ಳ, 5000, ಒಟ್ಟು (ಭೀಮಾ ನದಿಗೆ) 1,84,000, ಮಹಾರಾಷ್ಟ್ರ ರಾಜ್ಯದ ಉಜ್ಜನಿ ಮತ್ತು ಸಿನಾ ಜಲಾಶಯದಿಂದ ಭೀಮಾ ನದಿಗೆ 1.84 ಲಕ್ಷ ಕ್ಯುಸೆಕ್ ನೀರು ಬಿಡಲಾಗುತ್ತಿದೆ. ಈ ನೀರು ಅಫಜಲಪೂರ ತಾಲ್ಲೂಕಿನ ಭೀಮಾ ಸೊನ್ನ ಬ್ಯಾರೇಜಿಗೆ ಇಂದು ಬಂದು…

Read More

ಸೇಡಂ ತಾಲೂಕಿನಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಳೆ ಹಾನಿ, ಪ್ರವಾಹ ಸ್ಥಳಗಳಿಗೆ ಭೇಟಿ, ಪರಿಶೀಲನೆ

ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ವರದಿ ಸಲ್ಲಿಸಿ : ಸಚಿವ ಡಾ.ಶರಣಪ್ರಕಾಶ ಸೂಚನೆ ಸೇಡಂ. : ಮಳೆಯಿಂದ ಹಾನಿಯಾದ, ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ‌ ನೀಡಬೇಕು. ಫೋಟೋ ತೆಗೆದುಕೊಂಡು ಹಾಕುವುದಲ್ಲ, ಜನರ ಕಷ್ಟಗಳನ್ನು ಆಲಿಸಿ ಸೂಕ್ತ ಕ್ರಮ ವಹಿಸಿ ತಕ್ಷಣವೇ ವರದಿ ಸಲ್ಲಿಸಿ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ಕಳೆದ ನಾಲ್ಕೈದು ದಿನಗಳಿಂದ ನಿರಂತರ ಮಳೆ ಸುರಿದ ಪರಿಣಾಮವಾಗಿ ಸೇಡಂ ತಾಲೂಕಿನ ಮಳಖೇಡ ಕಾಗಿಣಾ ನದಿ ಪ್ರವಾಹ…

Read More

ಕೃಷ್ಣ ಮತ್ತು ಭೀಮ ನದಿ ತೀರದಲ್ಲಿ ಪ್ರವಾಹದ ಸ್ಥಿತಿ: ತೀವ್ರ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಿಎಂ ಸೂಚನೆ

ಕಲ್ಬುರ್ಗಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾಗೂ ಕೃಷ್ಣ ನದಿಯ ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲ್ಬುರ್ಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳು ನೀಡಿದ…

Read More

ಗಂಜಿ ಕೇಂದ್ರ ಸ್ಥಾಪನೆ‌ ಸೇರಿದಂತೆ ಮುಂಜಾಗ್ರತೆ ಕ್ರಮ ವಹಿಸುವಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆ‌| ಸಚಿವ ಡಾ ಶರಣಪ್ರಕಾಶ ಪಾಟೀಲ

ಕಲಬುರಗಿ : ಕಳೆದ ನಾಲ್ಕು ದಿನಗಳಿಂದ ಸುರಿದ ನಿರಂತರ ಮಳೆಗೆ ಸೇಡಂ ತಾಲೂಕಿನ ಗ್ರಾಮೀಣ ಭಾಗದಲ್ಲಿ ನದಿ ಪಾತ್ರದ ಹಳ್ಳಿಗಳಲ್ಲಿ ಕೆಲ ಮನೆಗಳಿಗೆ ನೀರು ನುಗ್ಗಿದ್ದು, ಈಗಾಗಲೇ ತಾಲೂಡಾಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿ, ಗಂಜಿ ಕೇಂದ್ರ ಸ್ಥಾಪನೆ‌ ಸೇರಿದಂತೆ ಮುಂಜಾಗ್ರತೆ ಕ್ರಮ ವಹಿಸುವಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚಿಸಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ ತಾಲೂಕಿನ ಸಟಪಟನಳ್ಳಿ, ಸುರವಾರ, ಬಿಬ್ಬಳ್ಳಿ, ಸಂಗಾವಿ, ಕರ್ಚಖೇಡ, ಮಳಖೇಡ ಗ್ರಾಮಗಳಲ್ಲಿ ನದಿ ಪ್ರವಾಹದಿಂದ…

Read More

ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚನೆ

ಕಲಬುರಗಿ : ಮಳೆ ಹಾಗೂ ಪ್ರವಾಹ ಪೀಡಿತ ಚಿತ್ತಾಪುರ ತಾಲೂಕಿನ ಹಳೆ ಹೆಬ್ಬಾಳ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಈ ಸಂದರ್ಭದಲ್ಲಿ ಅವರು ಮಳೆಯಿಂದ ಬಿದ್ದ ಮನೆಯನ್ನು ಪರಿಶೀಲಿಸಿ ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಳೆ ಹೆಬ್ಬಾಳ ಗ್ರಾಮವನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು ಸಚಿವರ ಮುಂದೆ ಬೇಡಿಕೆ ಇರಿಸಿದರು. ಗ್ರಾಮಸ್ಥರಿಗೆ ಸ್ಪಂದಿಸಿದ ಸಚಿವರು…

Read More

ಮಹಿಳೆಯರು ಕಾನೂನು ತಿಳಿದುಕೊಳ್ಳುವುದು ಅಗತ್ಯ: ನ್ಯಾ:ಫಕೀರವ್ವ ಕೆಳಗೇರಿ

ಸುರಪುರ:ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ದೇಶದಲ್ಲಿ ಕಾನೂನು ಜಾರಿಯಲ್ಲಿವೆ, ಮಹಿಳೆಯರು ಕಾನೂನಿನ ಅರಿವು ಪಡೆದು ಕೊಳ್ಳುವುದು ಅಗತ್ಯವಿದೆ ಎಂದು ಅಧ್ಯಕ್ಷರು ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಸುರಪುರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಕಿರವ್ವ ಕೆಳಗೇರಿ ಅವರು ಹೇಳಿದರು. ರಂಗಂಪೇಟಿಯ ಕನ್ನಡ ಸಾಹಿತ್ಯ ಸಂಘದ 83ನೇ ವರ್ಷದ ನಾಡಹಬ್ಬ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ದೇಶದಲ್ಲಿ ಮಗು ಹುಟ್ಟಿನಿಂದ ಹಿಡಿದು ಸಾಯುವವರೆಗೂ ಎಲ್ಲದಕ್ಕೂ ಕಾನೂನುಗಳಿದ್ದು ಕಾನೂನಿನ ರಕ್ಷಣೆ ಎಲ್ಲರು ಪಡೆಯುವಂತೆ ತಿಳಿಸಿದರು.ಅಲ್ಲದೆ ಮಹಿಳಾ ಆಸ್ತಿ ಹಕ್ಕು ಮತ್ತು…

Read More

ಹೆಬ್ಬಾಳ ಆರೋಗ್ಯ ಕೇಂದ್ರದಲ್ಲಿ ಪ್ರಪ್ರಥಮ ಶಸ್ತ್ರಚಿಕಿತ್ಸೆ ಯಶಸ್ವಿ

ಕಲಬುರಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶರಣಬಸಪ್ಪಾ ಕ್ಯಾತನಾಳ ಹಾಗೂ ಮಾನ್ಯ ಆರ್‌ಸಿಹೆಚ್‌ಓ ಕಲಬುರಗಿ, ಮಾನ್ಯ ಟಿಹೆಚ್‌ಓ ಚಿತ್ತಾಪೂರ ರವರ ಮಾರ್ಗದರ್ಶನದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಹೆಬ್ಬಾಳ ತಾ||ಚಿತ್ತಾಪೂರ ಜಿ||ಕಲಬುರಗಿ ಆಸ್ಪತ್ರೆಯಲ್ಲಿ ಪ್ರಪ್ರಥಮವಾಗಿ ಸಿಜರಿಯನ್ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಗೊಂಡಿದ್ದು, ೩.೧ ಕೆ.ಜಿ ತೂಕದ ಹೆಣ್ಣು ಮಗು ಜನಿಸಿದ್ದು, ತಾಯಿ ಮತ್ತು ಮಗು ಸ್ವಸ್ಥವಾಗಿರುತ್ತಾರೆ. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ಮೋಹ್ಮದ ಇರ್ಫಾನ ಇನಾಮದಾರ ರವರು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ತಂಡದ ಡಾ. ನಂದಿನಿ ಪ್ರಸೂತಿ…

Read More
error: Content is protected !!