gulbargametro

ಜಿಎಸ್ ಟಿ ಕಡಿತ ದಸರಾ ಹಬ್ಬದ ಕೊಡುಗೆ, ಪ್ರಧಾನಿ ಮೋದಿಗೆ ಬಾಲರಾಜ್ ಗುತ್ತೇದಾರ ಅಭಿನಂದನೆ

ಕಲಬುರಗಿ: ಜನ ಸಾಮಾನ್ಯರ ತೆರಿಗೆ ಭಾರವನ್ನು ಅತ್ಯಂತ ಕಡಿಮೆ ಮಾಡಿ ದಸರಾ ಹಬ್ಬದ ಕೊಡುಗೆ ನೀಡಿರುವ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ  ಕಲಬುರಗಿ ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.  ಅಲ್ಲದೇ ರಾಜ್ಯ ಸರ್ಕಾರ ಜನರ ಮೇಲೆ ಹಾಕಿರುವ ತೆರಿಗೆ ಇಳಿಸುವುದೇ ಎಂದು ಜನಸಾಮಾನ್ಯರು ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, 2017 ರಲ್ಲಿ ಪ್ರಾರಂಭವಾಗಿರುವ ಜಿಎಸ್ ಟಿ ದಿಟ್ಟ ನಿರ್ಧಾರ. ಕೊವಿಡ್…

Read More

ಚಿಂತನಹಳ್ಳಿಯಲ್ಲಿ ಪೋಷಣಾ ಮಾಸಾಚರಣೆ ಕಾರ್ಯಕ್ರಮ 

ಗುರುಮಠಕಲ್: ತಾಲೂಕಿನ ಕಂದಕೂರ ಪಿಎಚ್‌ಸಿ ವ್ಯಾಪ್ತಿಯ ಚಿಂತನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ ಪೋಷಣಾ ಮಾಸಾಚರಣೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶರಣಮ್ಮಾ ರವರು ಉದ್ಘಾಟಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ರವರು ಮಾತನಾಡಿ, “ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆಯನ್ನು ತಡೆಗಟ್ಟಲು ಪೌಷ್ಟಿಕ ಆಹಾರ ಸೇವನೆ ಮುಖ್ಯಎಂದು ಅಭಿಪ್ರಾಯಪಟ್ಟರು. ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದಪ್ಪ ರವರು ಸ್ವಸ್ಥ ನಾರಿ–ಸಶಕ್ತ ಪರಿವಾರ ಅಭಿಯಾನ ಅಡಿಯಲ್ಲಿ ಲಭ್ಯವಿರುವ ವಿವಿಧ ಆರೋಗ್ಯ ಸೌಲಭ್ಯಗಳ ಬಗ್ಗೆ…

Read More

ಎ.ಪಿ. ಸ್ಟುಡಿಯೋ ವತಿಯಿಂದ ‘ನಯಿ ರಂಗ ನವರಂಗ’ ಗರಭಾ (ದಾಂಡಿಯಾ) ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ಎ.ಪಿ. ಸ್ಟುಡಿಯೋವತಿಯಿಂದ ನಗರದ ಕೋಟನೂರ ಹತ್ತಿರದ ಸಿದ್ಧಶ್ರೀ ಡೇವನ್ ಪ್ಯಾಲೆಸ್‌ನಲ್ಲಿ ಎ.ಪಿ. ಸ್ಟುಡಿಯೋವತಿಯಿಂದ ‘ನಯಿ ರಂಗ ನವರಂಗ’ ಗರಭಾ (ದಾಂಡಿಯಾ) ಕಾರ್ಯಕ್ರಮವನ್ನು ಸತತ ೭ ವರ್ಷಗಳಿಂದ ಏರ್ಪಡಿಸಲಾಯಿತು. ಈ ಕಾರ್ಯಕ್ರಮವನ್ನು ಸಮಾಜ ಸೇವಕಿ ಜಯಶ್ರೀ ಬಸವರಾಜ ಮತ್ತಿಮೋಡ ಚಾಲನೆ ನೀಡಿ ಮಾತನಾಡಿ ಎ.ಪಿ. ಸ್ಟುಡಿಯೋನ ಡೈರೇಕ್ಟರ್ ಮತ್ತು ಫೌಂಡರಾದ ಅನೀಲ ಪವಾರ ರವರು ಸತತ ೧೩ ವರ್ಷಗಳಿಂದ ಕಲಬುರಗಿ ಸಮಸ್ತ ಮಹಿಳೆರಿಗೆ ಹಾಗೂ ಸಣ್ಣ ಮಕ್ಕಳಿಗೆ ಗರಭಾ ಹಾಗೂ ನೃತ್ಯವನ್ನು ಕಲಿಸುತ್ತ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ…

Read More

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ವರದಾನ: ಲಕ್ಷ್ಮಿಕಾಂತ ರೆಡ್ಡಿ

ಗುರುಮಠಕಲ್: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ವರದಾನವಾಗಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಗುರುಮಠಕಲ್ ತಾಲ್ಲೂಕು ಅಧ್ಯಕ್ಷ ಲಕ್ಷ್ಮಿಕಾಂತ್ ರೆಡ್ಡಿ ಪಲ್ಲ ತಿಳಿಸಿದರು.  ತಾಲ್ಲೂಕಿನ ಪುಟಪಾಕ್ ಗ್ರಾಮ ಪಂಚಾಯತಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತಿ ಸಹಯೋಗದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತಿಗಳ ಕಡೆ  ಕಾರ್ಯಕ್ರಮದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪರಿಶೀಲನೆ ಮತ್ತು ಫಲಾನುಭವಿಗಳೊಂದಿಗೆ…

Read More

ಮಹಾನಗರ ಪಾಲಿಕೆ ಸ್ಥಾಯಿಸಮಿತಿ ಅಧ್ಯಕ್ಷರ ಆಯ್ಕೆ

ಕಲಬುರಗಿ: ನಗರದ ಇಂದಿರಾ ಸ್ಮಾರಕಭವನದಲ್ಲಿ (ಟೌನ್ ಹಾಲ್) ಇ ಮಹಾನಗರ ಪಾಲಿಕೆಯ ವಿವಿಧ ಸ್ಥಾಯಿ ಸಮಿತಿಗೆ ಅಧ್ಯಕ್ಷರ ಆಯ್ಕೆ ನಡೆಯಿತು. ಕಲಬುರಗಿ ಮಹಾನಗರಪಾಲಿಕೆ ಕರ,ಹಣಕಾಸು ಹಾಗೂ ಮೇಲ್ಮನವಿ ಸ್ಥಾಯಿಸಮಿತಿ ಅಧ್ಯಕ್ಷರಾಗಿ ಅನುಪಮಾ ರಮೇಶ ಕಮಕನೂರ, ಸಾರ್ವಜನಿಕ ಹಾಗೂ ಆರೋಗ್ಯ,ಶಿಕ್ಷಣ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮೊಹಮ್ಮದ ಅಯಜಖಾನ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿಸಮಿತಿ ಅಧ್ಯಕ್ಷರಾಗಿ ಶೇಖ ಹುಸೇನ್ ಮತ್ತು ಲೆಕ್ಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಪುತಲಿಬೇಗಂ ಅವರು ಆಯ್ಕೆಯಾದರು. ಆಯ್ಕೆಯಾದ ವಿವಿಧ ಸ್ಥಾಯಿಸಮಿತಿಯ ಅಧ್ಯಕ್ಷರನ್ನು…

Read More

ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ

ಸುರಪುರ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತವಾದ ರಂಗAಪೇಟಿಯ ಕನ್ನಡ ಸಾಹಿತ್ಯ ಸಂಘದ ೮೩ ನೇ ವರ್ಷದ ನಾಡ ಹಬ್ಬಕ್ಕೆ ಮಂಗಳವಾರ ಬೆಳಿಗ್ಗೆ ೮ ಗಂಟೆಗೆ ಭುವನೇಶ್ವರಿ ದೇವಿ ಮೂರ್ತಿಗೆ ಯಜ್ಙೇಶ್ವರ ಭಟ್ ಅವರು ನಾಡದೇವಿಗೆ ಪೂಜೆ ಸಲ್ಲಿಸಿದ ನಂತರ ಪ್ರಸಾದ ವಿತರಿಸಿದರು. ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಸೂಗೂರೇಶ್ವರ ವಾರದ್, ಕಾರ್ಯಾಧ್ಯಕ್ಷ ಶ್ರೀರಂಗಯ್ಯ ಮಿರಿಯಾಲ,ಉಪಾಧ್ಯಕ್ಷರಾದ ಯಂಕಣ್ಣ ಗದ್ವಾಲ್,ಸೋಮರಾಯ ಶಖಾಪುರ,ಶರಣಗೌಡ ಎಂ.ಪಾಟೀಲ್ ಜೈನಾಪುರ, ಪ್ರಧಾನ ಕಾರ್ಯದರ್ಶಿ ಮುದ್ದಪ್ಪ ಅಪ್ಪಾಗೋಳ,ಸಹ ಕಾರ್ಯದರ್ಶಿಗಳಾದ ಸಿದ್ದಯ್ಯ ಮಠ, ಪ್ರಕಾಶ ಆಲಬನೂರ, ಸಂಘಟನಾ ಕಾರ್ಯದರ್ಶಿ…

Read More

ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲು ಪೌರ ಕಾರ್ಮಿಕರಿಗೆ ಕಮಿಷನರ್ ಬಸವರಾಜ ಸಲಹೆ

ಸುರಪುರ: ನಗರಸಭೆ ಸಭಾಂಗಣದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಸುರಪುರ:ಪೌರ ಕಾರ್ಮಿಕರು ತಮ್ಮ ಮಕ್ಕಳನ್ನು ಪೌರ ಕಾರ್ಮಿಕರನ್ನು ಮಾಡದೇ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಅವರನ್ನು ಜಿಲ್ಲಾಧಿಕಾರಿ ಸೇರಿದಂತೆ ಉನ್ನತ ಅಧಿಕಾರಿಗಳನ್ನು ಮಾಡಬೇಕು ಎಂದು ಪೌರಾಯುಕ್ತ ಬಸವರಾಜ ಟಣಕೆದಾರ ಅವರು ಕಿವಿಮಾತು ಹೇಳಿದರು. ಇಲ್ಲಿಯ ನಗರಸಭೆಯ ಸಭಾಂಗಣದಲ್ಲಿ ಬೆಂಗಳೂರು ಪೌರಾಡಳಿತ ನಿರ್ದೇಶನಾಲಯ, ನಗರಾಭಿವೃದ್ಧಿ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕರ್ನಾಟಕ ರಾಜ್ಯ ನೌಕರರ ಸೇವಾ ಸಂಘ ಹಾಗೂ ಸುರಪುರ ನಗರಸಭೆ ಕಾರ್ಯಾಲಯದಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದಪೌರಕಾರ್ಮಿಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ…

Read More

ಕಲಬುರಗಿ ಸಾಹಿತಿ ಪ್ರಮೋದ ಕರಣಂ ಇವರ ಮೂರನೇ ಕಾದಂಬರಿ “ಹುಟ್ಟು ಸಾವು ಎರಡರ ನಡುವೆ’ ಕನ್ನಡ ಪುಸ್ತಕ ಲೋಕಾರ್ಪಣೆ

ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ, ಮೈಸೂರು ದಸರಾ ಮಹೋತ್ಸವ ಸಮಿತಿ-೨೦೨೫ ರಂದು ಮೈಸೂರು ದಸರಾ ಇವರುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ:೨೮.೦೯.೨೦೨೫ ಮಹೋತ್ಸವ-೨೦೨೫ ರಲ್ಲಿ ಕಲಬುರಗಿಯ ಸಾಹಿತಿಯಾಗಿರುವ ಶ್ರೀ ಪ್ರಮೋದ ಕರಣಂ ಇವರ ಮೂರನೇ ಕಾದಂಬರಿ “ಹುಟ್ಟು ಸಾವು ಎರಡರ ನಡುವೆ” ಯನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿರುವ ಡಾ. ಮಾನಸ ಇವರ ಅಧ್ಯಕ್ಷತೆಯಲ್ಲಿ ನಾಡಿನ ಖ್ಯಾತ ಸಾಹಿತಿಯಾಗಿರುವ ಶ್ರೀ ಎಂ. ಕೆ. ಹರಿಚರಣ ತಿಲಕ್ ಇವರು ಲೋಕಾರ್ಪಣೆಗೊಳಿಸುತ್ತಿದ್ದು, ಇದು ಕಲಬುರಗಿಯ ಯುವ ಬರಹಗಾರರಾಗಿರುವ…

Read More

ಕೋಲಿ/ಕಬ್ಬಲಿಗ ಸಮಾಜದ ಅಭಿವೃದ್ಧಿಗೆ ವಿವಿಧ ಕಾಮಗಾರಿಗಳಿಗೆ ರೂ೧.೨೦ ಕೋಟಿ ಅನುದಾನ ಬಿಡುಗಡೆ: ಡಾ.ಸಾಬಣ್ಣ ತಳವಾರ

ಕಲಬುರಗಿ: ಮಹರ್ಷಿ ವೇದವ್ಯಾಸ ಮಂಥನ ಮತ್ತು ಪ್ರೇರಣಾ ಟ್ರಸ್ಟಿನ ಅಡಿಯಲ್ಲಿ ನಡೆಯಲಿರುವ ಸ್ವಾಭಿಮಾನಿ ಶ್ರೀ ವಿಠ್ಠಲ್ ಹೇರೂರ ಮೆಟ್ರಿಕ್ ನಂತರದ ಉಚಿತ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಸಾಬಣ್ಣ ತಳವಾರ್ ಅವರು ಭೂಮಿ ಪೂಜೆ ನೆರವೇರಿಸಿ, ಕಟ್ಟಡ ನಿರ್ಮಾಣಕ್ಕಾಗಿ ರೂ.೩೦ ಲಕ್ಷ ಅನುದಾನ ಮಂಜೂರು ಮಾಡಿರುವುದಾಗಿ ಘೋಷಿಸಿದರು. “ಕೋಲಿ/ಕಬ್ಬಲಿಗ ಸಮಾಜ ಕಲಬುರಗಿ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಹಿಂದುಳಿದ ಸ್ಥಿತಿಗತಿಗಳಲ್ಲಿದೆ. ಈ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ…

Read More

ಸರ್ಕಾರ ಕೂಡಲೇ ಹೆಚ್ಚಿನ ಪರಿಹಾರ ಘೋಷಿಸಲಿ

ವಡಗೇರಾ ತಾಲೂಕಿನ ವಿವಿಧೆಡೆ ಬೆಳೆನಷ್ಟ ವೀಕ್ಷಣೆ ಬಿಜೆಪಿ ಯುವ ನಾಯಕ ಮಹೇಶರಡ್ಡಿ ಮುದ್ನಾಳ್ ಆಗ್ರಹ ಯಾದಗಿರಿ: ಮಹಾರಾಷ್ಟ್ರದಿಂದ ಭೀಮಾ‌ನದಿಗೆ ಅಧಿಕ ಪ್ರಮಾಣದ ನೀರು ಹರಿ ಬಿಟ್ಟಿರುವುದು ಮತ್ತು ಭಾರಿ ಮಳೆಯಿಂದ ಬೆಳೆನಷ್ಟವಾದ ಹಿನ್ನಲೆಯಲ್ಲಿ ಬಿಜೆಪಿ ಯುವ ನಾಯಕ ಮಹೇಶರಡ್ಡಿ ಮುದ್ನಾಳ್ ಶುಕ್ರವಾರ ವಡಗೇರಾ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಭೇಟಿ ನೀಡಿ, ರೈತರ ಅಳಲು ಆಲಿಸಿದರು. ಮೊದಲು ಹಾಲಗೇರಾ, ಗೋಡಿಹಾಳ, ಕುಮನೂರು ಗ್ರಾಮಗಳಿಗೆ ಭೇಟಿ ನೀಡಿ ರೈತರು ಬೆಳೆದ ಹತ್ತಿ ಬೆಳೆ ಹಾಳಾಗಿದ್ದನ್ನು ವೀಕ್ಷಿಸಿದರು. ಈ ವೇಳೆ ರೈತರು…

Read More
error: Content is protected !!