gulbargametro

ಬಸವೇಶ್ವರ ಆಸ್ಪತ್ರೆಯಲ್ಲಿ ಸ್ವಸ್ತ ನಾರಿ,ಸಶಕ್ತ ಪರಿವಾರ ಅಭಿಯಾನ ಉದ್ಘಾಟನೆ

ಕಲಬುರ್ಗಿ : ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆಯಡಿಯಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ಉದ್ಘಾಟನೆ ನೇರವೇರಿಸಿಸಲಾಯಿತು. ಈ ಅಭಿಯಾನವು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 2025 ರವರೆಗೆ ನಡೆಯಲಿದ್ದು ಈ ಅಭಿಯಾನದ ಉದ್ದೇಶ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತೇಜಿಸುವುದು,ಹಾಗೂ ಕುಟುಂಬದ ಯೋಗಕ್ಷೇಮವನ್ನು ಹೆಚ್ಚಿಸುವದಾಗಿದೆ.ಮತ್ತು ಕೇಂದ್ರ ಸರ್ಕಾರದ ಯೋಜನೆಯಡಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಗುರಿಯನ್ನು ಹೊಂದಿದೆ. ಈ…

Read More

ಕಲಬುರಗಿ ಕುರುಬ ಸಮಾಜ ಶೌರ್ಯಕ್ಕೆ ಹೆಸರಾದ ಸಮಾಜ – ಸಚಿವ ಪ್ರಿಯಾಂಕ್ ಖರ್ಗೆ.

ಕಲಬುರಗಿ : ಕುರುಬ ಸಮಾಜ ಇತಿಹಾಸ ಸೃಷ್ಟಿಸಿದರು. ಸಾಹಿತ್ಯ, ಆಧ್ಯಾತ್ಮಿಕ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಕುರುಬರು ಹೆಸರಾಗಿದ್ದರೆ, ಸಮಾಜಿಕ‌ ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯ ನವರು ಹೆಸರಾಗಿದ್ದಾರೆ ಎಂದುಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಸಿಟಿ ಬಸ್ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿದ್ದರು. ಸಿದ್ದರಾಮಯ್ಯ ನವರ ನೇತೃತ್ವದ ಸರ್ಕಾರ‌…

Read More

ಸಂಗೊಳ್ಳಿ ರಾಯಣ್ಣರ ಹೆಸರು ಶಾಶ್ವತಗೊಳಿಸಲು ರಾಯಣ್ಣ ಪ್ರಾಧಿಕಾರ ರಚಿಸಲಾಯಿತು: ಸಿ.ಎಂ.ಸಿದ್ದರಾಮಯ್ಯ

ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಬರೆಸಿ: ಹೀಗಾದ್ರೆ ಮಾತ್ರ ಸಮಾಜದ ಸ್ಥಿತಿ ಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ ಅನುಕೂಲ ಸಿಗುತ್ತದೆ: ಸಿ.ಎಂ ರಾಜ್ಯದ ಎಲ್ಲಾ ಜಾತಿ ಸಮುದಾಯಗಳ ಸ್ಪಷ್ಟ ಸ್ಥಿತಿ ಅರಿಯಲು ಸಮೀಕ್ಷೆ ನಡೆಸಲಾಗುತ್ತಿದೆ: ಸಿ.ಎಂ.ಸಿದ್ದರಾಮಯ್ಯ ಕುರುಬ ಸಮುದಾಯವನ್ನು ST ಗೆ ಸೇರಿಸಲು ಮತ್ತೆ ಕೇಂದ್ರಕ್ಕೆ ಶಿಫಾರಸ್ಸು: ಸಿ.ಎಂ ಭರವಸೆ ಕಲ್ಬುರ್ಗಿ : ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಹೆಸರನ್ನು ಬರೆಸಿದರೆ ಮಾತ್ರ ಸಮಾಜದ…

Read More

ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಸಮರ್ಪಕವಾಗಿ ಪರಿಹಾರ ತಲುಪಿಸಿ: ಸಿ.ಎಂ.ಸಿದ್ದರಾಮಯ್ಯ

ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬೆಳೆ ಹಾನಿ‌ ಸಭೆ ನಡೆಸಿದ ಸಿಎಂ ಸಭೆ ಬಳಿಕ ಬೆಳೆ ಹಾನಿ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಕಲ್ಬುರ್ಗಿ : ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಿ. ಮಾನವ- ಜಾನವಾರು ಜೀವ ಹಾನಿಗಳಿಗೆ ಶೇ100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲ್ಬುರ್ಗಿ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಅತಿವೃಷ್ಠಿಯಿಂದ…

Read More

ಮುಖ್ಯಮಂತ್ರಿಗಳಿಂದ ಬೆಳೆ ಹಾನಿ ಪರಿಶೀಲನೆ

ಕಲಬುರಗಿ, ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾಗಲು ಕಲಬುರಗಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕಲಬುರಗಿ ತಾಲೂಕಿನ ಫರಹತಾಬಾದ ಗ್ರಾಮದಲ್ಲಿ ಇತ್ತೀಚಿನ ಮಳೆಯಿಂದಾದ ಬೆಳೆ ಹಾನಿ ಪ್ರದೇಶ ವೀಕ್ಷಣೆ ಮಾಡಿದರು. ರೈತ ಚೆನ್ನಬಸಪ್ಪ ಮತ್ತು ಸೂರ್ಯಕಾಂತ ಅವರ ಜಂಟಿ ಹೆಸರಿನಲ್ಲಿರುವ ಸರ್ವೆ ನಂ.50ರ 27 ಎಕರೆ 23 ಗುಂಟೆಯಲ್ಲಿ ಬೆಳೆಯಲಾದ ತೊಗರಿ ಮಳೆಯಿಂದ ಸಂಪೂರ್ಣ ಬೆಳೆ ಕೊಚ್ಚಿ ಹೋಗಿದ್ದನ್ನು ವೀಕ್ಷಿಸಿದರು. ಮಳೆಯಿಂದ ಮೂರನೇ ಬಾರಿಗೆ ಬಿತ್ತಿದ ತೊಗರಿ ಸಂಪೂರ್ಣ ಹಾಳಾಗಿದೆ. ಬೆಳೆ ಚೆನ್ನಾಗಿದ್ದರೆ ಎಕರೆಗೆ 5-6 ಚೀಲ…

Read More

ಹೈ.ಕ.ವಿಮೋಚನೆಯ ಹರಿಕಾರನಿಗೆ ಸಿ.ಎಂ. ಸಿದ್ದರಾಮಯ್ಯ ರಿಂದ ಗೌರವ ನಮನ

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆ ಕಲಬುರಗಿ, ಕಲ್ಯಾಣ‌ ಕರ್ನಾಟಕ ಉತ್ಸವ‌ ಹಿನ್ನೆಲೆಯಲ್ಲಿ ಬುಧವಾರ ಕಲಬುರಗಿ ನಗರದ ಎಸ್.ವಿ.ಒಇ ವೃತ್ತದಲ್ಲಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ಸವರ ಪ್ರತಿಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಹೈದ್ರಾಬಾದ ಕರ್ನಾಟಕ‌ವಿಮೋಚನೆಯ ಹರಿಕಾರನಿಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಡಿ.ಎಸ್.ಸುಧಾಕರ್, ಪ್ರಿಯಾಂಕ್ ಖರ್ಗೆ,ಭೈರತಿ ಸುರೇಶ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಶಾಸಕರಾದ ಶಶೀಲ್ ನಮೋಶಿ, ತಿಪ್ಪಣಪ್ಪ ಕಮಕನೂರು, ಜಗದೇವ ಗುತ್ತೇದಾರ, ಕರ್ನಾಟಕ ಕುರಿ ಮತ್ತು…

Read More

ಸರ್ಕಾರಿ ಅದೇಶ ಹೊರಡಿಸಿ ಉತ್ಸವ ದಿನದಂದು ಕೊಡುಗೆ ನೀಡಿದ ಸಿದ್ದರಾಮಯ್ಯ ಸರ್ಕಾರ

ಕಲ್ಯಾಣ ಕರ್ನಾಟಕ ಪ್ರತ್ಯೇಕ ಇಲಾಖೆಗೆ ಸರ್ಕಾರ ಅಸ್ತು ಕಲಬುರಗಿ, ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮದಲ್ಲಿರುವ ಪ್ರದೇಶದ ಜನರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕವಾಗಿ  ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ ಸೃಜಿಸಿ ಸರ್ಕಾರಿ ಆದೇಶ ಹೊರಡಿಸುವ ಮೂಲಕ ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮ ಇಮ್ಮಡಿಗೊಳಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸೃಜಿಸಿ ಆದೇಶಿಸಿದಲ್ಲದೆ ಇಲಾಖೆಯು ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸಬೇಕು‌. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯವರು ಈ ನೂತನ…

Read More

ಜನ್ಮ ದಿನಾಚರಣೆಯ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ : ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಕಲಬುರಗಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶಕೀಲ್ ಅಹಮದ್ ಸರಡಗಿ ಅವರ ನೇತೃತ್ವದಲ್ಲಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಹಾಗೂ ಕೆಕ್ ಕತ್ತರಿಸುವ ಮಾಡುವುದರ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರ ಜನ್ಮ ದಿನಾಚರಣೆ ಅತಿ ಸರಳತೆಯಿಂದ ಆಚರಣೆ ಮಾಡಿದರು. ಬಳಿಕ ಮಾತನಾಡಿದ ಯುವ ಘಟಕದ ಅಧ್ಯಕ್ಷ ಶಕೀಲ್ ಅಹಮದ್ ಸರಡಗಿ ಅವರು ರಾಧಾಕೃಷ್ಣ ದೊಡ್ಡಮನಿ ಅವರು…

Read More

ಚನ್ನಪ್ಪ ಹೊಗರಿ ಹಿರೇಹಳ್ಳ ಮಾಸ್ತರ್ | ನಿಧನ 

ಸುರಪುರ: ತಾಲೂಕಿನ ಕಕ್ಕೇರಾ ಪಟ್ಟಣದ ಚನ್ನಪ್ಪ ಹೊಗರಿ (ಹಿರೇಹಳ್ಳ ಮಾಸ್ತರ್) ಅವರು ವಯೋ ಸಹಜ ಕಾಯಿಲೆಯಿಂದ ಮಂಗಳವಾರ ನಿಧನ ಹೊಂದಿದ್ದು, ಸಾಯಂಕಾಲ ೬ ಗಂಟೆಗೆ ಪಟ್ಟಣದ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಜರುಗಿತು.ಅಪಾರ ಬಂಧುಗಳು ಹಾಗೂ ಶಿಷ್ಯ ಬಳಗ ಬಿಟ್ಟು ಅಗಲಿದ್ದಾರೆ.ಚನ್ನಪ್ಪ ಮಾಸ್ತರ್ ಅವರ ನಿಧನಕ್ಕೆ ಶಿಷ್ಯ ವೃಂದ ಸೇರಿದಂತೆ ಅನೇಕರು ಶೋಕ ವ್ಯಕ್ತಪಡಿಸಿದ್ದಾರೆ.

Read More

ಕ್ರೀಡೆಗಳಿಂದ ಮಾನಸಿಕ ದೈಹಿಕ ಆರೋಗ್ಯ ವೃದ್ಧಿ: ತಿಪ್ಪಣ್ಣ ಶಿರಸಗಿ

ಯಾದಗಿರಿ: ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಶಿರಸಗಿ ಹೇಳಿದರು. ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಕ್ರೀಡಾ ಇಲಾಖೆ,ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಸಂಯುಕ್ತಾಶ್ರಯದಲ್ಲಿ  ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಹಿರಿಯ ನಾಗರಿಕರಿಗಾಗಿ ವಿವಿಧ ಕ್ರೀಡೆಗಳು ಸಾಂಸ್ಕೃತಿಕ ಸಂಗೀತ ಜಾನಪದ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

Read More
error: Content is protected !!