gulbargametro

ಸೆ.10 ರಂದು ಡಾ. ಎಸ್.ಎಂ.ಪಂಡಿತ ರಂಗಮಂದಿರದ ನವೀಕರಣ ಕಾಮಗಾರಿಯ ಉದ್ಘಾಟನಾ ಸಮಾರಂಭ

ಕಲಬುರಗಿ, : ಕಲಬುರಗಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ 2024-25ನೇ ಮತ್ತು 2025-26ನೇ ಸಾಲಿನ ಕೆ.ಕೆ.ಆರ್.ಡಿ.ಬಿ. ಮ್ಯಾಕ್ರೋ ಯೋಜನೆ ಅಡಿಯಲ್ಲಿ ಡಾ. ಎಸ್.ಎಂ.ಪಂಡಿತ ರಂಗಮಂದಿರದ ನವೀಕರಣ ಕಾಮಗಾರಿಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 10 ರಂದು ಬುಧವಾರ ಬೆಳಿಗ್ಗೆ 10.30 ಗಂಟೆಗೆ ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಜರುಗಲಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ…

Read More

ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿಗೆ ಕಲಬುರಗಿಯ ಡಾ. ಫಾರುಕ್ ಮಣ್ಣೂರ ಆಯ್ಕೆ

ಕಲಬುರಗಿ: ಕಲಬುರಗಿ ನಗರದ ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ. ಫಾರುಕ್ ಮಣ್ಣೂರ ಅವರು ಕಡಿಮೆ ಅವಧಿಯಲ್ಲಿ ಆರೋಗ್ಯ ಕ್ಷೇತ್ರದ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಲಂಡನ ವತಿಯಿಂದ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.ಸೆಪ್ಟೆಂಬರ್ 13, 2025 ರ ಶನಿವಾರ ಮಧ್ಯಾಹ್ನ 12:00 ರಿಂದ ಸಂಜೆ 4:00 ರವರೆಗೆ ಲಂಡನ್ನ ನಲ್ಲಿರುವ ವೆಸ್ಟ್ಮಿನಿಸ್ಟರ್ ಅರಮನೆಯ ಹೌಸ್ ಆಫ್ ಕಾಮನ್ಸ್ನಲ್ಲಿ ಸದಸ್ಯರ ಊಟದ ಕೋಣೆಯಲ್ಲಿ ನಡೆಯಲಿರುವ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ…

Read More

ದಸರಾ ಮತ್ತು ದೀಪಾವಳಿ ಹಬ್ಬ-2025 ವಿಶೇಷ ರೈಲುಗಳ ಸಂಚಾರ

ಕಲಬುರಗಿ, -ಮುಂಬರುವ ದಸರಾ ಹಾಗೂ ದೀಪಾವಳಿ ಹಬ್ಬ-2025ರ ಸಂದರ್ಭದಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸೋಲಾಪುರ ವಿಭಾಗದಿಂದ ಕೇಂದ್ರ ರೈಲ್ವೆ ಇಲಾಖೆಯು ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ ಎಂದು ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ವಿಭಾಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದೌಂಡ್-ಕಲಬುರಗಿ ರೈಲು: ವಾರದಲ್ಲಿ 5 ದಿನಗಳು ಕಾಯ್ದಿರಿಸದ ವಿಶೇಷ (ರೈಲು ಸಂಖ್ಯೆ 01421) ಸೆಪ್ಟೆಂಬರ್ 26 ರಿಂದ ಡಿಸೆಂಬರ್ 1 ರವರೆಗೆ ಪ್ರತಿ ಸೋಮವಾರ, ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ಬೆಳಿಗ್ಗೆ 5 ಗಂಟೆಗೆ…

Read More

ಹೋರಟೂರು ಗ್ರಾಮದಲ್ಲಿ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ-ಇಓ ಸಂಗ್ವಾರ ಚಾಲನೆ

ವಡಗೇರಾ: ಮಕ್ಕಳ ಸ್ನೇಹಿ ಶಾಲಾ ವಾತಾವರಣ ನಿರ್ಮಿಸಲು ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸಮಗ್ರ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಪಂ ಅಧ್ಯಕ್ಷರಿಂದ ಚಾಲನೆ ನೀಡಿದರು. ತಾಲ್ಲೂಕಿನ ಉಳ್ಳೆಸೂಗುರು ಗ್ರಾಪಂ ವ್ಯಾಪ್ತಿಯ ಹೊರಟರು ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಪಂಚಾಯಿತಿಯಿಂದ ಹಮ್ಮಿಕೊಂಡಿದ್ದ “ನಮ್ಮ ಶಾಲೆ ನಮ್ಮ ಅಭಿಯಾನದಡಿ” ಶಾಲಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಈ ಅಭಿಯಾನದಡಿ ತಾಲೂಕಿನ ಉಳ್ಳೆಸೂಗುರು, ಐಕೂರು, ಹೈಯಾಳಿ (ಬಿ), ಟಿ…

Read More

ಕಲಬುರಗಿ ಜಿಲ್ಲೆಯಲ್ಲಿ ಬೆಳೆಹಾನಿ-ಸಮೀಕ್ಷೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಮುಖ್ಯಮಂತ್ರಿಗಳಿಂದ ಮಳೆಹಾನಿ ಬಗ್ಗೆ ಚರ್ಚೆ: ಕಲಬುರಗಿ :  ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ನಡೆದ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ಹಾನಿಯಾಗಿರುವ ಬೆಳೆ ನಷ್ಟದ ಅಂದಾಜನ್ನು ಸಮೀಕ್ಷೆ ಮಾಡಿ 10 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದು, ಅದರಂತೆ ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿರುವ ನಷ್ಟವನ್ನು ಸಮೀಕ್ಷೆ ಮಾಡಲು ತಕ್ಷಣದ ಕ್ರಮ ಕೈಗೊಳ್ಳುವಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ…

Read More

ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಅಹಲ್ಯೆ ಬಾಯಿಯರ ಸಾಹಸ ಮಹಿಳೆಯರಿಗೆ ಸ್ಪೂರ್ತಿ | ಡಾ ಮೇಘಾ ಖಂಡೇಲವಾಲ

ಕಲಬುರ್ಗಿ : ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಿದ್ದರು. ಪೋರ್ಚುಗೀಸರಿಗೆ ಸಿಂಹಸ್ವಪ್ನವಾಗಿದ್ದ ಉಲ್ಲಾಳದ ರಾಣಿ ಅಬ್ಬಕ್ಕ ಜೀವನ, ಶೌರ್ಯ, ಸಾಹಸ ಇಂದಿನ ಮಹಿಳೆಯರಿಗೆ ಸ್ಫೂರ್ತಿ. ಅಬ್ಬಕ್ಕಳ ಸ್ವಾಭಿಮಾನ, ಧೈರ್ಯ ಇಂದಿನ ಮಹಿಳೆಯರಲ್ಲಿ ಇರಬೇಕು ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ಗಣಿತ ವಿಭಾಗದ ಮುಖ್ಯಸ್ಥರಾದ ಡಾ ಮೇಘಾ ಖಂಡೇಲವಾಲ ಹೇಳಿದರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ…

Read More

ಹಾಲುಮತ ಗುರು ಪಿಠದ ಶಾಂತಮಯ ಶ್ರೀಗಳ 33ನೇ ಹುಟ್ಟು ಹಬ್ಬ ಆಚರಣೆ

ಯಾದಗಿರಿ: ಮನುಷ್ಯ ಜೀವಿತಾವಧಿಯಲ್ಲಿ ಸಮಾಜಮುಖಿ ಹಾಗೂ ಪರೋಪಕಾರಿ ಕೆಲಸಗಳನ್ನು ಮಾಡಿದಾಗ ಮಾತ್ರ ಜಿವನ ಸಾರ್ಥಕವಾಗುತ್ತದೆ ಎಂದು ಸಿರುಗುಪ್ಪದ ಪರಮಪೂಜ್ಯ ಶ್ರೀ ಕೈವಲ್ಯಾನಂದ ಮಹಾಸ್ವಾಮಿಗಳು ನುಡಿದರು. ಹುಣಸಗಿ ತಾಲೂಕಿನ ಅಗತಿರ್ಥ ಗ್ರಾಮದಲ್ಲಿ ಶ್ರೀ ಮಠದ ಭಕ್ತರಿಂದ ಹಮ್ಮಿಕೊಂಡಿದ್ದ ಶ್ರೀ ಮದ್ ಜಗದ್ಗುರು ರೇವಣಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮಿಗಳ 33ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಾಂತಮಯ ಶ್ರೀಗಳು ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಆಧ್ಯಾತ್ಮದಲ್ಲಿ ಹೆಚ್ಚಿನ ಪರಿಣಿತಿ ಪಡೆದು ಗ್ರಾಮೀಣ ಭಾಗದಲ್ಲಿ ಹಲವಾರು…

Read More

ಸಂಘಟಿತ ಹೋರಾಟದಿಂದ ಮಾತ್ರ ಜಯಸಾಧ್ಯ:ಮಹೇಶ್ ಗೌಡ ಸುಬೇದಾರ್

ವಡಗೇರಾ: ರೈತ ಸಂಘಟನೆಯ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ರೈತರ ಸಮಸ್ಯೆಗಳ ಕುರಿತಂತೆ ಪ್ರಾಮಾಣಿಕವಾಗಿ ನ್ಯಾಯ ಕೊಡಿಸುವ ಕೆಲಸ ಮಾಡುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯಧ್ಯಕ್ಷರಾದ ಮಹೇಶ್ ಗೌಡ.ಎಂ.ಸುಬೇದಾರ್ ಹೇಳಿದರು.ಶಹಾಪುರ ನಗರದಲ್ಲಿರುವ ರಾಜ್ಯ ರೈತ ಸಂಘ ಹಸಿರು ಸೇನೆ ಕಲ್ಯಾಣ ಕರ್ನಾಟಕ ಕಾರ್ಯಾಲಯದಲ್ಲಿ ರಾಜ್ಯ ರೈತ ಸಂಘ ಹಸಿರು ಸೇನೆ (ಚೂನಪ್ಪ ಪೂಜಾರಿ ಬಣದ) ವಡಗೇರಾ ತಾಲೂಕು ಕಾರ್ಯದರ್ಶಿಯನ್ನಾಗಿ ಬಸನಗೌಡ ಮಾಲಿ ಪಾಟೀಲ್ ತೇಕರಾಳ ರವರನ್ನು ನೇಮಕ ಮಾಡಿ ಅವರು ಮಾತನಾಡಿದರು.ಸಂಘಟಿತ ಹೋರಾಟದಿಂದ ಮಾತ್ರ…

Read More

ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಜಾಗೃತಿ ಕಾರ್ಯಕ್ರಮ

ಸುರಪುರ: ತಾಲೂಕಿನ ದೇವಿಕೇರಾ ಗ್ರಾಮದಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಾ.ಪಂ ಇಓ ಬಸವರಾಜ ಸಜ್ಜನ್ ಮಾತನಾಡಿ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಹಾಗೂ ಸುರಕ್ಷಾ ಭೀಮಾ ಯೋಜನೆಗಳಿಂದ ಪ್ರತಿಯೊಬ್ಬರಿಗೂ ಭದ್ರತೆ ಲಭಿಸಲಿದೆ ಎಂದರು.ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆಯಿಂದ ಸರ್ಕಾರವು ನಾಗರಿಕರ ಭವಿಷ್ಯದ ಭದ್ರತೆಗೆ ಒತ್ತು ನೀಡಿ ೨೦೧೫ರಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ…

Read More

ಸುರಪುರ-ಕುಡಿಯುವ ನೀರಿಗಾಗಿ ತಹಸಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ

ಸುರಪುರ: ತಾಲೂಕಿನ ವಾಗಣಗೇರ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿ ನಗರದ ತಹಸಿಲ್ದಾರ್ ಕಚೇರಿ ಮುಂದೆ ಖಾಲಿ ಕೊಡಗಳೊಂದಿಗೆ ವಾಗಣಗೇರಾ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಾರ್ವಜನಿಕರು,ಕಳೆದ ಅನೇಕ ದಿನಗಳಿಮದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ,ಆದರೆ ಗ್ರಾಮ ಪಂಚಾಯತಿ ಅಧಿಕಾರಿಗಳು ಸಮಸ್ಯೆಯ ಬಗ್ಗೆ ಸ್ವಲ್ಪವೂ ಗಮನಹರಿಸುತ್ತಿಲ್ಲ,ಇದರಿಂದ ಬೇಸತ್ತು ಇಂದು ಹೋರಾಟ ಮಾಡುತ್ತಿದ್ದು,ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡದಿದ್ದಲ್ಲಿ ಗ್ರಾಮ ಪಂಚಾಯತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು. ವಾರ್ಡ್ ಸಂಖ್ಯೆ…

Read More
error: Content is protected !!