ಬಸವ ಸಂಸ್ಕೃತಿ ಅಭಿಯಾನದಲ್ಲಿ ಎಲ್ಲರು ಭಾಗವಹಿಸಿ
ಸುರಪುರ: ಇದೇ ಸಪ್ಟೆಂಬರ್ ೧ ರಿಂದ ಬಸವನಬಾಗೇವಾಡಿಯಲ್ಲಿ ಬಸವ ಸಂಸ್ಕೃತಿ ಅಭಿಯಾನಕ್ಕೆ ಚಾಲನೆ ದೊರೆಯಲಿದ್ದು ಸಪ್ಟೆಂಬರ್ ೪ಕ್ಕೆ ಯಾದಗಿರಿಗೆ ಆಗಮಿಸಲಿದೆ. ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಗುರುಮಠಕಲ್ ಖಾಸಾ ಮಠದ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮೀಜಿ ತಿಳಿಸಿದರು. ನಗರದ ರಂಗAಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿರುವ ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಸಪ್ಟೆಂಬರ್ ೧ ರಂದು ಬಸವನಬಾಗೇವಾಡಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು,೪ ರಂದು ಯಾದಗಿರಿ ನಗರಕ್ಕೆ ಆಗಮಿಸುವ ಅಭಿಯಾನ ಎಸ್.ಎನ್ ಪಾಟೀಲ್ ಕಲ್ಯಾಣ ಮಂಟಾಪದಲ್ಲಿ…


