gulbargametro

ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಅಲ್ಟ್ರಾಸೌಂಡ್ ಮಿಷನ್ ಉದ್ಘಾಟನೆ

ಕಲಬುರಗಿ . ನಗರದ ದುಬೈ ಕಾಲೋನಿ ಹತ್ತಿರವಿರುವ, ನೂತನವಾಗಿ ಆರಂಭಗೊಂಡ, 100 ಹಾಸಿಗೆಗಳುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಅಲ್ಟ್ರಾಸೌಂಡ್ ಮಿಷನ್ ಉದ್ಘಾಟನೆಯನ್ನು ನೇರೆವೇರಿಸಿ ಅವರು ಗರ್ಭಿಣಿ ತಾಯಿಯoದಿರಿಗೆ ದೂರಾದ ಹಾದಿಗೆ ಹೋಗದೆ ಸುಗಮವಾಗಿ ತಾಯಿ ಹೆರಿಗೆ ಆಗಲು ಅವರು ಸಮಸ್ಯೆ – ತೊಂದರೆಗಳಿಗೆ ಈಡಾಗದೆ ಸುಗಮವಾಗಿ ಹೆರಿಗೆ ಆಗಲು ಸಾರ್ವಜನಿಕರು ಹಾಗೆ ಗರ್ಭಿಣಿ ತಾಯಿoದಿರು ಸ್ಕ್ಯಾನಿಂಗ್ ತಪಾಸಣೆ ಮಾಡಿಕೊಳ್ಳಲು ಇದರ ಸದುಪಯೋಗವನ್ನು, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಡಾ. ಶರಣಬಸಪ್ಪ ಕ್ಯಾತನಾಳ ಪಡೆದುಕೊಳ್ಳುಲು…

Read More

ಜಿಲ್ಲಾಧಿಕಾರಿಗಳಿಂದ‌ ಬೆಳೆ ಹಾನಿ‌ ಪ್ರದೇಶ ವೀಕ್ಷಣೆ

ಕಲಬುರಗಿ :  ಜಿಲ್ಲೆಯ ಕಾಳಗಿ ಹಾಗೂ ಚಿಂಚೋಳಿ ತಾಲ್ಲೂಕು ವ್ಯಾಪ್ತಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಬೆಳೆ ಹಾನಿ ಕುರಿತಂತೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರುನ್ನಮ್ ಅವರು ಮಂಗಳವಾರ ಪರಿವೀಕ್ಷಣೆ ನಡೆಸಿದರು. ಇದೇ ಸಂದರ್ಭದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಸಹ ಪರಿಶೀಲಿಸಿ ತುರ್ತಾಗಿ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಿಳಿಸಿದರು. ಕಂದಾಯ ಇಲಾಖೆಯ ಅಧಿಕಾರಿಗಳ ಸಭೆ ಕರೆದು ವಿಪತ್ತು ನಿರ್ವಹಣಾ ಕೆಲಸಗಳನ್ನು ಪ್ರಥಮಾದ್ಯತೆ ಮೇಲೆ ಮಾಡುವಂತೆ ಸೂಚಿಸಿದರು. ಕಾಳಗಿಯಲ್ಲಿ ನಿರ್ಮಿಸಲಾಗಿರುವ ಚುನಾವಣಾ ಸ್ಟ್ರಾಂಗ್ ರೂಮ್ ವೀಕ್ಷಿಸಿದ…

Read More

ವಚನ ಸಾಹಿತ್ಯ ಕನ್ನಡದ ಸಾಹಿತ್ಯ ಪ್ರಕಾರಗಳಲ್ಲಿ ಪ್ರಮುಖವಾಗಿದೆ-ಪ್ರಶಾಂತ

ಸುರಪುರ: ವಚನ ಸಾಹಿತ್ಯ ಕನ್ನಡ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದಾಗಿದೆ. ವಚನ ಎಂದರೆ ಪ್ರಮಾಣ, ಮಾತು ಎಂದರ್ಥ. ವಚನಗಳು ಚಿಕ್ಕ ಚಿಕ್ಕ ಗದ್ಯದ ತುಣುಕುಗಳಾಗಿದ್ದು, ಅನುಭಾವ ಮತ್ತು ಸಾಮಾಜಿಕ ಕಾಳಜಿಯನ್ನು ವ್ಯಕ್ತಪಡಿಸುತ್ತವೆ ಎಂದು ಶ್ರೀ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ಪ್ರಶಾಂತ ಸೇರಿಕಾರ ಮಾತನಾಡಿದರು. ನಗರದ ನಿಷ್ಠಿ ಕಡ್ಲೆಪ್ಪನವರ ವಿರಕ್ತ ಮಠದಲ್ಲಿ ಜರುಗಿದ ಶ್ರಾವಣ ಶ್ರವಣ ಶಿವಾನುಭವ ಚಿಂತನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ, ಬಸವಣ್ಣನವರು ವಚನ ಚಳುವಳಿಯ ಪ್ರಮುಖ ನಾಯಕರಾಗಿದ್ದರು. ಅವರು ಅನುಭವ ಮಂಟಪ ಎಂಬ…

Read More

ಕರ್ನಾಟಕ ಸರ್ಕಾರದ “ಎಲಿವೇಟ್“ ಪ್ರೋತ್ಸಾಹದಿಂದೊಂದಿಗೆ ಯಶಸ್ಸಿನತ್ತ ನವೋದ್ಯಮಗಳು- ಸಚಿವ ಪ್ರಿಯಾಂಕ್ ಖರ್ಗೆ ಹರ್ಷ

ಕಲಬುರಗಿ : ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಜಾರಿಗೆ ತಂದಿರುವ ಎಲಿವೇಟ್ ಸಹಾಯಧನ ಕಾರ್ಯಕ್ರಮದ ನೆರವು ಪಡೆದ ಬೆಂಗಳೂರು ಮೂಲದ ಏರೋಸ್ಪೇಸ್ ಕಂಪೆನಿಯೊಂದು AI-ಸ್ಥಳೀಯ ರೇಡಿಯೋ ಆವರ್ತನ ಉಪಗ್ರಹ ಮೂಲಸೌಕರ್ಯವನ್ನು ನಿರ್ಮಿಸಲು $2.5 ಮಿಲಿಯನ್ ಪ್ರೀ ಸೀಡ್ ಫಂಡ್ ಸಂಗ್ರಹಿಸಿದೆ. ಎಲಿವೇಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಧನಸಹಾಯ ಪಡೆಯಲು ಅರ್ಹತೆ ಪಡೆದ ವಿಜೇತ ಕಂಪೆನಿಗಳು ಯಶಸ್ಸಿನೆಡೆಗೆ ಉನ್ನತಿಯನ್ನು ಸಾಧಿಸುತ್ತಿರುವುದು ತಮಗೆ ಸಂತೋಷ ತಂದಿದೆ. ವಿನೂತನ ಚಿಂತನೆಗಳನ್ನು ಹೊಂದಿದ ಪ್ರತಿಭಾವಂತರನ್ನು ಪ್ರೋತ್ಸಾಹಿಸುವ…

Read More

ಲೋಕಾಯುಕ್ತ ಎಸ್ಪಿ ಸಿದ್ದರಾಜು ತಂಡ ದಿಢೀರನೇ KRIDL ಕಾರ್ಯಾಲಯ ಭೇಟಿ

ಕಲಬುರಗಿ : ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಾರ್ಯಾಲಯಕ್ಕೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ಅವರ ತಂಡದಿ ದಿಢೀರನೇ ಭೇಟಿ ನೀಡಿ ಜಿಲ್ಲೆಯ ಎಲ್ಲಾ ತಾಲೂಕುಗಳ ಪ್ರಗತಿ ಪರಿಶೀಲನೆ, ಹಾಗೂ ದಾಖಲೆಗಳು, ಡಿವಿಜನ್ ಮತ್ತು ಸಬ್ ಡಿವಿಜನ್ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

Read More

ವಿದ್ಯಾರ್ಥಿಯರ ಪ್ರತಿಭೆ ಪ್ರೋತ್ಸಾಹಿಸಲು ಗೋಡೆ ಪತ್ರಿಕೆ ಸಹಕಾರಿ: ಡಾ. ಸತ್ಯಂಪೇಟೆ

ಕಲಬುರಗಿ: ಇಂದಿನ ಆಧುನಿಕ ಯುಗದಲ್ಲಿ ಎಲ್ಲ ವಿದ್ಯಾರ್ಥಿಗಳು ಕೇವಲ ಮೊಬೈಲ್ ವಶಕ್ಕೆ ಸಿಲುಕಿದ್ದಾರೆ, ಇಂತಹ ಸಂದರ್ಭದಲ್ಲಿ ಕಾಲೇಜಿನ ಗೋಡೆ ಪತ್ರಿಕೆ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸಹಕಾರಿ ಎಂದು ರಾಜ್ಯ ಪತ್ರಕರ್ತ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಡಾ. ಶಿವರಂಜನ ಸತ್ಯಂಪೇಟೆ ನುಡಿದರು. ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ ವಿಭಾಗದವರು ಸಂಚಾಲಿತ “ಮುಕ್ತ ಮನಸು” ಗೋಡೆ ಪತ್ರಿಕೆ ಬಿಡುಗಡೆ ಗೊಳಿಸಿ ಮಾತನಾಡಿದರು. ಕನ್ನಡ ವಿಭಾಗದವರು ಈ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭೆಯನ್ನು…

Read More

ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ: ಶ್ರೀ ಕರುಣೇಶ್ವರ ಸ್ವಾಮಿಜೀ

ವಡಗೇರಾ: ಅರಣ್ಯ ನಾಶದಿಂದಲೇ ಪ್ರಕೃತಿ ವಿಕೋಪಗಳು ಹೆಚ್ಚಾಗುತ್ತಿವೆ ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ ಎಂದು ಕೃಷ್ಣವೇಣಿ ಭೀಮಾ ಸಂಗಮದ ಸಂಗಮೇಶ್ವರ ಮಠದ ಪರಮಪೂಜ್ಯ ಕರುಣೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.ತಾಲೂಕಿನ ಕೃಷ್ಣವೇಣಿ ಭೀಮಾ ಸಂಗಮದ ಸಂಗಮೇಶ್ವರ ದೇವಸ್ಥಾನದಲ್ಲಿ ಶ್ರೀ ಕರುಣೇಶ್ವರ ಶ್ರೀಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸಸಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಶುದ್ಧ ಗಾಳಿ ಉತ್ತಮ ಪರಿಸರ ನಿರ್ಮಾಣಕ್ಕೆ ಗಿಡ ಮರಗಳು ಸಂರಕ್ಷಣೆಯ ಅವಶ್ಯಕತೆ ಇದೆ ಪರಿಸರವನ್ನು ನಾವು ಕಾಪಾಡಿದ್ದೆ ಆದಲ್ಲಿ ಅದು ನಮ್ಮನ್ನು ಕಾಪಾಡುತ್ತೆ ಇತ್ತೀಚಿಗೆ…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮಹಾನ್ ದೇಶಪ್ರೇಮಿ:ಮಲ್ಲಣ್ಣ ಐಕೂರ

ವಡಗೇರಾ: ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಜೀವವನ್ನೇ ತ್ಯಾಗ ಮಾಡಿದ ಮಹಾನ್ ದೇಶಪ್ರೇಮಿ ಎಂದು ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ಹೆಳಿದರು. ಖಾನಾಪುರ ಗ್ರಾಮದಲ್ಲಿ ಆಗಸ್ಟ್ 15 ಶುಕ್ರವಾರದಂದು ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 228 ನೇ ಜಯಂತಿ ಹಾಗೂ ಸಂಗೊಳ್ಳಿ ರಾಯಣ್ಣರ ನಾಮಫಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣನವರು ಒಂದು ಜಾತಿಗೆ ಸೀಮಿತವಾಗದೆ ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ಸ್ವಾತಂತ್ರ್ಯ ಸಿಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಇಂದಿನ…

Read More

ಬೆಳಗಾವಿಯಲ್ಲಿ ತಪ್ಪಿದ ಭಾರೀ ವಿಮಾನ ದುರಂತ : 48 ಜನರ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಬೆಳಗಾವಿ : ಬೆಳಗಾವಿಯಲ್ಲಿ ಭಾರೀ ವಿವಾನ ದುರಂತ ತಪ್ಪಿದೆ. ತಾಂತ್ರಿಕದೋಷದಿOದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಬೆಳಗಾವಿಯಿಂದ ಮುಂಬೈಗೆ ಹೊರಟ್ಟಿದ್ದ ವಿವಾನ, ಸ್ಟಾರ್ ಏರ್‌ನ ಎಸ್5111 ವಿಮಾನದಲ್ಲಿ   ತಾಂತ್ರಿಕದೋಷಕಂಡು ಬಂದಿದ್ದು, ೧೫ ನಿಮಿಷ ವಿಮಾನ ಹಾರಾಟವನ್ನು ನಡೆಸಿ ನಂತರ ತುತು ಭೂಸ್ಪರ್ಶ ಮಾಡಿದೆ.ವಿಮಾನದಲ್ಲಿ ಒಟ್ಟು 48 ಜನ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದು, ಎಲ್ಲಾರೂ ಸುರಕ್ಷಿತವಾಗಿದ್ದಾರೆ. ಪೈಲಟ್ ಸಮಯಪ್ರಜ್ಞೆಯಿಂದ 48 ಜನರ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read More
error: Content is protected !!