ಚಂಡ್ರಿಕಿ ಗ್ರಾಮದಲ್ಲಿ ಶಾಂತಿ ಸಭೆ – ಹಬ್ಬಗಳನ್ನು ಸೌಹಾರ್ದತೆ ಯಿಂದ ಆಚರಿಸೋಣ: ಡಿವೈಎಸ್ಪಿ ಸುರೇಶ್
ಗುರುಮಠಕಲ್: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿ ಸೌಹಾರ್ದತೆಯೊಂದಿಗೆ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗದಂತೆ ಆಚರಿಸಿ ಎಂದು ಡಿವೈಎಸ್ಪಿ ಸುರೇಶ್. ಎಮ್ ಅವರು ಹೇಳಿದರು. ತಾಲ್ಲೂಕಿನ ಚಂಡ್ರಿಕಿ ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಹಬ್ಬದ ವೇಳೆ ಯಾವುದೇ ಕಾನೂನು ಸುವ್ಯವಸ್ಥೆ ಸಮಸ್ಯೆಗಳು ಎದುರಾಗದಂತೆ ಎಲ್ಲ ಸಮುದಾಯದ ಜನರು ಪರಸ್ಪರ ಸಹಕಾರ ಮತ್ತು ಸಹಾನುಭೂತಿಯಿಂದ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಹಬ್ಬಗಳನ್ನು ಸಮಾನ ಮನೋಭಾವದಿಂದ ಆಚರಿಸುವುದು ಸಮಾಜದಲ್ಲಿ ಶಾಂತಿ, ಸಾಮರಸ್ಯ…


