ಜಾನಪದ ಕಲಾವಿದರ ಸಂಭ್ರಮ : ಜಾನಪದ ಕಲೆಗಳನ್ನು ಉಳಿಸಿ
ಕೆಂಭಾವಿ : ನಮ್ಮ ಪೂರ್ವಜರು ತಲೆಮಾರುಗಳಿಂದ ಉಳಿಸಿಕೊಂಡು ಬಂದಿರುವ ಜಾನಪದ ಕಲೆಗಳನ್ನು, ಹಾಡುಗಳನ್ನು, ನೃತ್ಯಗಳನ್ನು ಮತ್ತು ಕಥೆಗಳನ್ನು ಸಂರಕ್ಷಿಸುವುದು ನಮ್ಮ ಮೊದಲ ಉದ್ದೇಶವಾಗಿರಬೇಕು. ಈ ಕಲೆಗಳು ನಮ್ಮ ನಾಡಿನ ಇತಿಹಾಸ ಮತ್ತು ಬದುಕಿನ ಮೌಲ್ಯಗಳನ್ನು ಪ್ರತಿಬಿಂಬಿಸುತ್ತವೆ. ಗ್ರಾಮೀಣ ಭಾಗದಲ್ಲಿ ಯಾವುದೇ ಪ್ರಚಾರವಿಲ್ಲದೆ, ಕೇವಲ ಕಲೆಯ ಮೇಲಿನ ಪ್ರೀತಿಯಿಂದಲೇ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವ ನಮ್ಮ ಕಲಾವಿದರನ್ನು ಗುರುತಿಸಿ, ಅವರಿಗೆ ಗೌರವ ಮತ್ತು ಪ್ರೋತ್ಸಾಹ ನೀಡಬೇಕು ಎಂದು ಶ್ರೀ ವೆಂಕಟೇಶ್ವರ ಶಿಕ್ಷಣ ಮತ್ತು ಗ್ರಾಮೀಣಾಭಿರುದ್ಧಿ ಸಂಸ್ಥೆ, (ಬೈಚಬಾಳ) ಅಧ್ಯಕ್ಷ ಗುರುನಾಥ…


