ಅಕ್ಟೋಬರ್ 27 ಮತ್ತು 30 ಹಾಗೂ ನವೆಂಬರ್ 3ಕ್ಕೆ ಮಿಂಚಿನ‌ ನೋಂದಣಿ ಅಭಿಯಾನ -ಜಹೀರಾ ನಸೀಮ್

ಕಲಬುರಗಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಭಾಗವಾಗಿ ಇದೇ ಅಕ್ಟೋಬರ್ 27 ಮತ್ತು 30 ಹಾಗೂ ನವೆಂಬರ್ 3ಕ್ಕೆ ಬೆಳಿಗ್ಗೆ 10 ರಿಂದ‌‌ ಸಂಜೆ‌ 5.30 ಗಂಟೆ ವರೆಗೆ ವಿಶೇಷ ಮಿಂಚಿನ‌ ನೋಂದಣಿ ಅಭಿಯಾನ ಕ್ಷೇತ್ರದಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ತಿಳಿಸಿದ್ದಾರೆ.01.11.2025 ಅರ್ಹತಾ ದಿನಾಂಕಕ್ಕೆ ಅನ್ವಯಸುವಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆದಿದ್ದು, ಅರ್ಹ ಮತದಾರರು ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ಕೊನೆಯ ದಿನವಾಗಿದ್ದು,…

Read More

ನಮ್ಮ ಸರ್ಕಾರ ರೈತರ ಪರವಾಗಿದೆ ಆತಂಕ ಬೇಡ: ಡಾ.ಭೀಮಣ್ಣ ಮೇಟಿ

ವಡಗೇರಾ: ನಮ್ಮ ಕಾಂಗ್ರೆಸ್ ಸರ್ಕಾರ ರೈತರ ಪರವಾಗಿದ್ದು ಮುಖ್ಯಮಂತ್ರಿಗಳು ಈಗಾಗಲೇ ರೈತರಿಗೆ ಸಮರ್ಪಕ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ರೈತರಲ್ಲಿ ಆತಂಕ ಬೇಡ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೆಟಿ ಹೇಳಿದರು. ಯಾದಗಿರಿ ಮತಕ್ಷೇತ್ರದ ವಡಗೇರಾ ,ಕಂದಳ್ಳಿ, ಬೂದಿನಾಳ,ಕೋನಳ್ಳಿ, ಹಾಗೂ ಇನ್ನಿತರ ಗ್ರಾಮಗಳಲ್ಲಿ ಭೀಮಾ ನದಿ ಪ್ರವಾಹ ಮತ್ತು ಮಳೆಯಿಂದ ಹಾನಿಗೊಳಗಾದ ಜಮೀನುಗಳ ಬೆಳೆ ವೀಕ್ಷಣೆ ಮಾಡಿ ಅವರು ಮಾತನಾಡಿದರು.ಬೆಳೆ ಹಾನಿ ಪ್ರದೇಶಗಳಲ್ಲಿ ಈಗಾಗಲೇ ಸರಕಾರದ ಆದೇಶದಂತೆ ಅಧಿಕಾರಿಗಳು ಸರ್ವೆ ಕಾರ್ಯ ಆರಂಭಿಸಿದ್ದಾರೆ.ರೈತರು…

Read More

ಸೈಯ್ಯದ್ ಮಹಿಮೂದ್ ಸಾಹೇಬ ಅವರಿಗೆ ಯುವ ಕಾಂಗ್ರೇಸ್ ವತಿಯಿಂದ ಸನ್ಮಾನ

ಕಲಬುರಗಿ (ಕರ್ನಾಟಕ ತೊಗರಿ ಅಭಿವೃದ್ದಿ ಮಂಡಳಿ) ಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ , ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಸೈಯ್ಯದ್ ಮಹಿಮೂದ್ ಸಾಹೇಬ ಅವರಿಗೆ ಯುವ ಕಾಂಗ್ರೇಸ್ ವತಿಯಿಂದ ಸನ್ಮಾನಿಸಲಾಯಿತು . ಈ ಸಂದರ್ಭದಲ್ಲಿ ಸಾಮಾಜೀಕ ಜಾಲಾತಾಣ ಅಧ್ಯಕ್ಷರಾದ ಜಗದೀಶ ಜಾಧವ ಉಪಾಧ್ಯಕ್ಷರು ಚಂದ್ರು ಧನ್ನೆಕರ, ಪ್ರಧಾನ ಕಾರ್ಯದರ್ಶಿಗಳು ಶರಣು ಬಂದಳ್ಳಿ, ವಾಜೀದ ಖಾನ, ಪ್ರದೀಪ್ ಸಿಂಘೆ, ಜಾನ್ ರಿಜರ್ಡ್, ನಿಂಗಪ್ಪ ಶಾರದಳ್ಳಿ, ರಮೇಶ ಹೇರೂರ ಮುಂತಾದವರು ಉಪಸ್ಥಿತಿದರು

Read More

ರೈತರನ್ನು ಧೈರ್ಯ ತುಂಬಿ ಪರಿಹಾರ ನೀಡುವ ಮೂಲಕ ರಾಜ್ಯದ ರೈತರ ಹಿತಕಾಪಾಡಿ | ಬಿವೈ ವಿಜಯೇಂದ್ರ

ಬೀದರ್ : ಕೇವಲ ಮೀಟಿಂಗ್ ಮಾಡುವುದರಲ್ಲಿ ಕಾಲ ಕಳೆಯುವ ಬದಲು ರಾಜ್ಯದ ರೈತರ ಬಳಿ ಬಂದು ರಾಜ್ಯದಲ್ಲಿ ಆದ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ ರೈತರನ್ನು ಧೈರ್ಯ ತಂಬಿ ಪರಿಹಾರ ನೀಡುವ ಮೂಲಕ ರಾಜ್ಯದ ರೈತರ ಹಿತಕಾಪಾಡುವಂತೆ  ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ‌ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಆಗ್ರಹಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಮತ್ತು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ…

Read More

ಮಹಾರಾಷ್ಟ್ರ ರಾಜ್ಯದ ಉಜ್ಜನಿ, ಮತ್ತು ಸಿನಾ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡಗಡೆ

ಕಲಬುರಗಿ : ಮಹಾರಾಷ್ಟ್ರ ರಾಜ್ಯದ ಉಜ್ಜನಿ, ಮತ್ತು ಸಿನಾ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡಲಾಗುತ್ತಿದೆ. ಎಂದು ಜಿಲ್ಲಾಡಳಿತ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ ಉಜ್ಜನಿ ಜಲಾಶಯ, 40000 ಕ್ಯೂ,ಎ ಮೂಲಕ ಕೆ.ಟಿ.ವೀರ್ ಹಿಲ್ಲಿ, 1,39,000, ಭೋರಿ ಹಳ್ಳ, 5000, ಒಟ್ಟು (ಭೀಮಾ ನದಿಗೆ) 1,84,000, ಮಹಾರಾಷ್ಟ್ರ ರಾಜ್ಯದ ಉಜ್ಜನಿ ಮತ್ತು ಸಿನಾ ಜಲಾಶಯದಿಂದ ಭೀಮಾ ನದಿಗೆ 1.84 ಲಕ್ಷ ಕ್ಯುಸೆಕ್ ನೀರು ಬಿಡಲಾಗುತ್ತಿದೆ. ಈ ನೀರು ಅಫಜಲಪೂರ ತಾಲ್ಲೂಕಿನ ಭೀಮಾ ಸೊನ್ನ ಬ್ಯಾರೇಜಿಗೆ ಇಂದು ಬಂದು…

Read More

ಸೇಡಂ ತಾಲೂಕಿನಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಳೆ ಹಾನಿ, ಪ್ರವಾಹ ಸ್ಥಳಗಳಿಗೆ ಭೇಟಿ, ಪರಿಶೀಲನೆ

ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ವರದಿ ಸಲ್ಲಿಸಿ : ಸಚಿವ ಡಾ.ಶರಣಪ್ರಕಾಶ ಸೂಚನೆ ಸೇಡಂ. : ಮಳೆಯಿಂದ ಹಾನಿಯಾದ, ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ‌ ನೀಡಬೇಕು. ಫೋಟೋ ತೆಗೆದುಕೊಂಡು ಹಾಕುವುದಲ್ಲ, ಜನರ ಕಷ್ಟಗಳನ್ನು ಆಲಿಸಿ ಸೂಕ್ತ ಕ್ರಮ ವಹಿಸಿ ತಕ್ಷಣವೇ ವರದಿ ಸಲ್ಲಿಸಿ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ಕಳೆದ ನಾಲ್ಕೈದು ದಿನಗಳಿಂದ ನಿರಂತರ ಮಳೆ ಸುರಿದ ಪರಿಣಾಮವಾಗಿ ಸೇಡಂ ತಾಲೂಕಿನ ಮಳಖೇಡ ಕಾಗಿಣಾ ನದಿ ಪ್ರವಾಹ…

Read More

ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚನೆ

ಕಲಬುರಗಿ : ಮಳೆ ಹಾಗೂ ಪ್ರವಾಹ ಪೀಡಿತ ಚಿತ್ತಾಪುರ ತಾಲೂಕಿನ ಹಳೆ ಹೆಬ್ಬಾಳ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಈ ಸಂದರ್ಭದಲ್ಲಿ ಅವರು ಮಳೆಯಿಂದ ಬಿದ್ದ ಮನೆಯನ್ನು ಪರಿಶೀಲಿಸಿ ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಳೆ ಹೆಬ್ಬಾಳ ಗ್ರಾಮವನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು ಸಚಿವರ ಮುಂದೆ ಬೇಡಿಕೆ ಇರಿಸಿದರು. ಗ್ರಾಮಸ್ಥರಿಗೆ ಸ್ಪಂದಿಸಿದ ಸಚಿವರು…

Read More

ಸರ್ಕಾರ ಕೂಡಲೇ ಹೆಚ್ಚಿನ ಪರಿಹಾರ ಘೋಷಿಸಲಿ

ವಡಗೇರಾ ತಾಲೂಕಿನ ವಿವಿಧೆಡೆ ಬೆಳೆನಷ್ಟ ವೀಕ್ಷಣೆ ಬಿಜೆಪಿ ಯುವ ನಾಯಕ ಮಹೇಶರಡ್ಡಿ ಮುದ್ನಾಳ್ ಆಗ್ರಹ ಯಾದಗಿರಿ: ಮಹಾರಾಷ್ಟ್ರದಿಂದ ಭೀಮಾ‌ನದಿಗೆ ಅಧಿಕ ಪ್ರಮಾಣದ ನೀರು ಹರಿ ಬಿಟ್ಟಿರುವುದು ಮತ್ತು ಭಾರಿ ಮಳೆಯಿಂದ ಬೆಳೆನಷ್ಟವಾದ ಹಿನ್ನಲೆಯಲ್ಲಿ ಬಿಜೆಪಿ ಯುವ ನಾಯಕ ಮಹೇಶರಡ್ಡಿ ಮುದ್ನಾಳ್ ಶುಕ್ರವಾರ ವಡಗೇರಾ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಭೇಟಿ ನೀಡಿ, ರೈತರ ಅಳಲು ಆಲಿಸಿದರು. ಮೊದಲು ಹಾಲಗೇರಾ, ಗೋಡಿಹಾಳ, ಕುಮನೂರು ಗ್ರಾಮಗಳಿಗೆ ಭೇಟಿ ನೀಡಿ ರೈತರು ಬೆಳೆದ ಹತ್ತಿ ಬೆಳೆ ಹಾಳಾಗಿದ್ದನ್ನು ವೀಕ್ಷಿಸಿದರು. ಈ ವೇಳೆ ರೈತರು…

Read More

ಕಾಳಜಿ ಕೇಂದ್ರಕ್ಕೆ | ಬೆಳೆ ಹಾನಿ ಪ್ರದೇಶಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ಪರಿಶೀಲನೆ

ಅಫಜಲಪುರ : ತಾಲೂಕಿನ ದೇವಲ್ ಗಾಣಗಾಪುರ ಗ್ರಾಮದ ಬಳಿ ತಾತ್ಕಾಲಿಕವಾಗಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಅಲ್ಲಿನ ನಿವಾಸಿಗಳೊಂದಿಗೆ ಮಾತನಾಡಿ, ಸೌಲಭ್ಯ ಒದಗಿಸಿರುವುದರ ಕುರಿತು ಮಾಹಿತಿ ಪಡೆದುಕೊಂಡರು. ತಾಲೂಕಿನ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಕೂಡಾ ಸಚಿವರ ಪರಿಶೀಲಿಸಿ ರೈತರೊಂದಿಗೆ ಮಾತನಾಡಿದರು.ತೊಗರಿ ಸೇರಿದಂತೆ ಇತರೆ ಬೆಳೆ ಹಾನಿಗೀಡಾಗಿರುವುದನ್ನು ಪರಿಶೀಲಿಸಿದ ಸಚಿವರು ಸ್ಥಳದಲ್ಲಿದ್ದ ಕೃಷಿ ಹಾಗೂ ಇತರೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಬೆಳೆ ಹಾನಿಯಾದ ಕುರಿತು ಸಮರ್ಪಕ ಹಾಗೂ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು.

Read More

ಶಾಲಾ ಮಕ್ಕಳ ಕಲಾ ಪ್ರದರ್ಶನ

ಚಿತ್ತಾಪುರ ತಾಲೂಕಿನ ಸ್ಟೇಷನ್ ತಾಂಡಾದ ತುಕಾರಾಮ ಖೀರು ನಾಯಕ್ ಏರಿಯಾದಲ್ಲಿ ಮೂರನೇ ವರ್ಷದ ನವರಾತ್ರಿ ಕಾರ್ಯಕ್ರಮದ ನಿಮಿತ್ಯ ಶಾಲೆಗಳ ಮಕ್ಕಳ ಕಲಾ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಪ್ರಾರ್ಥನಾ ಶಾಲೆಯ ವಿದ್ಯಾರ್ಥಿಗಳು ಹಾಗೂ ಎಕ್ಸಲೆಂಟ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದರು ಕಾರ್ಯಕ್ರಮದ ನಿರ್ಣಾಯಕರಾಗಿ ಶಂಕರ್ ಚೋಕ್ಲಾ ಚೌಹಾನ್ ರವಿ ಜಯರಾಮ್ ರಾಠೋಡ್ ಹಾಗೂ ವೆಂಕಿ ಜಾದವ್ ವಿನೋದ್ ಚೋಕ್ಲಾ ಚೌಹಾನ್ ರಮೇಶ್ ಹನುಮ ಪವಾರ ಆಗಿದ್ದರು . ಈ ಒಂದು ಕಲಾ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಒಳ್ಳೆಯ…

Read More
error: Content is protected !!