ದೇವರಾಜ್ ಅರಸು ಜಯಂತಿ ಆಚರಣೆ

ಜೇವರ್ಗಿ ೨೦ : ತಾಲ್ಲೂಕಾ ಆಡಳಿತ ವತಿಯಿಂದ. ಹಾಗೂ ತಾಲ್ಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಿನಿ ವಿಧಾನ ಸೌಧದಲ್ಲಿ ಇಂದು ಡಿ. ದೇವರಾಜ ಅರಸು ಅವರ ೧೧೦ ನೇ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ತಹಶೀಲ್ದಾರ ಮಲ್ಲಣ್ಣ ಯಲಗೋಡ ಅವರು ಮಾತನಾಡಿ ಉಳುವವನೇ ಭೂ ಒಡೆಯ ಎಂಬ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದು ದಲಿತರಿಗೆ ಹಿಂದುಳಿದವರ್ಗದವರಿಗೆ ಭೂಹೀನರಿಗೆ ಬಡವರಿಗೆ ಭೂಮಿಯನ್ನು ನೀಡಿ ಭೂ ಕ್ರಾಂತಿಯನ್ನೇ ಮಾಡಿದ ಹೆಮ್ಮೆಯ ನಾಯಕ ಮತ್ತು ಹಿಂದುಳಿದವರ್ಗದ ಕಣ್ಣಾಗಿ ರಾಜ್ಯದ…

Read More

ದೇವರಾಜ್ ಅರಸ್ ನಾಡು ಕಂಡ ಅಪರೂಪದ ರಾಜಕಾರಣಿ: ಹೊನ್ನಯ್ಯ ಕೊಂಕಲ್

ವಡಗೇರಾ: ಮಾಜಿ ಮುಖ್ಯಮಂತ್ರಿ ಡಿ ದೇವರಾಜ್ ಅರಸ್ ರವರು ನಾಡುಕಂಡ ಅಪರೂಪದ ರಾಜಕಾರಣಿ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಎಂದು ಪ್ರಾಂಶುಪಾಲ ಹೊನ್ನಯ್ಯ ಕೊಂಕಲ್ ಹೆಳಿದರು. ಪಟ್ಟಣದ ಡಿಡಿಯು ಸಿಬಿಎಸ್ ಸಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಡಿ.ಡಿ.ಯು ಸ್ವತಂತ್ರ ಪದವಿ ಪೂರ್ವ ಕಾಲೇಜು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಿ ದೇವರಾಜ್ ಅರಸ್ ರವರ 110ನೇ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.ಡಿ ದೇವರಾಜ ಅರಸರು ದೀನ ದಲಿತರ ಆಶಾ ಕಿರಣ್…

Read More

ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

ಚಿಂಚೋಳಿಯ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ಜರಗಿತು. ಸಭೆ ಉದ್ದೇಶಿಸಿ ಚಿಂಚೋಳಿಯ ಪೊಲೀಸ್ ಠಾಣೆಯ ಸಿಪಿಐ ಕಪಿಲದೇವ್, ಅವರು ಮಾತನಾಡಿ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಈ ಸಭೆ ಕರೆಯಲಾಗಿದ್ದು ಚಿಂಚೋಳಿ ತಾಲೂಕ ಬಹಳಷ್ಟು ಶಾಂತಿಯತೆಯಿಂದ ಜನರು ಇರುತ್ತಾರೆ ಯಾಕೆಂದರೆ ನಾನು ಒಂದು ವರ್ಷ ಆಯ್ತು ನಾನು ಇಲ್ಲಿ ಸಿಪಿಐ ಆಗಿ ಸೇವೆ ಮಾಡುತ್ತಿದ್ದು ಚಿಂಚೋಳಿಯಲ್ಲಿ ನನ್ನ ವ್ಯಾಪ್ತಿಯಲ್ಲಿ ಯಾವುದೇ ಒಂದು ಗಲಾಟೆ…

Read More

ಕೋನಾರ್ಕ್,ಎಲ್‌ಟಿಟಿ,ಇಂದೋರ್ ಎಕ್ಸಪೇಸ್ ರೈಲುಗಳ ನಿಲುಗಡೆಗೆ ಬಿಜೆಪಿ ಮನವಿ

ಚಿತ್ತಾಪುರ : ಚಿತ್ತಾಪುರ ರೈಲು ನಿಲ್ದಾಣಕ್ಕೆ, 18519/18520-ಲೋಕಮಾನ್ಯ ತಿಲಕ್ (LTT), 11019,11020-ಕೋನಾರ್ಕ್ ಎಕ್ಸ್‌ಪ್ರೆಸ್‌, 20915-20916-ಲಿಂಗಂಪಳ್ಳಿ ಟು ಇಂದೋರ್ ಎಕ್ಸ್‌ಪ್ರೆಸ್ ಚಿತ್ತಾಪುರ ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆ ಮಾಡಬೇಕೆಂದು ಇಂದು ದಕ್ಷಿಣ ರೈಲ್ವೆ ಸಿಕಂದರಾಬಾದ್ ಡಿಆರ್ ಎಂ ಅವರಿಗೆ ಬಿಜೆಪಿ ಮುಖಂಡರು ಮನವಿ ಪತ್ರವನ್ನು ಸಲ್ಲಿಸಿದರು. ಚಿತ್ತಾಪುರ ಪಟ್ಟಣದಲ್ಲಿ ಲೋಕಮಾನ್ಯ ತಿಲಕ್ (LTT)-ಕೋನಾರ್ಕ್, -ಲಿಂಗಂಪೈಲಿಯಿಂದ ಇಂದೋರ್ ಎಕ್ಸ್‌ಪ್ರೆಸ್‌ಗೆ ಹೋಗುವ ರೈಲುಗಳು ಚಿತ್ತಾಪುರ ರೈಲು ನಿಲ್ದಾಣದಲ್ಲಿ ನಿಲ್ಲುತ್ತಿಲ್ಲ. ರೈಲುಗಳು ಇಲ್ಲಿ ನಿಲ್ಲದ ಕಾರಣ ಅನೇಕ ಪ್ರಯಾಣಿಕರು ಮತ್ತು ಉದ್ಯಮಿಗಳು ಅನಾನುಕೂಲತೆಯನ್ನುಅನುಭವಿಸುತ್ತಿದ್ದಾರೆ….

Read More

ಅ. ೨೨ ರಂದು ಪಲ್ಲಕ್ಕಿ ಉತ್ಸವ

ಕಲಬುರಗಿ: ತಾಲೂಕಿನ ಶ್ರೀನಿವಾಸ್ ಸರಡಗಿ ಶ್ರೀ ಮಹಾಲಕ್ಷ್ಮೀಶಕ್ತಿ ಪೀಠದಲ್ಲಿ ಶ್ರಾವಣ ಮಾಸದ ಐದನೇ ಶುಕ್ರವಾರ ಅಗಸ್ಟ್ ೨೨ ರಂದು ಬೆಳಿಗ್ಗೆ ೯ ಕ್ಕೆ ಪಲ್ಲಕ್ಕಿ ಉತ್ಸವ ಶ್ರೀ ದೇವಿಗೆ ಮಹಾಭಿಷೇಕ ಮಹಾಲಂಕಾರ ಮಹಾನವಿದ್ಯ ಮತ್ತು ಅರ್ಚನೆ ಹಾಗೂ ಹೋಮ ಹವನ ನಡೆಯಲಿದೆ . ನಂತರ ನಾಡಿನ ಖ್ಯಾತ ಕಲಾವಿದ ರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಬಂದ ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಗುರುವಂದನ ಕಾರ್ಯಕ್ರಮದಲ್ಲಿ ಎಲ್ಲಾಭಕ್ತಾಧಿಗಳು ಆಗಮಿಸಿ ಮಹಾತಾಯಿ ಮತ್ತು ಪೂಜ್ಯರ ಆಶೀರ್ವಾದ ಪಡೆಯಬೇಕೆಂದು ಶಕ್ತಿ ಪೀಠದ ಕಾರ್ಯದರ್ಶಿ…

Read More

ವಿಜೃಂಬಣೆಯಿಂದ ಜರುಗಿದ ಶ್ರೀ ಭೋಗೇಶ್ವರ ರಥೋತ್ಸವ

ತಾಳಿಕೋಟೆ: ತಾಲೂಕಿನ ಹಿರೂರ ಗ್ರಾಮದಲ್ಲಿ ಶ್ರೀ ಭೋಗೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಸೋಮವಾರರಂದು ಮಹಾ ರಥೋತ್ಸವವು ಸಾವಿರಾರು ಭಕ್ತ ಸಮೂಹದ ಮಧ್ಯ ವಿಜೃಂಬಣೆಯಿಂದ ಜರುಗಿತು. ರಥೋತ್ಸವ ಅಂಗವಾಗಿ ನಸುಕಿನ ಜಾವ ಶ್ರೀ ಭೋಗೇಶ್ವರ ಮಹಾ ಮೂರ್ತಿಗೆ ವೇ.ಜಗನ್ನಾಥ ಜೋಶಿ ಅವರಿಂದ ರುದ್ರಾಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ, ಮಹಾ ಮಂಗಳಾರತಿ ಕಾರ್ಯಕ್ರಮಗಳು ಜರುಗಿದವಲ್ಲದೇ ಮುಂಜಾನೆ ೮ ಗಂಟೆಗೆ ಗಂಗಸ್ಥಳದೊಂದಿಗೆ ಕುಂಭ ಕಳಸ ವಾಧ್ಯವೈಭವಗಳೊಂದಿಗೆ ಜರುಗಿ ೧೧ ಗಂಟೆಗೆ ಫಲ್ಲಕ್ಕಿ ಉತ್ಸವವು ಮೇರವಣಿಗೆಯು ಪ್ರಾರಂಭಗೊಂಡು ಶ್ರೀ ಭೋಗೇಶ್ವರ ದೇವಸ್ಥಾನದಿಂದ ಡೋಣಿ ಭೋಗೇಶ್ವರದವರೆಗೆ…

Read More

ಚಂಡ್ರಿಕಿ ಗ್ರಾಮದಲ್ಲಿ ಶಾಂತಿ ಸಭೆ – ಹಬ್ಬಗಳನ್ನು ಸೌಹಾರ್ದತೆ ಯಿಂದ ಆಚರಿಸೋಣ: ಡಿವೈಎಸ್ಪಿ ಸುರೇಶ್

ಗುರುಮಠಕಲ್: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿ ಸೌಹಾರ್ದತೆಯೊಂದಿಗೆ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗದಂತೆ ಆಚರಿಸಿ ಎಂದು ಡಿವೈಎಸ್ಪಿ ಸುರೇಶ್. ಎಮ್ ಅವರು ಹೇಳಿದರು. ತಾಲ್ಲೂಕಿನ ಚಂಡ್ರಿಕಿ ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಹಬ್ಬದ ವೇಳೆ ಯಾವುದೇ ಕಾನೂನು ಸುವ್ಯವಸ್ಥೆ ಸಮಸ್ಯೆಗಳು ಎದುರಾಗದಂತೆ ಎಲ್ಲ ಸಮುದಾಯದ ಜನರು ಪರಸ್ಪರ ಸಹಕಾರ ಮತ್ತು ಸಹಾನುಭೂತಿಯಿಂದ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಹಬ್ಬಗಳನ್ನು ಸಮಾನ ಮನೋಭಾವದಿಂದ ಆಚರಿಸುವುದು ಸಮಾಜದಲ್ಲಿ ಶಾಂತಿ, ಸಾಮರಸ್ಯ…

Read More

ವೇಣುಗೋಪಾಲ ಸ್ವಾಮಿ ಜಾತ್ರೆಯಲ್ಲಿ ರೋಚಕ ಕುಸ್ತಿ ಪಂದ್ಯಾವಳಿ

ಸುರಪುರ : ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಮೂರನೇ ದಿನದ ಕಾರ್ಯಕ್ರಮದಲ್ಲಿ ಅದ್ದೂರಿಯಾಗಿ ಕುಸ್ತಿ ಪಂದ್ಯಾವಳಿ ನಡೆಸಲಾಯಿತು. ದೇವಸ್ಥಾನದ ಆವರಣದಲ್ಲಿ ಕುಸ್ತಿ ಪಂದ್ಯಾವಳಿಗೆ ಅಂಕಣವನ್ನು ಸಿದ್ಧಗೊಳಿಸಲಾಗಿತ್ತು, ಸುರಪುರ ರಾಜವಂಶಸ್ಥರಾದ ರಾಜ ಕೃಷ್ಣಪ್ಪ ನಾಯಕ ಅವರು ಭಾಗವಹಿಸಿ ಪಂದ್ಯಾವಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕಿನ ವಾಗಣಗೇರ,ದೇವರಗೊನಾಲ ಹಾಗೂ ಶಹಾಪುರ ತಾಲ್ಲೂಕಿನ ರಸ್ತಾಪುರ ದೋರನಹಳ್ಳಿ,ಗೋಗಿ ಸೇರಿದಂತೆ ಕಲಬುರ್ಗಿ,ವಿಜಯಪುರ ಇತರೆ ಜಿಲ್ಲೆಗಳಿಂದಲೂ ಅನೇಕ ಜನ ಕುಸ್ತಿಪಟುಗಳು ಭಾಗವಹಿಸಿದ್ದರು. ಕುಸ್ತಿ ಪಂದ್ಯಾವಳಿಯಲ್ಲಿ ಮೊದಲಿಗೆ ನಗದು ಬಹುಮಾನದ…

Read More

ವಚನ ಸಾಹಿತ್ಯ ಕನ್ನಡದ ಸಾಹಿತ್ಯ ಪ್ರಕಾರಗಳಲ್ಲಿ ಪ್ರಮುಖವಾಗಿದೆ-ಪ್ರಶಾಂತ

ಸುರಪುರ: ವಚನ ಸಾಹಿತ್ಯ ಕನ್ನಡ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದಾಗಿದೆ. ವಚನ ಎಂದರೆ ಪ್ರಮಾಣ, ಮಾತು ಎಂದರ್ಥ. ವಚನಗಳು ಚಿಕ್ಕ ಚಿಕ್ಕ ಗದ್ಯದ ತುಣುಕುಗಳಾಗಿದ್ದು, ಅನುಭಾವ ಮತ್ತು ಸಾಮಾಜಿಕ ಕಾಳಜಿಯನ್ನು ವ್ಯಕ್ತಪಡಿಸುತ್ತವೆ ಎಂದು ಶ್ರೀ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ಪ್ರಶಾಂತ ಸೇರಿಕಾರ ಮಾತನಾಡಿದರು. ನಗರದ ನಿಷ್ಠಿ ಕಡ್ಲೆಪ್ಪನವರ ವಿರಕ್ತ ಮಠದಲ್ಲಿ ಜರುಗಿದ ಶ್ರಾವಣ ಶ್ರವಣ ಶಿವಾನುಭವ ಚಿಂತನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ, ಬಸವಣ್ಣನವರು ವಚನ ಚಳುವಳಿಯ ಪ್ರಮುಖ ನಾಯಕರಾಗಿದ್ದರು. ಅವರು ಅನುಭವ ಮಂಟಪ ಎಂಬ…

Read More

ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ: ಶ್ರೀ ಕರುಣೇಶ್ವರ ಸ್ವಾಮಿಜೀ

ವಡಗೇರಾ: ಅರಣ್ಯ ನಾಶದಿಂದಲೇ ಪ್ರಕೃತಿ ವಿಕೋಪಗಳು ಹೆಚ್ಚಾಗುತ್ತಿವೆ ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ ಎಂದು ಕೃಷ್ಣವೇಣಿ ಭೀಮಾ ಸಂಗಮದ ಸಂಗಮೇಶ್ವರ ಮಠದ ಪರಮಪೂಜ್ಯ ಕರುಣೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.ತಾಲೂಕಿನ ಕೃಷ್ಣವೇಣಿ ಭೀಮಾ ಸಂಗಮದ ಸಂಗಮೇಶ್ವರ ದೇವಸ್ಥಾನದಲ್ಲಿ ಶ್ರೀ ಕರುಣೇಶ್ವರ ಶ್ರೀಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸಸಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಶುದ್ಧ ಗಾಳಿ ಉತ್ತಮ ಪರಿಸರ ನಿರ್ಮಾಣಕ್ಕೆ ಗಿಡ ಮರಗಳು ಸಂರಕ್ಷಣೆಯ ಅವಶ್ಯಕತೆ ಇದೆ ಪರಿಸರವನ್ನು ನಾವು ಕಾಪಾಡಿದ್ದೆ ಆದಲ್ಲಿ ಅದು ನಮ್ಮನ್ನು ಕಾಪಾಡುತ್ತೆ ಇತ್ತೀಚಿಗೆ…

Read More
error: Content is protected !!