ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮಹಾನ್ ದೇಶಪ್ರೇಮಿ:ಮಲ್ಲಣ್ಣ ಐಕೂರ
ವಡಗೇರಾ: ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಜೀವವನ್ನೇ ತ್ಯಾಗ ಮಾಡಿದ ಮಹಾನ್ ದೇಶಪ್ರೇಮಿ ಎಂದು ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ಹೆಳಿದರು. ಖಾನಾಪುರ ಗ್ರಾಮದಲ್ಲಿ ಆಗಸ್ಟ್ 15 ಶುಕ್ರವಾರದಂದು ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 228 ನೇ ಜಯಂತಿ ಹಾಗೂ ಸಂಗೊಳ್ಳಿ ರಾಯಣ್ಣರ ನಾಮಫಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣನವರು ಒಂದು ಜಾತಿಗೆ ಸೀಮಿತವಾಗದೆ ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ಸ್ವಾತಂತ್ರ್ಯ ಸಿಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಇಂದಿನ…


