ಜಲಾವೃತ್ತ ನಾಯ್ಕಲ್ ಗ್ರಾಮದ ಮನೆಗಳಿಗೆ ಜಮಾದಾರ ಭೇಟಿ: ಸಾಂತ್ವನ, ಭರವಸೆ
ಯಾದಗಿರಿ: ನಿರಂತರ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿರುವ ವಡಗೇರಿ ತಾಲ್ಲೂಕಿನ ನಾಯ್ಕಲ್ ಗ್ರಾಮದ ಜಲಾವೃತ್ತ ಪ್ರದೇಶಗಳಿಗೆ ಕೆಪಿಸಿಸಿ ರಾಜ್ಯ ಸಂಯೋಜಕ ಮತ್ತು ಕಿಸಾನ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಮೈನುದ್ದಿನ್ ಎಂ. ಜಮಾದಾರ ದೋರನಳ್ಳಿ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಪಾರ ಮಳೆಯಿಂದಾಗಿ ಭೀಮಾನದಿ ನೀರು ಹೊಲ ಗದ್ದೆಗಳಿಗೆ ಅಲ್ಲದೇ ಮನೆಗಳಿಗೆ ನುಗ್ಗಿದ್ದು, ಅಪಾರ ನಷ್ಟವಾಗಿದೆ, ಸತತ ಮಳೆಯ ಕಾರಣ ವಡಗೇರಿ ತಾಲ್ಲೂಕಿನಲ್ಲಿ ಹೆಚ್ಚು ಹಾನಿಯಾಗಿದ್ದು, ಅದರಲ್ಲೂ ನಾಯ್ಕಲ್…


