ನಿಧನ ವಾರ್ತೆ

ಕಲಬುರಗಿ: ನಗರದ ಸೇಡಂ ರಸ್ತೆಯ ಸ್ವಸ್ತಿಕ ನಗರದ ನಿವಾಸಿ ಶರಣಪ್ಪ ತಾಂಡೂರ (49) ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದರು. ತಂದೆ, ಪತ್ನಿ ಡಾ.ಅನಿತಾ, ಇಬ್ಬರು ಪುತ್ರರು ಸೇರಿ ಅಪಾರ ಬಳಗ ಅಗಲಿದ್ದಾರೆ. ಬುಧವಾರ ಬೆಳಗ್ಗೆ 11ರವರೆಗೆ ಸ್ವಸ್ತಿಕ ನಗರದ ಸ್ವಗ್ರಹದಲ್ಲಿ ಅಂತಿಮ ದರ್ಶನ ಇರಲಿದ್ದು, ಚಿಂಚೋಳಿ ತಾಲೂಕಿನ ಸ್ವಗ್ರಾಮ ನಿಡಗುಂದಾದ ಜಮೀನಿನಲ್ಲಿ ಮಧ್ಯಾಹ್ನ 2.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ.

Read More

ಹೋರಟೂರು ಗ್ರಾಮದಲ್ಲಿ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ-ಇಓ ಸಂಗ್ವಾರ ಚಾಲನೆ

ವಡಗೇರಾ: ಮಕ್ಕಳ ಸ್ನೇಹಿ ಶಾಲಾ ವಾತಾವರಣ ನಿರ್ಮಿಸಲು ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸಮಗ್ರ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಪಂ ಅಧ್ಯಕ್ಷರಿಂದ ಚಾಲನೆ ನೀಡಿದರು. ತಾಲ್ಲೂಕಿನ ಉಳ್ಳೆಸೂಗುರು ಗ್ರಾಪಂ ವ್ಯಾಪ್ತಿಯ ಹೊರಟರು ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಪಂಚಾಯಿತಿಯಿಂದ ಹಮ್ಮಿಕೊಂಡಿದ್ದ “ನಮ್ಮ ಶಾಲೆ ನಮ್ಮ ಅಭಿಯಾನದಡಿ” ಶಾಲಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಈ ಅಭಿಯಾನದಡಿ ತಾಲೂಕಿನ ಉಳ್ಳೆಸೂಗುರು, ಐಕೂರು, ಹೈಯಾಳಿ (ಬಿ), ಟಿ…

Read More

ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಜಾಗೃತಿ ಕಾರ್ಯಕ್ರಮ

ಸುರಪುರ: ತಾಲೂಕಿನ ದೇವಿಕೇರಾ ಗ್ರಾಮದಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಾ.ಪಂ ಇಓ ಬಸವರಾಜ ಸಜ್ಜನ್ ಮಾತನಾಡಿ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಹಾಗೂ ಸುರಕ್ಷಾ ಭೀಮಾ ಯೋಜನೆಗಳಿಂದ ಪ್ರತಿಯೊಬ್ಬರಿಗೂ ಭದ್ರತೆ ಲಭಿಸಲಿದೆ ಎಂದರು.ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆಯಿಂದ ಸರ್ಕಾರವು ನಾಗರಿಕರ ಭವಿಷ್ಯದ ಭದ್ರತೆಗೆ ಒತ್ತು ನೀಡಿ ೨೦೧೫ರಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ…

Read More

ಸುರಪುರ-ಕುಡಿಯುವ ನೀರಿಗಾಗಿ ತಹಸಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ

ಸುರಪುರ: ತಾಲೂಕಿನ ವಾಗಣಗೇರ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿ ನಗರದ ತಹಸಿಲ್ದಾರ್ ಕಚೇರಿ ಮುಂದೆ ಖಾಲಿ ಕೊಡಗಳೊಂದಿಗೆ ವಾಗಣಗೇರಾ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಾರ್ವಜನಿಕರು,ಕಳೆದ ಅನೇಕ ದಿನಗಳಿಮದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ,ಆದರೆ ಗ್ರಾಮ ಪಂಚಾಯತಿ ಅಧಿಕಾರಿಗಳು ಸಮಸ್ಯೆಯ ಬಗ್ಗೆ ಸ್ವಲ್ಪವೂ ಗಮನಹರಿಸುತ್ತಿಲ್ಲ,ಇದರಿಂದ ಬೇಸತ್ತು ಇಂದು ಹೋರಾಟ ಮಾಡುತ್ತಿದ್ದು,ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡದಿದ್ದಲ್ಲಿ ಗ್ರಾಮ ಪಂಚಾಯತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು. ವಾರ್ಡ್ ಸಂಖ್ಯೆ…

Read More

ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ಜೇವರ್ಗಿ  : ಬೆಳಿಗ್ಗೆ ಹಾಗೂ ಮದ್ಯಾಹ್ನ ಸಮಯಕ್ಕೆ ಸರಿಯಾಗಿ ಹಾಗೂ ಬಸ್ ಸಮಯವನ್ನು ಸ್ವಲ್ಪ ಬದಲಿಸುವಂತೆ ಒತ್ತಾಯಿಸಿ ಶ್ರೀ ಮಹಾಲಕ್ಷ್ಮೀ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾ ವಿದ್ಯಾಲಯದ ವಿದ್ಯಾರ್ಥಿನಿಯರು ತಹಸೀಲ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.ತಾಲೂಕಿನ ವಿವಿದ ಹಳ್ಳಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಬರುತಿಲ್ಲ ಹಾಗೂ ಕೆಲವು ಬಸ್ ಗಳ ಸಮಯವನ್ನು ಬದಲಿಸಿಬೇಕೆಂದು ಒತ್ತಾಯಿಸಿ ತಾಲೂಕ ದಂಡಾಧೀಕಾರಿಗಳಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ತಾಲೂಕಿನ ವಿವಿಧ ಹಳ್ಳಿಗಳಿಂದ ವಿದ್ಯಾರ್ಥಿನಿಯರು ಬೆಳಿಗ್ಗೆ ಕಾಲೇಜಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಬೆಳಿಗ್ಗೆ…

Read More

ಅಕ್ಷರ ಕಲಿಸೋ ಗುರುವಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರು ಕಡಿಮೆ ಬಸ್ಸುಗೌಡ  ಕಂಚನಕವಿ

ಶಹಾಪುರ :- ವಿದ್ಯಾರ್ಥಿಗಳ ಸಾಧನೆ ಮತ್ತು ಬೆಳವಣಿಗೆ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಶಿಕ್ಷಕರು ದೇಶದ ನಿರ್ಮಾತ್ರುಗಳು ಜೀವನದಲ್ಲಿ ನಾವು ಎಷ್ಟು ಹಣ ಗಳಿಸಬಹುದು. ಆದರೆ ಅಕ್ಷರ ಜ್ಞಾನ ಯಾರಿಂದಲೂ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ ಹಣ ಗಳಿಸಿದರೆ ಬೇರೆಯವರು ಕಸಿದುಕೊಳ್ಳಬಹುದು ಆದರೆ ವಿದ್ಯೆ ಎಂಬುದು ಮಹದೊಡ್ಡ ಶಕ್ತಿ ಇದನ್ನು ಯಾರಿಂದ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಯುವ ಮುಖಂಡರಾದ ಬಸ್ಸುಗೌಡ ಕಂಚನಕವಿ ಹೇಳಿದರು. ಶಹಾಪುರ ಹೃದಯಭಾಗದಲ್ಲಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ   ಹಮ್ಮಿಕೊಂಡಿದ್ದ ಶಿಕ್ಷಕರ…

Read More

ಶಿಕ್ಷಕ ವೃತ್ತಿ ಎಲ್ಲಾ ವೃತ್ತಿಗಿಂತ ಪವಿತ್ರ- ಪ್ರಕಾಶ್ 

ಸುರಪುರ: ಜಗತ್ತಿನ ಎಲ್ಲಾ ಹುದ್ದೆಗಳಲ್ಲಿ ಶಿಕ್ಷಕನ ಹುದ್ದೆ ಅತ್ಯಂತ ಮಹತ್ವದ್ದು ಎಲ್ಲಾ ಸ್ಥಾನಗಳಿಗಂತೂ ಹೆಚ್ಚಿನದು ಎಂದು ಬಸವಪ್ರಭು ವಿದ್ಯಾವರ್ಧಕ ಸಂಸ್ಥೆಯ ಮುಖ್ಯಸ್ಥ ಪ್ರಕಾಶ ಅಂಗಡಿ ಕನ್ನೆಳ್ಳಿ ಹೇಳಿದರು, ರಂಗಂಪೇಟೆಯ ಬಸವೇಶ್ವರ ಕಾಲೇಜಿನಲ್ಲಿ ಇಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಹಾಗೂ ಪಿಯುಸಿ ಹಾಗೂ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಿದ್ದು ಈ ದಿನವನ್ನು ವಿದ್ಯಾರ್ಥಿಗಳು ಭಕ್ತಿಯಿಂದ ಅಭಿಮಾನದಿಂದ ಗೌರವದಿಂದ ಆಚರಿಸಬೇಕು…

Read More

ಶಿಕ್ಷಕ ವೃತ್ತಿ ಗೌರವಯುತ ವೃತ್ತಿ: ನಾಗಮ್ಮ

ಚಿತ್ತಾಪುರ: ಪ್ರಪಂಚದಲ್ಲಿಯೇ ಅತೀ ಗೌರವಯುತ ವೃತ್ತಿ ಎಂದರೆ ಅದು ಶಿಕ್ಷಕ ವೃತ್ತಿ. ಈ ವೃತ್ತಿಯಲ್ಲಿರುವ ಪ್ರತಿಯೊಬ್ಬರೂ ಗೌರವಕ್ಕೆ ಅಹ೯ರು ಎಂದು ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ನಾಗಮ್ಮ ಕುಂಬಾರ ಹೇಳಿದರು. ತಾಲ್ಲೂಕಿನ ಕದರಗಿ ಗ್ರಾಮದ ಸಕಾ೯ರಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕರ‍್ಯಕ್ರಮದಲ್ಲಿ ಡಾ ಸವ೯ಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕರ‍್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಯೊಬ್ಬ  ವಿದ್ಯಾಥಿ೯ ಬಾಲ್ಯದಲ್ಲಿ ವಿದ್ಯೆ ಕಲಿಸಿದಂತಹ ಗುರುವಿಗೆ ಮತ್ತು ಮನೆಯಲ್ಲಿ ಮೊದಲ ಮಾತನಾಡಲು…

Read More

ಶಿಕ್ಷಕಿ ಮಡಿವಾಳಮ್ಮಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ

ತಾಳಿಕೋಟೆ,  ಶೈಕ್ಷಣಿಕ ರಂಗದಲ್ಲಿ ಉತ್ತಮ ಕಾರ್ಯದ ಜೊತೆಗೆ ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ಶಿಕ್ಷಕರನ್ನು ಗುರುತಿಸಿ ಪ್ರತಿವರ್ಷವು ರಾಜ್ಯ ಸರ್ಕಾರವು ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಬಳಗಾನೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಮಡಿವಾಳಮ್ಮ ನಾಡಗೌಡ ಅವರಿಗೆ ಲಭಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಶಸ್ತಿ ನೀಡಿ ಪುರಸ್ಕರಿಸಿದ್ದಾರೆ.         ಕಳೆದ ೧೦ ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಮಡಿವಾಳಮ್ಮ ನಾಡಗೌಡ ಅವರು ಶೈಕ್ಷಣಿಕ ರಂಗದ ಬುನಾದಿಯಾಗುವದರ…

Read More

ತಾಲೂಕು ಕಚೇರಿ ಆರಂಭ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ 

ವಡಗೇರಾ: ತಾಲೂಕು  ಕಚೇರಿಗಳು ರೈತರ ವಿವಿಧ ಬೇಡಿಕೆಗಳು ಈಡೇರಿಸುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಮಲ್ಲನಗೌಡ ಹಗರಟಗಿ ಸೂಚನೆ ಮೇರೆಗೆ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಅಧ್ಯಕ್ಷ ವಿದ್ಯಾಧರ್ ಜಾಕ ನೇತೃತ್ವದಲ್ಲಿ ಶುಕ್ರವಾರದಂದು ವಡಗೇರಾ ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ರವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ಅವರು ತಾಲೂಕು ಕೇಂದ್ರವಾಗಿ ಸುಮಾರು 8 ವರ್ಷಗಳು ಕಳೆಯುತ್ತಾ ಬರುತ್ತಿದೆ ಆದರೆ ಇಲ್ಲಿಯವರೆಗೂ ತಾಲೂಕಿಗೆ ಸಂಬಂಧಿಸಿದ ವಿವಿಧ ಕಚೇರಿಗಳು…

Read More
error: Content is protected !!