ಭಕ್ತಿ ಭಾವದ ಶ್ರೀ ವೀರಭದ್ರೇಶ್ವರ ಉತ್ಸವ ಸಂಪನ್ನ

ಗುರುಮಠಕಲ್: ಪಟ್ಟಣದ ನಾರಾಯಣಪೂರ ಬಡಾವಣೆಯ ಶ್ರೀಭದ್ರಕಾಳಿ ಸಮೇತ  ವೀರಭದ್ರೇಶ್ವರ ಉತ್ಸವವು ಭಕ್ತಿ ಭಾವದಿಂದ ಸಂಪನ್ನ ಗೊಂಡಿತು. ಪ್ರತಿವರ್ಷ ಶ್ರಾವಣಮಾಸ ನಂತರ ಬರುವ ಎರಡನೇ ಮಂಗಳವಾರದಂದು ನಡೆಯುವ ಈ ಉತ್ಸವದ ನಿಮಿತ್ಯ ಬೆಳಗ್ಗೆ ಶ್ರೀ ಭದ್ರಕಾಳಿ ಮತ್ತು ಶ್ರೀ ವೀರಭದ್ರ ಸ್ವಾಮಿಗೆ ವಿಶೇಷ ಅಭಿಷೇಕ,ವಿವಿಧ ಹೂಗಳಿಂದ ವಿಶೇಷ ಅಲಂಕಾರ ನಡೆಯಿತು. ಶ್ರೀ ವೀರಭದ್ರೇಶ್ವರ ಉತ್ಸವ ಮೂರ್ತಿಯ ಪಲ್ಲಕ್ಕಿಸೇವೆಯು ವೀರಭದ್ರನ ಅವತಾರದ ವಡಬುಗಳ ವಚನಗಳನ್ನು ಸಾರುವ ಮೂಲಕ ಶಸ್ತ್ರಗಳ ಸೇವೆ ಸಲ್ಲಿಸುವ ವೀರಗಾಸೆ ಕುಣಿತ ದ ಮೂಲಕ  ಪುರವಂತರಿಂದ ನಡೆಯಿತು….

Read More

ಕ್ರೀಡೆಯಲ್ಲಿ ಸೊಲು ಗೆಲುವು ಮುಖ್ಯವಲ್ಲಾ ಭಾಗವಹಿಸುವಿಕೆ ಮುಖ್ಯ

ಚಿತ್ತಾಪುರ ; ಕ್ರೀಡೆಯಲ್ಲಿ ಸೊಲು ಮತ್ತು ಗೆಲುವು ಮುಖ್ಯವಲ್ಲಾ ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ ಎಂದು ತಾಪಂ ಇಓ ಮಹ್ಮದ ಅಕ್ರಂ ಪಾಶಾ ಹೇಳಿದರು.  ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದಸರಾ ಕ್ರೀಡಾಕೂಟವನ್ನು ಉದ್ಘಾಟಸಿ ಮಾತನಾಡಿದ ಅವರು ಕ್ರೀಡೆಗಳಲ್ಲಿ ತೀರ್ಪುಗಾರರ ತೀರ್ಪು ಅಂತಿಮವಾಗಿರುತ್ತದೆ. ಹೀಗಾಗಿ ಯಾರು ಅವರ ತೀರ್ಪಿನ ವಿರುದ್ದ ಅಪಸ್ವರ ಎತ್ತಬಾರದು. ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ವೃದ್ದಿಗೆ ಪೂರಕವಾಗಿದ್ದು ಎಲ್ಲರೂ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಬೇಕು…

Read More

ಸರ್ಕಾರಿ ಅಸ್ಪತ್ರೆಗೆ ಹೆಚ್ಚುವರಿ ವೈದ್ಯರನ್ನು ನೇಮಿಸಲು ಒತ್ತಾಯ

ಚಿತ್ತಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆಯಿಂದ ತಾಲೂಕಿನ ಜನರು ನಿತ್ಯ ನೂರಾರು ಜನರು ತೊಂದರೆಯನ್ನು ಅನುಭವಿಸುತ್ತಿದ್ದು ಹೆಚ್ಚಿನ ತಜ್ಞ ವೈದ್ಯರನ್ನು ನೇಮಿಸಬೇಕು ಎಂದು ತಾಲೂಕು ದೈಹಿಕ ಮತ್ತು ಮಾನಸಿಕ ಅಂಗವಿಕಲರ ವಿವಿದೊದ್ದೇಶ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಮಹ್ಮದ ಇಬ್ರಾಹಿಂ ಒತ್ತಾಯಿಸಿದ್ದಾರೆ. ಕ್ಷೇತ್ರದ ಶಾಸಕರು ಹಾಗೂ ಸಚಿವರಾಗಿರುವ ಪ್ರಿಯಾಂಕ್ ಖರ್ಗೆರವರ ಇಚ್ಚಾಶಕ್ತಿ ಹಾಗೂ ಬಡವರಿಗೆ ಉಚಿತವಾಗಿ ಆರೊಗ್ಯ ಸೇವೆಯನ್ನು ನೀಡುವ ಉದ್ದೇಶದಿಂದ ಅತೀ ವಿಶಾಲವಾದ ೧೦೦ ಹಾಸಿಗೆಯುಳ್ಳ ಸರ್ಕಾರಿ ಆಸ್ಪತ್ರೆ ಇದ್ದು ಇಲ್ಲಿ ಇಸಿಜಿ,…

Read More

ಬಸವ ಸಂಸ್ಕೃತಿ ಅಭಿಯಾನದಲ್ಲಿ ಎಲ್ಲರು ಭಾಗವಹಿಸಿ

ಸುರಪುರ: ಇದೇ ಸಪ್ಟೆಂಬರ್ ೧ ರಿಂದ ಬಸವನಬಾಗೇವಾಡಿಯಲ್ಲಿ ಬಸವ ಸಂಸ್ಕೃತಿ ಅಭಿಯಾನಕ್ಕೆ ಚಾಲನೆ ದೊರೆಯಲಿದ್ದು ಸಪ್ಟೆಂಬರ್ ೪ಕ್ಕೆ ಯಾದಗಿರಿಗೆ ಆಗಮಿಸಲಿದೆ. ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಗುರುಮಠಕಲ್ ಖಾಸಾ ಮಠದ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮೀಜಿ ತಿಳಿಸಿದರು. ನಗರದ ರಂಗAಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿರುವ ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಸಪ್ಟೆಂಬರ್ ೧ ರಂದು ಬಸವನಬಾಗೇವಾಡಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು,೪ ರಂದು ಯಾದಗಿರಿ ನಗರಕ್ಕೆ ಆಗಮಿಸುವ ಅಭಿಯಾನ ಎಸ್.ಎನ್ ಪಾಟೀಲ್ ಕಲ್ಯಾಣ ಮಂಟಾಪದಲ್ಲಿ…

Read More

ತಳವಾರಗೇರಾ : ಕಳ್ಳತನ ಆರೋಪಿ ಬಂಧನ

ಸುರಪುರ: ತಾಲ್ಲೂಕಿನ ತಳವಾರಗೇರಾ ಗ್ರಾಮದಲ್ಲಿ ಪ್ರಕಾಶ ಪತ್ತಾರ ಎನ್ನುವವರ ಮನೆಯಲ್ಲಿ ಫೆಬ್ರವರಿ ೨೨ ರಂದು ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸಿರುವ ಪೊಲೀಸರು,ಕಳ್ಳತನ ಮಾಡಿದ್ದ ಬಂಗಾರ ಆಭರಣಗಳನ್ನು ವಶಪಡಿಸಕೊಂಡಿದ್ದಾರೆ. ಅOದಾಜು ೩.೭೮ ಲಕ್ಷ ಮೌಲ್ಯದÀ ೭೦ ಗ್ರಾಂ ಬಂಗಾರದ ವಿವಿಧ ಆಭರಣಗಳು ಮತ್ತು ೧ ಲಕ್ಷ ರೂಪಾಯಿ ನಗದು ಕಳ್ಳತನವಾಗಿರುವ ಕುರಿತು ಫೆ.೨೨ ರಂದು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು, ವಿಜಯಪುರ ಜಿಲ್ಲೆ,ತಾಲೂಕಿನ ಹೊನ್ನಾಳಿ ಗ್ರಾಮದ ಸಂತೋಷ ನಂದ್ಯಾಳ ಎನ್ನುವ ಚಾಲಕನನ್ನು ವಶಕ್ಕೆ…

Read More

ವಿಜ್ಞೇಶ್ವರನ ಸ್ಥಾಪನೆಯಿಂದ ಬಾಂದ್ಯವ್ಯ ಇನ್ನು ಗಟ್ಟಿಯಾಗಲು ಸಹಕಾರಿಯಾಗುತ್ತದೆ- ನಾಗರಾಜ ಭಂಕಲಗಾ

ಚಿತ್ತಾಪುರ: ಪ್ರತಿ ವರ್ಷವು ಸಂಪ್ರದಾಯದAತೆ ಪ್ರತಿಷ್ಟಾಪಿಸುವ ವಿಜ್ಞೇಶ್ವರನ ಸ್ಥಾಪನೆಯಿಂದ ಸರ್ವಧರ್ಮಿಯರಲ್ಲಿ ಭಾಂದವ್ಯ ಗಟ್ಟಿಯಾಗಲು ಸಹಕಾರಿಯಾಗುತ್ತದೆ ಮತ್ತು ಮನಸ್ಸಿಗೆ ಶಾಂತಿ, ಸಮಾಧಾನ, ನೆಮ್ಮದಿ ಲಭಿಸಲಿದೆ ಎಂದು ಪುರಸಭೆ  ವಿರೋಧ ಪಕ್ಷದ ನಾಯಕ ನಾಗರಾಜ ಭಂಕಲಗಾ ಅವರು ಹೇಳಿದರು. ಪಟ್ಟಣದ ಸಂತೊಷ ನಗರದಲ್ಲಿ ಶ್ರೀ ವಿನಾಯಕ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳಿಗೆ ಉಚಿತ ಆರೊಗ್ಯ ತಪಾಸಣೆ ಶಿಬಿರ, ರಂಗೊಲಿ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಓಣಿಯ ಎಲ್ಲರೂ ಒಂದಡೇ ಕೂಡಿಕೊಂಡು ವಿವಿಧ ಸ್ಪರ್ಧೇಗಳನ್ನು ಏರ್ಪಡಿಸುವದರಿಂದ…

Read More

ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಅದ್ಯತೆ : ಶರಣಗೌಡ ಕಂದಕೂರ

ಗುರುಮಠಕಲ್: ಗಡಿಭಾಗದ ಕ್ರೀಡಾಪ್ರೇಮಿ ಮತ್ತು ಕ್ರೀಡಾಪಟುಗಳು ಉತ್ತಮ ಸಾಧನೆಗೈಯಲು ಅನುಕೂಲವಾಗುವ ನಿಟ್ಟಿನಲ್ಲಿ ಗುರುಮಠಕಲ್ ವ್ಯಾಪ್ತಿಯಲ್ಲಿ ಐದು ಎಕರೆಯಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು. ಪಟ್ಟಣದ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ತಾಲೂಕಾ ಪಂಚಾಯತ್, ಮತ್ತು ಪುರಸಭೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ  2025-26 ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಕ್ರೀಡಾಜ್ಯೋತಿ ಉದ್ಘಾಟಿಸಿ ಮಾತನಾಡಿದ ಅವರು, ಗಡಿಭಾಗದ ಈ ನಾಡಿನಲ್ಲಿ ಉತ್ತಮ…

Read More

ಭಕ್ತಿಪೂರ್ವಕವಾಗಿ ಜರುಗಿದ ಗಣೇಶ ವಿಸರ್ಜನೆ

ಮುದ್ದೇಬಿಹಾಳ : ಗಣೆಶೋತ್ಸವ ನಿಮಿತ್ಯ ಪಟ್ಟಣದ ಬಹುತೇಕ ಮನೆಗಳಲ್ಲಿ ೫ ದಿನಗಳ ವರೆಗೆ ಪ್ರತಿಷ್ಟಾಪಿಸಲ್ಪಟ್ಟ ಶ್ರೀ ಗಣೇಶನ ಮಹಾಮೂರ್ತಿಗಳನ್ನು ಭಕ್ತಿಬಾವದಿಂದ ಪೂಜಿಸುವ ಮೂಲಕ ಗಣೇಶನನ್ನು ಸಂಭ್ರಮದಿOದ ಬಿಳ್ಕೊಡಲಾಯಿತು. ಮನೆಯ ಸದಸ್ಯರೆಲ್ಲರೂ ೫ ದಿನಗಳ ಕಾಲ ಮನೆಯಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಶ್ರೀ ಗಣೇಶನಿಗೆ ದಿನಂಪ್ರತಿ ವಿವಿಧ ಹೂವುಗಳಿಂದ ಅಲಂಕರಿಸಿ ವಿವಿಧ , ಲಾಡು, ಹೋಳಿಗೆ, ಪಾಯಸ, ಕರಿಗಡುಬು, ಚಿತ್ರಾನ್ನ, ಅನೇಕ ತೆರನಾದ ಸಿಹಿ ತಿನಿಸುಗಳನ್ನು ನೈವೇದ್ಯ ಮಾಡಿ ಗಣೇಶನಿಗೆ ತಮ್ಮ ಬೇಕುಬೇಡಿಕೆಗಳನ್ನು ಕೇಳಿಕೊಂಡರು. ಸಾಯಂಕಾಲ ದಾರಿಯುದ್ದಕ್ಕೂ ಯುವಕರು, ಮಕ್ಕಳು ಪಟಾಕ್ಷಿ…

Read More

ನೈಸರ್ಗಿಕ ವಿಧಾನಗಳ ಅಳವಡಿಸಿ ಹತ್ತಿ ಕೃಷಿಯಲ್ಲಿ ರಾಸಾಯನಿಕಗಳ ಬಳಕೆ ಕಡಿಮೆ ಮಾಡಲು ಕರೆ

ಯಾದಗಿರಿ, ಸಹಜ ಸಮೃದ್ಧ, ಮತ್ತು ಎಲ್‌ಡಿಸಿ (LDC) ಇವರ ಸಂಯುಕ್ತ ಆಶ್ರಯದಲ್ಲಿ, ಯಾದಗಿರಿ ತಾಲ್ಲೂಕಿನ ಸೈದಾಪುರ ಹೋಬಳಿಯ ಸಂಗವಾರ ಗ್ರಾಮದಲ್ಲಿ ಹತ್ತಿಯಲ್ಲಿ ಗುಲಾಬಿ ಕಾಯಿ ಕೊರಕ ನಿರ್ವಹಣೆ ಕುರಿತು “ಜಾಗೃತಿ” ಕಾರ್ಯಕ್ರಮ ಏರ್ಪಾಡು ಮಾಡಲಾಗಿತ್ತು. ಸುಸ್ಥಿರ ಮತ್ತು ನೈಸರ್ಗಿಕ ವಿಧಾನಗಳ ಮೂಲಕ ರಾಸಾಯನಿಕಗಳ ಬಳಕೆ ಕಡಿಮೆ ಮಾಡುವ ಅರಿವಿನ ಕಾರ್ಯಕ್ರಮದ ಭಾಗವಾಗಿ ತರಬೇತಿ ನೀಡಲಾಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಎಲ್‌ಡಿಸಿ ಸಂಸ್ಥೆಯ ಸಂಶೋಧನಾ ಎನಾಲಿಸ್ಟ್ ಗಿರೀಶ್ ಮಾತನಾಡಿ ” ಎಲ್. ಡಿ. ಸಿ ಸಂಸ್ಥೆ ಹತ್ತಿ ಕೃಷಿಯಲ್ಲಿ…

Read More

ಸುರಪುರ : ಪ್ರಥಮ ಬಾರಿಗೆ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ

ಸುರಪುರ: ನಗರದಲ್ಲಿ ಇದೇ ಮೊದಲ ಬಾರಿಗೆ 11 ದಿನಗಳ ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಲಾಗುವುದು ಎಂದು ಹಿಂದೂ ಮಹಾ ಗಣಪತಿ ಉತ್ಸವ ಸಮಿತಿ ಮುಖಂಡರು ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ತಹಸೀಲ್ದಾರ್ ಕಛೇರಿಗೆ ಹೋಗುವ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಪಕ್ಕದಲ್ಲಿನ ಸ್ಥಳದಲ್ಲಿ ಆಗಸ್ಟ್ 27 ರಂದು ಹಿಂದೂ ಮಹಾ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದೆ ಎಂದು ತಿಳಿಸಿದರು. ಅಲ್ಲದೆ, ಎಲ್ಲಾ ಜಾತಿ,ಮತ, ಧರ್ಮಿಯರು ಹಾಗೂ ಸಾಮೂಹಿಕ ಸಂಘಟನೆಗಳು ಸೇರಿದಂತೆ ಎಲ್ಲರೂ ಆಚರಣೆಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಇತ್ತೀಚಿನ ದಿನಗಳಲ್ಲಿ…

Read More
error: Content is protected !!