ಕಲಾ ತಂಡಗಳ ಭವ್ಯ ಮೆರವಣಿಗೆ
ಕಲಬುರಗಿ ನಗರದ ನಗರೇಶ್ವರ ಶಾಲೆಯಿಂದ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ್ ಅರಸ ಅವರ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್.ಅವರು ಮಾಲಾರ್ಪಣೆ ಮಾಡಿ ಚಾಲನೆ ನೀಡಿದರು. ಸಿ.ಇ.ಓ.ಭಂವರ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಇದ್ದರು. ಬಳಿಕ ನಗರೇಶ್ವರ ಶಾಲೆಯಿಂದ ಕಲಾ ತಂಡಗಳ ಭವ್ಯ ಮೆರವಣಿಗೆ ಮೂಲಕ ಹೊರಟು ವೀರಶೈವ ಕಲ್ಯಾಣ ಮಂಟಪಕ್ಕೆ ಬಂದು ತಲುಪಿತು.


