ಆದರ್ಶ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀಕೃಷ್ಣ ಪರಮಾತ್ಮನ ಪರಮ ಭಕ್ತರಾದ ಕನಕದಾಸರ ಜಯಂತಿ ಆಚರಣೆ

ಶಹಾಪುರ: ಕನಕದಾಸರನ್ನು ನಾವು ಪೂಜ್ಯ ಸಂತ ಮತ್ತು ತತ್ವಜ್ಞಾನಿಯಾಗಿ ನೋಡುತ್ತೇವೆ. ಕನಕದಾಸರ ಜೀವನ ಬೋಧನೆಗಳು, ಕೀರ್ತನೆಗಳು ಇಂದಿಗೂ ಲಕ್ಷಾಂತರ ಜನರಿಗೆ ಮಾರ್ಗದರ್ಶನ ಹಾಗೂ ಸ್ಪೂರ್ತಿಯಾಗಿದೆ. ದಾಸಶ್ರೇಷ್ಠರೆಂದೇ ಕರೆಯಲಾಗುವ ಶ್ರೀಕೃಷ್ಣ ಪರಮಾತ್ಮನ ಪರಮ ಭಕ್ತರಾದ ಕನಕದಾಸರ ಜನ್ಮ ದಿನವನ್ನು ನಾವು ಕನಕದಾಸ ಜಯಂತಿ ಎಂದು ಆಚರಿಸುತ್ತೇವೆ.ಎಂದು ಶಾಲೆಯ ಮುಖ್ಯ ಗುರುಗಳಾದ ಪೂರ್ಣಚಂದ್ರ ಕಟ್ಟಿಮನಿವರು ವಿದ್ಯಾರ್ಥಿಗಳಿಗೆ ಹೇಳಿದರು. ನಗರದ ಆದಿಲ್ ಪುರದಲ್ಲಿ ಇರುವ ಆದರ್ಶ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಫಲಪುಷ್ಪ ಸಮರ್ಪಿಸಿ ಮಾಲಾರ್ಪಣೆ ಮಾಡುವವರೊಂದಿಗೆ ಜಯಂತಿ ನೆರವೇರಿಸಿ…

Read More

ಕರ್ನಾಟಕ ರಾಜ್ಯೋತ್ಸವ ಕನ್ನಡಾಭಿಮಾನವನ್ನು ಮೆರೆಯುವ ದಿನ: ಹಿರೇಮಠ

ಚಿತ್ತಾಪುರ; ಕನ್ನಡ ನಾಡು ಉದಯವಾದ ಈ ದಿನವನ್ನು ಸಂಭ್ರಮಿಸುವ ಹಾಗೂ ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮೆರೆಯುವ ಉದ್ದೇಶದಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದು ತಹಶೀಲ್ದಾರ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ಪ್ರಜಾಸೌಧ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮದ್ ಅಕ್ರಂ ಪಾಷಾ, ಸರ್ಕಾರಿ ನೌಕರರ ಸಂಘದ…

Read More

ನವ ಕಲಬುರಗಿ ನಿರ್ಮಾಣಕ್ಕೆ ಬದ್ಧ- ಸಚಿವ ಪ್ರಿಯಾಂಕ್ ಖರ್ಗೆ.

ಕಲಬುರಗಿ ಜಿಲ್ಲೆಯ ಸಮಸ್ತ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಾಗಿದ್ದು ಅದರ ಅಡಿಯಲ್ಲಿ ಮುಂದಿನ ವರ್ಷದೊಳಗೆ ಜಿಲ್ಲೆಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ ಪ್ರೌಢಶಾಲೆಯಲ್ಲಿ ನಡೆದ 70 ನೆಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ‌ ಅವರು ಮಾತನಾಡುತ್ತಿದ್ದರು. ಕಲಬುರಗಿ ಜಿಲ್ಲೆಯಲ್ಲಿ ನವೋದ್ಯಮಕ್ಕೆ ಉತ್ತೇಜನ, ಪ್ರವಾಸೋದ್ಯಮ ಅಭಿವೃದ್ದಿ, ಯುವ ಸಬಲೀಕರಣ, ಶೈಕ್ಷಣಿಕ ಹಾಗೂ ಆರ್ಥಿಕ ಸಬಲತೆ ಹೊಂದುವ ಸಮಗ್ರ ಅಭಿವೃದ್ದಿಗಾಗಿ…

Read More

ನ.೧ಕ್ಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಲಬುರಗಿ: ೭೦ನೇಯ ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಮತ್ತು ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳ ಲಾಗಿದೆ ಎಂದು ಜೈ ಕನ್ನಡಿಗರ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ರಾದ ಡಾ. ದತ್ತು ಭಾಸಗಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ನ. ೧ರಂದು ಸಂಜೆ ೫ಗಂಟೆಗೆ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ನಡೆಯಲಿರುವ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದ ಸಾನಿಧ್ಯವನ್ನು ಮಾತೋಶ್ರೀ ಡಾ. ದಾಕ್ಷಾಯಣಿ ಎಸ್. ಅಮ್ಮನವರು ಹಾಗೂ ಷಡಕ್ಷರಿ…

Read More

ರಾಜ್ಯಮಟ್ಟದ ಯುವಜನೋತ್ಸವಕ್ಕೆ ಸಿದ್ಧತೆ ವ್ಯವಸ್ಥಿತವಾಗಿ ಮಾಡಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್

ಯಾದಗಿರಿ: : ಬರುವ ಡಿಸೆಂಬರ್ ಮಾಹೆಯ ಮೊದಲ ವಾರದಲ್ಲಿ ಆಯೋಜಿಸುವ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕಾಗಿ ಸಿದ್ದತೆಗಳನ್ನು  ಈಗಿನಿಂದಲೇ ಆರಂಭಿಸುವಂತೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ರಾಜ್ಯ ಮಟ್ಟದ ಯುವಜನೋತ್ಸವ ಆಯೋಜನೆ ಕುರಿತು ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು. ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು,ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು. ಮುಖ್ಯ ಕಾರ್ಯಕ್ರಮಕ್ಕೆ  ಮಾನ್ಯ ಮುಖ್ಯಮಂತ್ರಿಗಳು ಆಗಮಿಸುವುದರಿಂದ ಶಿಷ್ಟಾಚಾರದಂತೆ ಎಲ್ಲ ವ್ಯವಸ್ಥೆ ಗಳನ್ನು ಮಾಡಿಕೊಳ್ಳಬೇಕು ಎಂದು…

Read More

ವಿಶೇಷ ಹುದ್ದೆಗಳನ್ನು ಸೃಷ್ಟಿಸಿ ಉಪನ್ಯಾಸಕರ ಮೇಲುಸ್ತುವಾರಿ ನೀಡಲು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಆಗ್ರಹ

ಕಲಬುರ್ಗಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ರಾಜ್ಯ ಶೈಕ್ಷಣಿಕ ತರಭೇತಿ ಇಲಾಖೆ (DSERT) ಜಂಟಿ ಸುತ್ತೋಲೆ ಹೊರಡಿಸಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ DIET ಹಿರಿಯ ಉಪನ್ಯಾಸಕರುಗಳ ಮೂಲಕ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಸ್ಥಿತಿಗತಿಗಳ ಮಾಹಿತಿ ಸಂಗ್ರಹಿಸಲು ಸುತ್ತೋಲೆ ಹೊರಡಿಸಲಾಗಿದೆ ಈ ಸುತ್ತೋಲೆಗೆ ಈಗಾಗಲೇ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಹಾಗೂ ಉಪನ್ಯಾಸಕರ ಸಂಘ ವಿರೋಧ ವ್ಯಕ್ತಪಡಿಸಿ ನನಗೂ ಸಹ ಮನವಿ ಸಲ್ಲಿಸಿದ್ದಾರೆ ಈ ವಿಷಯವನ್ನು ನಾನು ಖುದ್ದಾಗಿ ಶಿಕ್ಷಣ ಸಚಿವರಾದ …

Read More

ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮ

ಚಿಂಚೋಳಿ ಪಟ್ಟಣದ ಚಂದಾಪುರದ ಹಳೆ ತಹಸಿಲ್ ಕಾರ್ಯಾಲಯ ಆವರಣದಲ್ಲಿರುವ ದೇವರಾಜ್ ಅರಸು ಭವನದಲ್ಲಿ ತಾಲೂಕ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಮೂರನೇ ವರ್ಷದ ಜಯಂತೋತ್ಸವ ಕಾರ್ಯಕ್ರಮವು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನು ತಹಸಿಲ್ದಾರ್ ಸುಬ್ಬಣ್ಣ ಜಮಖಂಡಿ ಅವರು ಸಸಿಗೆ ನೀರು ಹಾಕು ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ನಂತರ ಅವರು ಮಾತನಾಡಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಮೂರನೇ ವರ್ಷದ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಬಹಳಷ್ಟು…

Read More

ಪ್ರತಿಗ್ರಾಮಪಂಚಾಯಿಂದ ಕನಿಷ್ಠ ಎರಡು ಗ್ರಾಮಗಳನ್ನು ತಂಬಾಕುಮುಕ್ತಗ್ರಾಮ ಫೋಷಣೆ ಮಾಡಿ ಅಪರ ಜಿಲ್ಲಾಧಿಕಾರಿರಾಯಪ್ಪ ಹುಣಸಗಿ

ಕಲಬುರಗಿ: ಕಲಬುರಗಿಜಿಲ್ಲೆಯ ಪ್ರತಿಗ್ರಾಮ ಪಂಚಾಯಿತಿಯಿಂದ ಕನಿಷ್ಠ ಎರಡು ಗ್ರಾಮಗಳನ್ನು ತಂಬಾಕುಮುಕ್ತಗ್ರಾಮಗಳು ಫೋಷಣೆ ಮಾಡಿಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿರಾಯಪ್ಪ ಹುಣಸಗಿ ಸೂಚನೆ ನೀಡಿದರು.  ಬುಧುವಾರದಂದುಜಿಲ್ಲಾಧಿಕಾರಿಗಳ ಕಚೇರಿ ವಿಡಿಯೋಕಾನ್ಪರೆನ್ಸ್ ಹಾಲ್‍ನಲ್ಲಿತಂಬಾಕು ನಿಯಂತ್ರಣಕುರಿತಂತೆಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದಅವರು, ಈಗಾಗಲೇ ಚಿತಾಪೂರತಾಲ್ಲೂಕಿನ ನಾಲ್ಕು ಗ್ರಾಮಗಳಲ್ಲಿ  ತಂಬಾಕು ಮುಕ್ತ ಗ್ರಾಮಎಂದು ಫೋಷಿಸಲಾಗಿದೆ.ಅದರಂತೆಎಲ್ಲಾ ಅಧಿಕಾರಿಗಳು ಸಮನ್ವಯತೆ ಕೆಲಸ ಕಾರ್ಯಗಳನ್ನು ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿಯೊಂದು ತಾಲ್ಲೂಕುಗಳಲ್ಲಿ ಗ್ರಾಮಗಳಲ್ಲಿ ಒಂದುತಂಡವನ್ನು ರಚಿಸಿ ಅಂಗಡಿಗಳಿಗೆ ಹೋಗಿ ಭೇಟಿ ನೀಡಿ ಪರಿಶೀಲಿಸಬೇಕು.ಶಾಲಾಕಾಲೇಜುಗಳಲ್ಲಿ ನಿಬಂಧ,…

Read More

ಆರೋಗ್ಯಕರ ದೇಹಕ್ಕೆ ವ್ಯಾಯಾಮವೇ ಔಷಧಿ

ಕಲಬುರಗಿ: -ನಾವು ದಿನ ನಿತ್ಯ ವ್ಯಾಯಾಮ ಮಾಡುವುದರಿಂದ ನಮ್ಮ ದೇಹದಲ್ಲಿ ಯಾವ ರೋಗವು ಸುಳಿಯುವುದಿಲ್ಲ ಎಂದು ಕಲಬುರಗಿ ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ. ವಿವೇಕಾನಂದ ರೆಡ್ಡಿ ಅವರು ಹೇಳಿದರು. ಬುಧವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಜಿಲ್ಲಾ ಆಸ್ಪತ್ರೆ, ಜಿಮ್ಸ್ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಮ್ಸ್ ಮೆಡಿಕಲ್ ಕಾಲೇಜಿನ ಮೈಕ್ರೋ ಬಯೋಲೋಜಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪಾಶ್ರ್ವವಾಯು ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ…

Read More

ವಾರ್ಡ್ ನಂ.5, 6 ಮತ್ತು 23 ಜೋನ್ ನಂ. 38ಎ ರಲ್ಲಿ ಮ್ಯಾಪಿಂಗ್ (ನೀರು ಸರಬರಾಜು ಕ್ಷೇತ್ರದ) ಸಮೀಕ್ಷೆಗೆ ಚಾಲನೆ

ಕಲಬುರಗಿ  -ವಿಶ್ವಬ್ಯಾಂಕ್ ನೆರವಿನ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆ (ಕುಸ್ಸೆಂಫ್) ಅಡಿಯಲ್ಲಿ ಕಲಬುರಗಿ ನಗರದಲ್ಲಿ 24X7 ನಿರಂತರ ನೀರು ಸರಬರಾಜು ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಬುಧವಾರ ವಾರ್ಡ್ ನಂ.5, 6 ಮತ್ತು 23 ಜೋನ್ ನಂ. 38ಎ ರಲ್ಲಿ ಮ್ಯಾಪಿಂಗ್ ಸಮೀಕ್ಷೆಗೆ ಕಲಬುರಗಿ ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರಾದ ದಿಗಂಬರ ನಾಡಗೌಡ, ಅರುಣಾಬಾಯಿ ಹಾಗೂ ಗಂಗಮ್ಮ, ಬಸವರಾಜ ಮೂನಹಳ್ಳಿ ಅವರು ಮಂಗಳವಾರ ಚಾಲನೆ ನೀಡಿದರು. ಈ ಜೋನ್‍ನಲ್ಲಿ ಮೂನಿಮ್ಮ ಸಂಘ, ಗಾಂಧಿನಗರ, ಸಂಜಯನಗರ, ಭವಾನಿ ನಗರ,…

Read More
error: Content is protected !!