ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿಲ್ಲ ಆದರೆ ಸರಿಯಾದ ಮಾರ್ಗದರ್ಶನ ಅಗತ್ಯವಿದೆ |ಶಶೀಲ್ ಜಿ ನಮೋಶಿ
ಕಲಬುರ್ಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕ ಕ್ಷೇತ್ರದಲ್ಲಿ ಹಿಂದುಳಿದ ಪ್ರದೇಶ ಎಂದು ಹಣೆಪಟ್ಟಿ ಕಟ್ಟಿಕೊಂಡಿದ್ದು, ಈ ಭಾಗದ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಎಂದು ಹಿಂದೆ ಬಿದ್ದಿಲ್ಲ ಆದರೆ ಅವರಿಗೆ ಸರಿಯಾದ ಮಾರ್ಗದರ್ಶನ ಹಾಗೂ ಗುಣಮಟ್ಟದ ಶಿಕ್ಷಣದ ಕೊರತೆ ಇದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಅಭಿಪ್ರಾಯಪಟ್ಟರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಆರ್ ಎಂ ಸಿ ಸ್ಯಾಕ್ ಸಭಾಂಗಣದಲ್ಲಿ ನಡೆದ ಧಾರವಾಡದ ವಿದ್ಯಾ…


