ನ.೮ಕ್ಕೆ‌ ಭಕ್ತ‌ ಶ್ರೇಷ್ಠ ಕನಕದಾಸರ ಜಯಂತಿ ರ‍್ಥಪರ‍್ಣ ಆಚರಣೆ

ಸಕಲ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ ಕಲಬುರಗಿ,  ಸಂತ ಶ್ರೇಷ್ಟ ಕನಕದಾಸರ ಜಯಂತಿ ಕರ‍್ಯಕ್ರಮ ನವೆಂಬರ್ ೮ ರಂದು ಕಲಬುರಗಿ ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಣೆಗೆ ನರ‍್ಧರಿಸಲಾಗಿದ್ದು, ಸಕಲ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೂಚಿಸಿದರು.ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಜಯಂತಿಯ ಪರ‍್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ ೩ ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಜಯಂತಿ ಕರ‍್ಯಕ್ರಮ ಆಚರಿಸಲಾಗುತ್ತದೆ ಎಂದರು. ಜಯಂತಿಗೆ ಶಿಷ್ಟಾಚಾರದಂತೆ…

Read More

ತಂಬಾಕು ಮುಕ್ತ ಯುವ ಅಭಿಯಾನ 3.0 ಕಲ್ಬುರ್ಗಿ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಅಪರ ಜಿಲ್ಲಾಧಿಕಾರಿಗಳು ಶ್ರೀ ರಾಯಪ್ಪ ಹುಣಸಿಗಿ ಕರೆ

ಕಲಬುರಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಕಲ್ಬುರ್ಗಿ ವತಿಯಿಂದ ಅಪರ ಜಿಲ್ಲಾಧಿಕಾರಿಗಳ ರಾಯಪ್ಪ ಹುಣಸಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳ ಸಮನ್ವಯ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆಯಲಾಗಿತ್ತು. ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಮಾರ್ಗದರ್ಶನ ಹಾಗೂ ತಂಬಾಕು ಮುಕ್ತ ಯುವ ಅಭಿಯಾನದ ಕುರಿತು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗುವಂತೆ ಎಲ್ಲಾ ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲು ಸೂಚಿಸಿದರು. ಅಲ್ಲದೆ…

Read More

ಸದೃಢ ಮಾನವ ಸಂಪನ್ಮೂಲ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ ಅನನ್ಯ

ಜೇವರ್ಗಿ ಸರ್ಕಾರಿ ಪಿಯು ಕಾಲೇಜಿನ ೬೭ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಚಿಂತಕ ಪ್ರೊ.ಎಸ್.ಬಿ.ಮಮದಾಪುರ ಅಭಿಮತ ಜೇವರ್ಗಿ ೨೯ : ವಿದ್ಯಾರ್ಥಿಗಳಿಗೆ ಜ್ಞಾನ, ಕೌಶಲ, ಬುದ್ಧಿ, ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ನೀಡಿ, ಅವರನ್ನು ದೇಶದ ಅಮೂಲ್ಯ ಮಾನವ ಸಂಪನ್ಮೂಲವನ್ನಾಗಿಸಲು ಶಿಕ್ಷಣ ಹಾಗೂ ಅದರ ಸಂಸ್ಥೆಗಳು ಅನನ್ಯವಾದ ಪಾತ್ರವನ್ನು ನಿರ್ವಹಿಸುತ್ತವೆ. ದೇಶದ ಎಲ್ಲಾ ಸಮಸ್ಯೆಗಳಿಗೆ ಶಿಕ್ಷಣ ಪರಿಹಾರವಾಗಬಲ್ಲದು ಎಂದು ಜೇವರ್ಗಿಯ ಬಸವೇಶ್ವರ ಬಿ.ಎಡ್ ಕಾಲೇಜಿನ ಪ್ರಾಧ್ಯಾಪಕ, ಚಿಂತಕ ಪ್ರೊ.ಎಸ್.ಬಿ.ಮಮದಾಪುರ ಅಭಿಮತಪಟ್ಟರು. ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ…

Read More

31 ರಂದು ಶ್ರೀ ಆಸ್ಪತ್ರೆ ಉದ್ಘಾಟನೆ

ಕಲಬುರಗಿ: ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ವಾಗಿರುವ ೩೦ ಹಾಸಿಗೆಯುಳ್ಳ ‘ಶ್ರೀ ಆಸ್ಪತ್ರೆ’ಯು ಅ.೩೧ರಂದು ಸಂಜೆ ೫-೩೦ಗಂಟೆಗೆ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಆಸ್ಪತ್ರೆಯ ಚೇರಮನ್‌ರಾದ ಮಕ್ಕಳ ತಜ್ಞರಾದ ಡಾ. ಸಚೀನ ಎಸ್.ಬಿ ಹಾಗೂ ಸ್ರೀ ರೋಗ ತಜ್ಞರಾದ ಡಾ. ಶ್ವೇತಾನಿದಿ ಅವರು ಜಂಟಿಯಾಗಿ ತಿಳಿಸಿದರು. ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಈಜಿ ಬೈ ಹತ್ತಿರ ಶ್ರೀ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪ್ರಾರಂಭದಲ್ಲಿ ೧೦ ಹಾಸಿಗೆ ಉಳ್ಳ ಆಸ್ಪತ್ರೆಯ ಪ್ರಾರಂಬಿಸಿದ ಆಸ್ಪತ್ರೆಯು ಸಾರ್ವಜನಿಕರ…

Read More

ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 29 ಖರೀದಿ ಕೇಂದ್ರ ಆರಂಭ

ಯಾದಗಿರಿ : 2025-26ನೇ ಸಾಲಿನ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಯಾದಗಿರಿ ಜಿಲ್ಲೆಯ ರೈತರಿಂದ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹತ್ತಿ ಮದ್ಯಮ ಎಳೆ ಪ್ರತಿ ಕ್ವಿಂಟಾಲಗೆ 7,710 ರೂ.ಗಳ ಹಾಗೂ ಉದ್ದನೆ ಎಳ 8110 ರೂ.ಗಳಂತೆ ಪ್ರತಿ ಎಕರೆಗೆ 8.5 ಕ್ವಿಂಟಾಲ ಖರೀದಿಸಲು ಭಾರತೀಯ ಹತ್ತಿ ನಿಗಮ ಹುಬ್ಬಳ್ಳಿ ಖರೀದಿ ಏಜೇನ್ಸಿಯಾಗಿ ಯಾದಗಿರಿ ಜಿಲ್ಲೆಗೆ ನೇಮಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಟಾಸ್ಕ್ ಫೋರ್ಸ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಶ್ರೀ…

Read More

ಸಿಂಧಗಿ ಶಾಸಕ  ಕಾರು ಅಫಘಾತ

ವಿಜಯಪುರ : ಸಿಂಧಗಿ ಶಾಸಕ ಆಶೋಕ ಮನಗೂಳಿ ಕಾರು ವಿಜಯಪುರ ಜಿಲ್ಲೆಯ ಸಿಂಧಗಿ ಬೈಪಾಸ ಬಳಿ ಅಫಘಾತವಾಗಿದೆ. ಶಾಸಕರ ಇನ್ನೊವಾ ಕಾರು ಮತ್ತು ಸ್ವಿಫ್ಟ ಕಾರಿನ ನಡುವೆ ಅಪಘಾತ ಸಂಭವಿಸಿದೆ.ಕಾರಿನಲ್ಲಿ ಶಾಸಕ ಮನಗೂಳಿ ಪುತ್ರಿ, ಸಹೋದರನ ಮಗ ಕಾರಿನಲ್ಲಿ ದ್ದರು. ಎರಡು ಕಾರಿನಲ್ಲಿದವರಿಗೆ ಸಣ್ಣಪುಟ್ಟ ಗಾಯಗೊಂಡಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದೆ.

Read More

ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೋಲಿಸ್ ಇಲಾಖೆಯ ಪಾತ್ರ ಬಹಳಷ್ಟು ಪ್ರಮುಖವಾದದ್ದು : ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್

ಕಲಬುರಗಿ : ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೋಲಿಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪಾತ್ರ ಬಹಳಷ್ಟು ಪರಿಣಾಮಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನಮ್ ಅವರು ಹೇಳಿದರು. ಮಂಗಳವಾರದಂದು ಪೊಲೀಸ್ ಹುತಾತ್ಮರ ಸ್ಮಾರಕ ಡಿ.ಎ.ಆರ್ ಮೈದಾನದಲ್ಲಿ ಕಲಬುರಗಿ ನಗರ ಮತ್ತು ಕಲಬುರಗಿ ಜಿಲ್ಲಾ ಪೊಲೀಸ್ ವತಿಯಿಂದ ಕರ್ತವ್ಯ ಪಾಲನೆಯಲ್ಲಿ ಪ್ರಾಣವನ್ನು ಸಮರ್ಪಿಸಿದ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಅರ್ಪಿಸಿ ಮಾತನಾಡಿದರು. ಪ್ರತಿಯೊಂದು ಸರ್ಕಾರದ ಕೆಲಸ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಸಮನ್ವಯತೆಯಿಂದ ಕೆಲಸ ಮಾಡುತ್ತೇವೆ…

Read More

ವಡಗೇರಾ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ:ಒತ್ತಾಯ

ವಡಗೇರಾ: ಸತತವಾಗಿ ಸುರಿದ ಬಾರಿ ಮಳೆಯಿಂದ ತಾಲೂಕಿನ ಕೊನಹಳ್ಳಿ – ಕಂದಳ್ಳಿ ತುಮಕೂರು-ವಡಗೇರಾ ಮತ್ತು ಮಾಚನೂರ -ಬೆಂಡೆಬೆಂಬಳಿ ವಡಗೇರಾ- ಕುರುಕುಂದ-ನಾಯ್ಕಲ್ ಕುರುಕುಂದ ಹಾಗೂ ತಾಲೂಕಿನ ವಿವಿಧ ಗ್ರಾಮಗಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತೀವ್ರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ..ಕೂಡಲೆ ಜಿಲ್ಲಾಡಳಿತ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ್ ಸಾಹುಕಾರ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಗ್ರಾಮೀಣ ಭಾಗದ ಹಲವು ಪ್ರಮುಖ ರಸ್ತೆಗಳು ಮಳೆಯಿಂದ ಸಂಪೂರ್ಣವಾಗಿ ಹದಗೆಟ್ಟಿದ್ದು ಜನಪ್ರತಿನಿಧಿಗಳು…

Read More

ಗಾಂಧಿ ಸ್ಮೃತಿ ~ ಜನ ಜಾಗೃತಿ ಸಮಾವೇಶ: ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಹೇಳಿಕೆ

ರಾಜ್ಯದಲ್ಲಿ ಒಂದು ಲಕ್ಷ 40 ಸಾವಿರ ಜನರನ್ನು ಮದ್ಯಮುಕ್ತ ಮಾಡಿದ ಧರ್ಮಸ್ಥಳದ ಸಾಧನೆ ಪ್ರಶಂಸನೀಯ ಕಲಬುರಗಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಸಹಯೋಗದಲ್ಲಿ ಮದ್ಯ ವರ್ಜನ ಶಿಬಿರ ಹಮ್ಮಿಕೊಂಡು ರಾಜ್ಯದಲ್ಲಿ 1 ಲಕ್ಷ 40ಸಾವಿರ ಜನರನ್ನು ಮದ್ಯ ವ್ಯಸನದಿಂದ ಮುಕ್ತಗೊಳಿಸಿರುವುದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ದೊಡ್ಡ ಸಾಧನೆಯಾಗಿದ್ದು ಅಭಿನಂದನೆಯ ಕಾರ್ಯಕ್ರಮ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾದ ಶರಣಪ್ಪ ಸಲದಾಪುರ ಅಭಿಪ್ರಾಯಪಟ್ಟರು. ಕಲಬುರಗಿಯ ರಾಮತೀರ್ಥದ…

Read More

ಮುತ್ತಗಿ ಗ್ರಾಮದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ಆರೋಪಿಗಳಿಗೆ ಬಂಧಿಸಿ ಕಠಿಣ ಶಿಕ್ಷೆಗೆ ಆಗ್ರಹ: ಲಚ್ಚಪ್ಪ ಜಮಾದಾರ

ಜಗತ್ ವೃತ್ತದಿಂದ ಎಸ್ಪಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ಕಲಬುರಗಿ: ಜಿಲ್ಲೆಯ ಶಹಾಬಾದ ತಾಲೂಕಿನ ಮುತ್ತಗಿ ಗ್ರಾಮದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಅಗ್ರಹಿಸಿ ಎಸ್.ಪಿ ಕಛೇರಿ ಎದುರುಗಡೆ ಕೋಲಿ ಸಮಾಜ ಮುಖಂಡರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ಕೋಲಿ ಕಬ್ಬಲಿಗ ಎಸ್.ಟಿ. ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ ಅವರು ಮಾತನಾಡಿ, ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ಮುತ್ತಗಿ ಗ್ರಾಮದಲ್ಲಿ ಅ 9 ರಂದು ಗುರುವಾರ ತಡರಾತ್ರಿಯಲ್ಲಿ ಶ್ರೀ…

Read More
error: Content is protected !!