ಸಿದ್ಧರಾಮ ಶಿವಯೋಗಿಗಳ ೭೫ ನೇ ಪುಣ್ಯಾರಾಧನೆ
ಜೇವರ್ಗಿ : ತಾಲೂಕಿನ ಶಖಾಪುರ ಎಸ್.ಎ ಗ್ರಾಮದ ಸದ್ಗುರು ವಿಶ್ವಾರಾಧ್ಯ ತಪೋವನ ಮಠದ ಲಿಂ. ಸಿದ್ಧರಾಮ ಶಿವಯೋಗಿಗಳ ೭೫ ನೇ ಪುಣ್ಯಾರಾಧನೆ ಹಾಗೂ ಧಾರ್ಮಿಕ ಸಭೆಯನ್ನು ೧೨ ಭಾನುವಾರದಂದು ಶ್ರೀಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಠದ ಪೀಠಾಧಿಪತಿ ಡಾ. ಸಿದ್ಧರಾಮ ಶಿವಾಚಾರ್ಯರು ತಿಳಿಸಿದ್ದಾರೆ. ಪುಣ್ಯಾರಾಧನೆ ನಿಮಿತ್ತ ಶ್ರೀಮಠದಲ್ಲಿ ನಡೆಯುತ್ತಿರುವ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ೧೦ ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸಲಿದ್ದಾರೆ. ಪ್ರಸಾದಕ್ಕೆ ೩೫ ಕ್ವಿಂಟಲ್ ಜೋಳ ಮತ್ತು ಸಜ್ಜಿ ರೊಟ್ಟಿಗಳನ್ನು…


