ಸಾರಿಗೆ ನೌಕರರು ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ | ಖಡಕ್ ಎಚ್ಚರಿಕೆ

ಬೆಂಗಳೂರು : ಸಾರಿಗೆ ನೌಕರರು ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ ಎಂದು ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ ವತಿಯಿಂದ ಖಡಕ್ ಎಚ್ಚರಿಕೆ ನೀಡಲಾಗಿದೆ. ಹಾಗೂ ಮುಷ್ಕರಕ್ಕೆ ಬೆಂಬಲವನ್ನ ಕೂಡ ಸೂಚಿಸುವಂತಿಲ್ಲ ಬೆಂಗಳೂರು ಚಲೋದಲ್ಲಿ ಭಾಗಿಯಾಗದಂತೆ ಎಚ್ಚರಿಕೆಯನ್ನ ಕೊಡಲಾಗಿದೆ ಗುರುವಾರರಂದು ಬೆಂಗಳೂರು ಚಲೋಗೆ ಕರೆಯನ್ನು ನೀಡಲಾಗಿದ್ದು, ಡ್ಯೂಟಿಗೆ ಬಂದಿಲ್ಲ ಅಂದ್ರೆ ನೋ ವರ್ಕ್ ನೋ ಪೇ ಅಂತ ಆದೇಶ ಮಾಡಿದೆ. 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ 11/ 2020 ರಿಂದ 2023, 2024, ರಿಂದ ನಾಲ್ಕು ವರ್ಷಗಳ ವೇತನ…

Read More

ಬೆಂಗಳೂರಿನಲ್ಲಿ 55.88 ಕೋಟಿ ಮೌಲ್ಯದ ಡ್ರಗ್ಸ್ ಸೀಜ್

ಬೆಂಗಳೂರು : ಬೆಂಗಳೂರಿನಲ್ಲಿ ಮಹಾರಾಷ್ಟ್ರದ ANTF ತಂಡದಿಂದ ದಾಳಿ ಮಾಡಿ ಡ್ರಗ್ಸ್ ಸೀಜ್ ಮಾಡಲಾಗಿದೆ. ಮಹಾರಾಷ್ಟ್ರ ಮಾದಕ ವಸ್ತು ನಿಗ್ರಹ ದಳ 55.88 ಕೋಟಿ ರೂ. ಮೌಲ್ಯದ ಎಂಜಿ ಸಿಂಥೆಟಿಕ್ ಡ್ರಗ್ಸ್ ವನ್ನು ಜಪ್ತಿ ಮಾಡಿ, ಕೋಟಿ ಕೋಟಿ ಮೌಲ್ಯದ ಡ್ರಗ್ಸ್ ಜೊತೆಗೆ ನಾಲ್ವರನ್ನ ಬಂಧಿಸಲಾಗಿದೆ. ಬೆಂಗಳೂರಿನ ಮೂರು ಕಡೆ ಇದ್ದಂತಹ ಡ್ರಗ್ಸ್ ಸೀಜ್ ಮಾಡಲಾಗಿದ್ದು, ದೇಶದ ಅನೇಕ ರಾಜ್ಯಗಳಿಗೆ ಡ್ರಗ್ಸ್ ಸಪ್ಲೈ ಆಗ್ತಾ ಇರುವಂತಹ ಶಂಕೆ, ಬಂಧಿತರನ್ನ ವಿಚಾರಣೆ ಮಾಡುತ್ತಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೇ ಇಷ್ಟು…

Read More

ರದ್ದಾದ ವಿಮಾನಯಾನ ಸಂಚಾರ ಪುನಃ ಪ್ರಾರಂಭಿಸುವಂತೆ ಕೇಂದ್ರಕ್ಕೆ ಸಂಸದ ರಾಧಾಕೃಷ್ಣ ದೊಡ್ಡಮನಿ ಪತ್ರ

ಕಲಬುರಗಿ : ವಿಮಾನ ನಿಲ್ದಾಣವನ್ನು ಪ್ರಾದೇಶಿಕ ಸಂಪರ್ಕ ಯೋಜನೆಯಡಿಯಲ್ಲಿ ಸೇರ್ಪಡಿಸುವುದು ಸೇರಿದಂತೆ ರದ್ದಾದ ವಿಮಾನಯಾನ ಸಂಚಾರ ಪುನಃ ಪ್ರಾರಂಭಿಸುವಂತೆ ಕೇಂದ್ರಕ್ಕೆ ಸಂಸದ ರಾಧಾಕೃಷ್ಣ ದೊಡ್ಡಮನಿ ಪತ್ರ ಮೂಲಕ ಮನವಿ ಸಲ್ಲಿಸಿದ್ದಾರೆ. ಕರ್ನಾಟಕದ ಕಲಬುರಗಿ (ಗುಲ್ಬರ್ಗ) ವಿಮಾನ ನಿಲ್ದಾಣವನ್ನು ಪ್ರಾದೇಶಿಕ ಸಂಪರ್ಕ ಯೋಜನೆ (RCS-UDAN) ಅಡಿಯಲ್ಲಿ ಆದ್ಯತೆಯ ಆಧಾರದ ಮೇಲೆ ಸೇರಿಸುವಂತೆ ಹಾಗೂ ರದ್ದಾದ ವಿಮಾನ ಸಂಚಾರವನ್ನು ಪುನಃ ಪ್ರಾರಂಭಿಸುವಂತೆ ಕೇಂದ್ರ ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ಕಿಂಜಾರಪು ಅವರಿಗೆ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಪತ್ರ…

Read More

ರಾಜ್ಯದ 1310 ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೆ ʼಕಾಯಕ ಗ್ರಾಮʼ : ಸಚಿವ ಪ್ರಿಯಾಂಕ್‌ ಖರ್ಗೆ ಅವರಿಂದ ಚಾಲನೆ:

ಬೆಂಗಳೂರು : 2025ನೆ ಅಕ್ಟೋಬರ್ 30 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ವಿಭಾಗವು ಪಂಚತಂತ್ರ 2.0 ತಂತ್ರಾಂಶದಲ್ಲಿ ಗ್ರಾಮ ಪಂಚಾಯತ್ ಕಾರ್ಯಕ್ಷಮತೆ ಶ್ರೇಯಾಂಕ ವರದಿಯಲ್ಲಿ ಗುರುತಿಸುವಂತೆ ಕೊನೆಯ ಸ್ಥಾನಗಳಲ್ಲಿರುವ ಗ್ರಾಮ ಪಂಚಾಯತಿಗಳನ್ನು ವೈಜ್ಞಾನಿಕವಾಗಿ ಆಯ್ಕೆ ಮಾಡಿಕೊಂಡು ಅಂತಹ ಗ್ರಾಮ ಪಂಚಾಯತಿಗಳ ಸಮರ್ಪಕ ಹಾಗೂ ನಿಗದಿತವಾಗಿ ಪರಿವೀಕ್ಷಣೆ ಮಾಡುವುದು, ಮಾರ್ಗದರ್ಶನ ನೀಡುವುದಲ್ಲದೆ ವಿವಿಧ ಅಭಿವೃದ್ಧಿ ಇಲಾಖೆಗಳ ಸಮನ್ವಯ ಕಾರ್ಯಕೈಗೊಂಡು ಗ್ರಾಮ ಪಂಚಾಯತಿಗಳ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ಜವಾಬ್ದಾರಿಯನ್ನುತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಅಧಿಕಾರಿಗಳು ವಹಿಸಿಕೊಳ್ಳುವ…

Read More

3 ಕೋಟಿ ಮೌಲ್ಯದ 1900 ಮೊಬೈಲ್‌ಗಳು ಖಾಕಿ ವ಼ಶಕ್ಕೆ | ಆರು ಜನ ಆರೋಪಿಗಳ ಬಂಧನ

ಬೆಂಗಳೂರು ; ಬೆಂಗಳೂರು ಪೊಲೀಸರು ಬೃಹತ್‌ ಬೇಟೆ ಆಡಿದ್ದಾರೆ, ನಗರದ್ಯಂತ ಕಳ್ಳವುವಾದ ಮತ್ತು ಸಾವ೯ಜನಿಕರು ಕಳೆದುಕೊಂಡಿದ್ದ, 3 ಕೋಟಿ ಮೌಲ್ಯದ 1900 ಮೊಬೈಲಗಳನ್ನು ವಶಕ್ಕೆ ತೆಗೆದುಕೊಂಡು ಆರು ಜನ ಖದೀಮರನ್ನು ಬಂಧಿಸಿವುದರಲ್ಲಿ ಬೆಂಗಳೂರು ನಗರ ಪೊಲೀಸ್‌ ಯಶ್ವಸಿಯಾಗಿದ್ದಾರೆ. ಸಾವ೯ಜನಿಕರು ಕಳ್ಳದುಕೊಂಡ ಮೊಬೈಲಗಳನ್ನು ಇಂದು ನಗರ ಪೋಲಿಸ್‌ ಆಯುಕ್ತ ಕಚೇರಿಯಲ್ಲಿ ಮೂಲ ಮಾಲೀಕರಿಗೆ ಮೊಬೈಲ ವಾಪಸ್‌ ನೀಡಲಾಯಿತು. ಬಂಧಿಸಿದ ಆರು ಜನ ಆರೋಪಿಗಳು ಒಟ್ಟಿಗೆ ಬಸ್‌ ಹತ್ತಿ, ಸಾವ೯ಜನಿಕರ ಗಮನವನ್ನು ಬೇರೆ ಕಡೆ ಸೆಳೆದು ಮೊಬೈಲಗಳನ್ನು ಕಳ್ಳತನ ಮಾಡುತ್ತಿದ್ದರು…

Read More

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಇಂದಿನಿಂದ ಎಸ್ಕಾಟ್೯ ನೀಡಿರುವ ಗೃಹ ಇಲಾಖೆ

ಬೆಂಗಳೂರು : ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದು,ರಾಜ್ಯ ಸರ್ಕಾರ ಬೆಂಗಾವಲು ಪಡೆ ವಾಹನ ನೀಡಲಾಗಿದೆ. ಇಂದಿನಿಂದ ಎಸ್ಕಾಟ್೯ ನೀಡಿರುವ ಗೃಹ ಇಲಾಖೆ, ಗುಪ್ತಚರ ಇಲಾಖೆ ಮಾಹಿತಿಯಂತೆ ಬೆಂಗಾವಲು ವಾಹನ ನೀಡಿದೆ. ಬೆದರಿಕೆ‌ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಡಿಜಿ ಅವರಿಗೆ ದೂರ ನೀಡಿದರು. ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ ಎಸ್ ಎಸ್ ವಿರುದ್ದ ಕೀಡಿಕಾರಿದರು ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದರು. ಆರ್ ಎಸ್ ಎಸ್…

Read More

5 ವರ್ಷ CM ಯಾರು ಅನ್ನೋಂದು ಹೈಕಮಾಂಡ ತೀರ್ಮಾನ ಮಾಡುತ್ತಾರೆ | ಎಂ.ಬಿ ಪಾಟೀಲ

ಬೆಂಗಳೂರು : ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯನವರು ಮುಂದುವರಿಯುವುದು ಅಥವಾ ಬೇರೆ ಯಾರೇ ಮುಖ್ಯಮಂತ್ರಿ ಆಗುವುದು ಕಾಂಗ್ರೆಸ್ ಹೈಕಮಾಂಡ ಕೈಯಲ್ಲಿ ಹೊರತು ಸಚಿವ ಜಮೀರ ಅಹ್ಮದ ಖಾನ್ ಅಥವಾ ನನ್ನ ಕೈಯಲ್ಲಿ ಇಲ್ಲ ಎಂದು ಸಚಿವ ಎಂಬಿ ಪಾಟೀಲ ಅವರು ಹೇಳಿದರು. ಅವರು ಸುದ್ದಿಗಾರರೊಂದಿಗೆ ಮಾತನಾಡಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟವಾಗಿ ಹೇಳಿದ್ದಾರೆ ನಮ್ಮಲ್ಲಿ‌ ಹೈಕಮಾಂಡ ನಿರ್ಧಾರವೇ ಅಂತಿಮ ತೀರ್ಮಾನ, ಹೈಕಮಾಂಡ ಏನು ಹೇಳುತ್ತೆ, ಅದೇ ನಡೆಯುತ್ತೆ,ಗ್ಯಾರಂಟಿ ವಿಚಾರದಲ್ಲಿ ಪ್ರತಿಪಕ್ಷದ ಟೀಕೆಗೆ ಉತ್ತರಿಸಿದ ಅವರು, ಮಾಜಿ ಪ್ರಧಾನಿ ದೇವೆಗೌಡ್ರು ಪ್ರಧಾನಿ…

Read More

ಮಳೆ ಹಾಗೂ ಪ್ರವಾಹ ಹಿನ್ನೆಲೆ ಸೂಕ್ತ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ.

ಕಲಬುರಗಿ ಜಿಲ್ಲೆಯಲ್ಲಿ ಸೆಪ್ಟೆಂಬರ ತಿಂಗಳಲ್ಲಿ ಶೇ. 63 ರಷ್ಟು ಹೆಚ್ಚು ಮಳೆ ತುರ್ತು ಪರಿಹಾರ, ಮುಂಜಾಗರೂಕತ ಕ್ರಮ ತೆಗೆದುಕೊಳ್ಳಲು ಸಚಿವರು ಸೂಚನೆ ನೀಡಿದ್ದಾರೆ. ಅತಿವೃಷ್ಟಿ ಹಾಗೂ ಪ್ರವಾಹದಂತಹ ಆಕಸ್ಮಿಕಗಳು ಸಂಭವಿಸಿದ ಸಂದರ್ಭಗಳಲ್ಲಿ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಿ, ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಹಾಗೂ ತಾತ್ಕಾಲಿಕ ವಸತಿ, ಆಹಾರ ಸರಬರಾಜು ಸೌಲಭ್ಯಗಳನ್ನು ಕೂಡಲೇ ಒದಗಿಸಲು ನಿರ್ಧರಿಸಬೇಕು ಎಂದು ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ 2025ರ ಆಗಸ್ಟ್ ತಿಂಗಳಲ್ಲಿ ಶೇ. 69…

Read More

2025ನೇ ಸಾಲಿನ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ – ಕರ್ನಾಟಕ”ಕ್ಕೆ ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾ ಆಯ್ಕೆ

ಬೆಂಗಳೂರು : ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ. ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ– ಕರ್ನಾಟಕ ಕ್ಕೆ ಕರ್ನಾಟಕ ಸರ್ಕಾರ ಆಯ್ಕೆ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರತಿ ವರ್ಷ ನೀಡಲಾಗುವ ಈ ಗೌರವಾನ್ವಿತ ಪ್ರಶಸ್ತಿಯನ್ನು, ಗಾಂಧೀಜಿಯವರ ಜೀವನ ಮೌಲ್ಯಗಳನ್ನು ಸಮಾಜದಲ್ಲಿ ಹರಡಲು ಮಹತ್ತರ ಕೊಡುಗೆ ನೀಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಪ್ರದಾನ ಮಾಡಲಾಗುತ್ತದೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ, ಜನಸಾಮಾನ್ಯರು,…

Read More

ಪ್ರತಿ ಹೆಕ್ಟೇರ್‌ಗೆ ರಾಜ್ಯ ಸರ್ಕಾರದಿಂದ 8,500 ರೂ. ಹೆಚ್ಚುವರಿ ಪರಿಹಾರ : ಸಿದ್ದರಾಮಯ್ಯ

ರಾಜ್ಯದಾದ್ಯಂತ ಅತಿವೃಷ್ಠಿಯಿಂದ 10 ಲಕ್ಷ ಹೆಕ್ಟೇರಿಗೂ ಹೆಚ್ಚು ಬೆಳೆ ಹಾನಿ ಕಲಬುರಗಿ : ರಾಜ್ಯದಾದ್ಯಂತ ಪ್ರಸಕ್ತ ಸಾಲಿನ ಜೂನ್ ಮಾಹೆಯಿಂದ ಇಲ್ಲಿಯ ವರೆಗೆ ಅತಿವೃಷ್ಠಿ ಮತ್ತು ವ್ಯಾಪಕ ಮಳೆಯಿಂದ ಪ್ರಾಥಮಿಕ ವರದಿ ಪ್ರಕಾರ 10 ಲಕ್ಷಕ್ಕೂ ಹೆಚ್ಚಿನ ಹೆಕ್ಟೇರ್ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ಎನ್.ಡಿ.ಆರ್.ಎಫ್. ಪರಿಹಾರದ ಜೊತೆಗೆ ಪ್ರತಿ ಹೆಕ್ಟೇರ್‌ಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 8,500 ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ…

Read More
error: Content is protected !!