ಅತಿವೃಷ್ಟಿಯಿಂದಾದ ತೊಗರಿ ಸೇರಿದಂತೆ ಮುಂಗಾರು ಬೆಳೆ ಹಾನಿಗೆ ಎಕರೆಗೆ 25 ಸಾವಿರ ನೀಡಲು ಅಂಬಾರಾಯ ಅಷ್ಠಗಿ‌| ಆಗ್ರಹ

ಕಲಬುರಗಿ : ಅತಿವೃಷ್ಟಿಯಿಂದಾದ ತೊಗರಿ ಸೇರಿದಂತೆ ಮುಂಗಾರು ಬೆಳೆ ಹಾನಿಗೆ ಎಕರೆಗೆ 25,000 ಸಾವಿರ ರೂ.ಗಳ ಪರಿಹಾರ ನೀಡಲು ಮುಖಂಡ ಅಂಬಾರಾಯ ಅಷ್ಠಗಿ‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು

ಅವರು ನಗರದ ಪತ್ರಿಕಾ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಗಸ್ಟ್ ತಿಂಗಳನಲ್ಲಿ, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮುಂಗಾರು ಬೆಳೆಗಳಾದ, ತೋಗರಿ, ಹೆಸರು, ಉದ್ದು, ಸೋಯಾಬೀನ್, ಎಳ್ಳು, ಹತ್ತಿ, ಸೇರಿದಂತೆ ಇನ್ನೂ ಅನೇಕ ಬೆಳೆಗಳು ಇತ್ತಿಚಿನ ಭೀಕರ ಮಳೆಗೆ ಸಂಪೂರ್ಣ ನಾಶವಾಗಿವೆ. ಸುಮಾರು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಸೇರಿದಂತೆ ಇತರೆ ಬೆಳೆಗಳನ್ನು ಬಿತ್ತಲಾಗಿತ್ತು ಇವುಗಳು ಮಳೆಗೆ ನಾಶವಾಗಿವೆ. ಈ ಬಗ್ಗೆ ಸರ್ಕಾರ ಗಮನಹರಿಸಿ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

Leave a Reply

Your email address will not be published. Required fields are marked *

error: Content is protected !!