ಸುರಪುರ: ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೮ನೇ ಜನ್ಮದಿನ ಅಂಗವಾಗಿ ಜಿಲ್ಲಾ ಪಂಚಾಯತಿ ಯಾದಗಿರಿ,ತಾಲೂಕ ಪಂಚಾಯತಿ ಸುರಪುರ/ಹುಣಸಗಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸುರಪುರ ಮತ್ತು ವಿವಿಧ ಶಿಕ್ಷಕರ ಸಂಘಗಳ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ಆಚರಿಸಲಾಯಿತು.
ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಭದ್ರ ಬುನಾದಿ ಹಾಕಬೇಕು-ಶಾಸಕ ಆರ್.ವಿ.ನಾಯಕ


